ರಾಜ್ಯದಲ್ಲಿ ಇನ್ನೂ 2 ದಿನ ಚಳಿ; ಕನಿಷ್ಠ ಉಷ್ಣಾಂಶ 5-6 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆ
Team Udayavani, Jan 11, 2023, 6:55 AM IST
ಬೆಂಗಳೂರು: ರಾಜ್ಯದಲ್ಲಿ 2 ದಿನಗಳ ಕಾಲ ಚಳಿ ಮುಂದುವರಿಯಲಿದ್ದು, ಕೆಲ ಕಡೆ ಸಾಮಾನ್ಯಕ್ಕಿಂತ 5 ರಿಂದ 6 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳ ಕಾಲ ಕನಿಷ್ಠ ಉಷ್ಣಾಂಶವು ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಸಾಮಾನ್ಯಕ್ಕಿಂತ 5-6 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಶೀತ ಮಾರುತಗಳು ಬೀಸಲಿದ್ದು, ಕರಾವಳಿ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು ಮುಸುಕಲಿದ್ದು, ಗರಿಷ್ಠ 27 ಹಾಗೂ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ ಬಾಗಲಕೋಟೆ 5.6, ವಿಜಯಪುರದಲ್ಲಿ 7, ಬಿದರ್ 7.5, ರಾಯಚೂರು 11.6, ಮಡಿಕೇರಿ 10.3, ಬೆಳಗಾವಿ 10.4, ಬೆಂಗಳೂರು 12.6, ಕಲಬುರಗಿ 13.5, ಹಂಪಿ 12.5, ಮಂಗಳೂರು 20.2 ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉಷ್ಣಾಂಶದಲ್ಲಿ ಭಾರೀ ಕುಸಿತ
ಮಂಗಳವಾರ ಬಾಗಲಕೋಟೆ ಯಲ್ಲಿ ರಾಜ್ಯದ ಅತೀ ಕನಿಷ್ಠ 5.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ವಿಜಯಪುರದಲ್ಲಿ 7, ಬೀದರ್ 7.5, ಬೆಳಗಾವಿ 10.4, ರಾಯಚೂರು 11.6, ಬೆಂಗಳೂರು 12.6, ಕಲಬುರಗಿ 13.5, ಹಂಪಿ 12.5 ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಕಳೆದ ವರ್ಷ ಇದೇ ದಿನ ಬೆಳಗಾವಿಯಲ್ಲಿ ರಾಜ್ಯದ ಅತೀ ಕನಿಷ್ಠ ಉಷ್ಣಾಂಶ 11.1 ಡಿಗ್ರಿ ಸೆ. ಇತ್ತು.
ಸಾಮಾನ್ಯವಾಗಿ ನವೆಂಬರ್ ಕೊನೆಯ ವಾರ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಆರಂಭವಾಗುವ ಚಳಿಗಾಲ ಫೆಬ್ರವರಿಯ ವರೆಗೆ ಇರಲಿದೆ. ಆದರೆ ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ತಡವಾಗಿ ಚಳಿ ಪ್ರಾರಂಭವಾಗಿದೆ.
ಸದ್ಯ ಉತ್ತರ ಭಾರತದಿಂದ ದಕ್ಷಿಣ ಭಾರತದ ಕಡೆಗೆ ಶೀತಗಾಳಿ ಬೀಸ ಲಾರಂಭಿಸಿದ್ದು, ತೀವ್ರ ಚಳಿಯ ಅನುಭವ ಉಂಟಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!