ಸಾಣೂರು-ಮುರತ್ತಂಗಡಿ ಸೊಸೈಟಿನಲ್ಲಿ ಕಳ್ಳತನಕ್ಕೆ ವಿಫಲ ಯತ್ನ
Team Udayavani, Jan 10, 2023, 11:46 PM IST
ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು-ಮುರತ್ತಂಗಡಿ ವ್ಯವಸಾಯಿಕ ಸಹಕಾರಿ ಸಂಘದ ಕಚೇರಿಗೆ ನುಗ್ಗಿ ಕಳ್ಳತನಕ್ಕೆ ಯತ್ನ ನಡೆಸಿದ ಘಟನೆ ಜ. 9ರಂದು ನಡೆದಿದೆ.
ಕಚೇರಿ ಸೋಮವಾರ ಎಂದಿನಂತೆ ಸಂಜೆವರೆಗೂ ಕಾರ್ಯಾಚರಿಸಿದೆ. ಸಂಜೆ ವೇಳೆಗೆ ಸಿಬಂದಿ ಮನೆಗೆ ತೆರಳಿದ್ದು ರಾತ್ರಿ ವೇಳೆ ಕಳ್ಳರು ಕಚೇರಿಯ ಕಿಟಿಕಿಗೆ ಅಳವಡಿಸಿದ್ದ ಕಬ್ಬಣಿದ ಸರಳುಗಳನ್ನು ತುಂಡರಿಸಿ ಒಳನುಗ್ಗಿದ್ದಾರೆ. ಕಚೇರಿ ವ್ಯಾಪ್ತಿಯಲ್ಲಿ 11 ಕಡೆ ಅಳವಡಿಸಿದ್ದ ಸಿಸಿ ಕೆಮರಾಗಳನ್ನು ಹಾನಿಗೊಳಿಸಿದ್ದಾರೆ.
ಕಚೇರಿಯ ಒಳಗೆ ದಾಖಲು ಪತ್ರಗಳೆಲ್ಲ ಚೆಲ್ಲಪಿಲ್ಲಿಯಾಗಿ ಬಿದ್ದಿವೆ. ಲಾಕರ್ ಒಡೆಯಲು ಯತ್ನಿಸಿದ್ದರೂ ಸಾಧ್ಯವಾಗಲಿಲ್ಲ. ಜ.10ರಂದು ಬೆಳಗ್ಗೆ ಬಾಗಿಲು ತೆರೆದ ವೇಳೆ ಘಟನೆ ಬೆಳಕಿಗೆ ಬಂದಿದೆ. ನಗದು, ಆಭರಣ ಇತ್ಯಾದಿಗಳು ಕಳ್ಳತನಗಳಾಗಿಲ್ಲ, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಪೊಲೀಸ್ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಯಿಸಿ ಶೋಧಿಸಲಾಯಿತು. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು
Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು
Udupi ಟೆಸ್ಟ್ ಡ್ರೈವ್ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ
Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ