ಸ್ಯಾಂಟ್ರೋ ರವಿ ಕೇಸ್‌: ಕಾಟನ್‌ಪೇಟೆ ಠಾಣೆ ಈ ಹಿಂದಿನ ಪೊಲೀಸ್ ಇನ್ಸ್ ಪೆಕ್ಟರ್ ತಲೆದಂಡ?

ಪ್ಯಾಂಟ್‌ನಲ್ಲಿದ್ದ 9 ಸಾವಿರ ರೂ. ನಗದು ಕಸಿದುಕೊಂಡು ಪರಾರಿಯಾಗಿದ್ದ

Team Udayavani, Jan 10, 2023, 12:09 PM IST

ಸ್ಯಾಂಟ್ರೋ ರವಿ ಕೇಸ್‌: ಕಾಟನ್‌ಪೇಟೆ ಠಾಣೆ ಈ ಹಿಂದಿನ ಪಿಐ ತಲೆದಂಡ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ಅಲಿಯಾಸ್‌ ಮಂಜುನಾಥ್‌ ಗೆ ಸಹಕಾರ ನೀಡಿದ್ದ ಕಾಟನ್‌ಪೇಟೆ ಪೊಲೀಸ್‌ ಠಾಣೆಯ ಇನ್‌ ಸ್ಪೆಕ್ಟರ್‌ ಪ್ರವೀಣ್‌ ವಿರುದ್ಧ ಇಲಾಖಾ ತನಿಖೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ, ವರದಿಯನ್ನು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿಗೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪತಿ ಸ್ಯಾಂಟ್ರೋ ರವಿ ಸಹಕಾರದಿಂದ ತನ್ನ ವಿರುದ್ಧ ಕಾಟನ್‌ಪೇಟೆ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ರವಿ ಪತ್ನಿ ಮೈಸೂರಿನ ವಿಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಕಾಟನ್‌ಪೇಟೆ ಠಾಣೆಯ ಈ ಹಿಂದಿನ ಠಾಣಾಧಿಕಾರಿ ಪ್ರವೀಣ್‌ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಡಿಸಿಪಿ ಲಕ್ಷ್ಮಣ್‌ ನಿಂಬರಗಿಗೆ ಸೂಚಿಸಲಾಗಿತ್ತು.

ಈ ಸಂಬಂಧ ಖುದ್ದು ತನಿಖೆ ನಡೆಸಿರುವ ಪಶ್ಚಿಮ ವಿಭಾಗದ ಡಿಸಿಪಿ, ಕೃತ್ಯ ನಡೆದ ಸ್ಥಳದಲ್ಲಿ ರಶ್ಮಿ ಹಾಗೂ ನಯನ ಇರಲಿಲ್ಲ. ಆದರೆ, ಇರುವಂತೆ ಸಾಬೀತುಪಡಿಸಲು ಸ್ಯಾಂಟ್ರೋ ರವಿಯೇ ತನ್ನ ಕೆಲಸಗಾರ ಶೇಕ್‌ ಜತೆಯಲ್ಲಿ ರಶ್ಮಿ ಹಾಗೂ ನಯನಾಳ ಮೊಬೈಲ್‌ ಕೊಟ್ಟು ಕಳುಹಿಸಿದ್ದ. ಸೂಕ್ತ ತನಿಖೆ ನಡೆಸದೇ ಕಾಟನ್‌ ಪೇಟೆ ಠಾಣಾಧಿಕಾರಿ ಪ್ರವೀಣ್‌ ಸುಳ್ಳು ಎಫ್ಐಆರ್‌ ದಾಖಲಿಸಿದ್ದಾರೆ.

ಈ ಮೂಲಕ ಕರ್ತವ್ಯಲೋಪ ಎಸಗಿದ್ದಾರೆ ಎಂದು ವರದಿ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಇನ್‌ಸ್ಪೆಕ್ಟರ್‌ ಪ್ರವೀಣ್‌ ತಲೆದಂಡ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

2022ರ ನವೆಂಬರ್‌ 24ರಂದು ಪ್ರಕಾಶ್‌ ಎಂಬುವರು ನೀಡಿದ್ದ ದೂರಿನನ್ವಯ ಕಾಟನ್‌ ಪೇಟೆ ಠಾಣೆಯಲ್ಲಿ ರಶ್ಮಿ, ನಯನ ಹಾಗೂ ಶೇಕ್‌ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು. “ನನ್ನಿಂದ ಮೂರು ತಿಂಗಳ ಅವಧಿಗೆ ಐದು ಲಕ್ಷ ರೂಪಾಯಿ ಪಡೆದಿದ್ದ ರಶ್ಮಿ, ನ. 23 ರಂದು ಸಂಜೆ 6 ಗಂಟೆಗೆ ಹಿಂತಿರುಗಿಸುವುದಾಗಿ ಕಾಟನ್‌ ಪೇಟೆಯ ಖೋಡೆ ಸರ್ಕಲ್‌ ಬಳಿ ಕರೆಸಿಕೊಂಡಿದ್ದರು.

ಈ ವೇಳೆ ರಶ್ಮಿ ಜತೆಗಿದ್ದ ಶೇಕ್‌ ತನ್ನನ್ನು ಹಿಡಿದುಕೊಂಡಿದ್ದ. ಆಗ ರಶ್ಮಿ ತನ್ನ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿದ್ದಳು. ಆಕೆ ಜತೆಗಿದ್ದ ನಯನಾ ತನ್ನ ಕತ್ತಿನಲ್ಲಿದ್ದ ಚಿನ್ನದ ಸರ, ಪ್ಯಾಂಟ್‌ನಲ್ಲಿದ್ದ 9 ಸಾವಿರ ರೂ. ನಗದು ಕಸಿದುಕೊಂಡು ಪರಾರಿಯಾಗಿದ್ದ’ ಎಂದು ಪ್ರಕಾಶ್‌ ದೂರು ನೀಡಿದ್ದರು. ಈ ಸಂಬಂಧ ಪಿಐ ಪ್ರವೀಣ್‌ ಸುಳ್ಳು ಎಫ್ಐಆರ್‌ ದಾಖಲಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಫ್ಲ್ಯಾಟ್‌ಗಳ ಮೇಲೆ ದಾಳಿ: ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮೈಸೂರು ಪೊಲೀಸರು ಸೋಮವಾರ ಬೆಳಗ್ಗೆಯಿಂದ ಸಂಜೆವರೆಗೂ ಸ್ಯಾಂಟ್ರೋ ರವಿ ವಾಸ ಮತ್ತು ವ್ಯವಹಾರ ನಡೆಸಿದ್ದ ಮೂರು ಫ್ಲ್ಯಾಟ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಶೇಷಾದ್ರಿಪುರಂ, ಟ್ರಿನಿಟಿ ಮತ್ತು ಬಸವನಗುಡಿಯಲ್ಲಿ ರುವ ಮೂರು ಫ್ಲ್ಯಾಟ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಆದರೆ, ಮೂರು ಫ್ಲ್ಯಾಟ್‌ಗಳನ್ನು ಆರೋಪಿ 2-3 ತಿಂಗಳ ಹಿಂದೆಯೇ ಖಾಲಿ ಮಾಡಿಕೊಂಡು ಹೋಗಿದ್ದಾನೆ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.