ಕಾಂಗ್ರೆಸ್ 50 ಪರ್ಸೆಂಟ್ ಸರಕಾರ: ದಾಖಲೆ ಬಿಡುಗಡೆ ಮಾಡಿದ ಬಿಜೆಪಿ
Team Udayavani, Jan 12, 2023, 6:25 AM IST
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ 50 ಪರ್ಸೆಂಟ್ ಕಮಿಷನ್ ದಂಧೆ ನಡೆಸಿತ್ತು ಎಂದು ಆರೋಪಿಸಿರುವ ಬಿಜೆಪಿ, ಇದಕ್ಕೆ ಸಂಬಂಧಪಟ್ಟಂತೆ ಬುಧವಾರ ದಾಖಲೆ ಬಿಡುಗಡೆ ಮಾಡಿದೆ.
ಪತ್ರಿಕಾಗೋಷ್ಠಿàಯಲ್ಲಿ ದಾಖಲೆ ಬಿಡುಗಡೆ ಮಾಡಿದ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಗರೋತ್ಥಾನ ಯೋಜನೆಯ ಟೆಂಡರ್ ಶ್ಯೂರ್ ರಸ್ತೆ ಕಾಮಗಾರಿಗಳಲ್ಲಿ ಶೇ.50ಕ್ಕೂ ಮೀರಿ ಪರ್ಸೆಂಟೇಜ್ ದಂಧೆ ನಡೆಸಿದೆ ಎಂದು ಆರೋಪಿಸಿದರು.
2017-18ರಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 9 ಕಿ.ಮೀ. ಉದ್ದದ ಟೆಂಡರ್ ಶ್ಯೂರ್ ರಸ್ತೆ ನಿರ್ಮಾಣಕ್ಕೆ ಆರಂಭದಲ್ಲಿ 75.01 ಕೋಟಿ ರೂ. ಟೆಂಡರ್ ಕರೆಯಲಾಗಿತ್ತು. ಆ ಬಳಿಕ ಇದನ್ನು 115.33 ಕೋಟಿ ರೂ.ಗೆ ಹೆಚ್ಚಿಸಿದ್ದರು. ಟೆಂಡರ್ ಪ್ರೀಮಿಯಂನನ್ನು ಶೇ.53.86ರಷ್ಟು ಹೆಚ್ಚಿಸಿದ್ದರು.
7.59 ಕಿ.ಮೀ. ಉದ್ದರ ರಸ್ತೆ ನಿರ್ಮಾಣಕ್ಕೆ ಮೊದಲು 58.45 ಕೋಟಿ ರೂ. ನಿಗದಿ ಮಾಡಿ ಬಳಿಕ 86.46 ಕೋ. ರೂ.ಗೆ ಹೆಚ್ಚಳ ಮಾಡಿದ್ದರು. ಇದರಲ್ಲಿ ಟೆಂಡರ್ ಪ್ರೀಮಿಯಂ ಶೇ.47.89ರಷ್ಟು ಹೆಚ್ಚಿತ್ತು. ಯಾವ ಉದ್ದೇಶಕ್ಕಾಗಿ ಅಂದಿನ ಸರಕಾರ ಟೆಂಡರ್ ಪ್ರೀಮಿಯಂ ಹೆಚ್ಚಿಸಿತ್ತು ಎಂಬ ಬಗ್ಗೆ ಉತ್ತರಿಸಬೇಕು. ಕಾಂಗ್ರೆಸ್ನವರದ್ದು 50 ಪರ್ಸೆಂಟ್ ಸರಕಾರವಾಗಿತ್ತು ಎಂದು ದೂರಿದರು.
ಉಗ್ರರಿಗೆ ಸರ್ಟಿಫಿಕೇಟ್ ಕೊಡುವ ಯಾತ್ರೆ
ಬೆಂಗಳೂರು: ಕಾಂಗ್ರೆಸ್ ಬಸ್ ಯಾತ್ರೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಬಿಜೆಪಿ “ಇದು ಉಗ್ರರಿಗೆ, ಲವ್ ಜಿಹಾದಿಗಳಿಗೆ ಪುಷ್ಠಿ ನೀಡುವ ಯಾತ್ರೆ” ಎಂದು ಟೀಕಿಸಿದೆ.
ವಿಧಾನಸೌಧದದಲ್ಲಿ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯರುಗಳಾದ ಎನ್. ರವಿಕುಮಾರ್, ಛಲವಾದಿ ನಾರಾಯಣ ಸ್ವಾಮಿ ಹಾಗೂ ಭಾರತಿ ಶೆಟ್ಟಿ, ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿಗೆ ಅಮಾಯಕ ಎಂದು ಕ್ಲೀನ್ ಚಿಟ್ ನೀಡಿದ್ದ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಈಗ ಬಸ್ ಯಾತ್ರೆ ಮೂಲಕ ಖಾಲಿಡಬ್ಟಾದ ಸದ್ದು ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಆ ಬಗ್ಗೆ ಸೂಕ್ತ ದಾಖಲೆ ಕೊಡುವಲ್ಲಿ ವಿಫಲವಾಗಿದೆ. ನ್ಯಾಯಾಲಯಕ್ಕೆ ಸಾಕ್ಷ್ಯ ಕೊಡುತ್ತೇನೆ ಎಂದು ಹೇಳಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕೂಡ ದಾಖಲೆ ಒದಗಿಸಿಲ್ಲ. ಇದು ಬಿಜೆಪಿ ಬಗ್ಗೆ ಅಪಪ್ರಚಾರ ನಡೆಸಲು ಕಾಂಗ್ರೆಸ್ ಹೆಣೆದ ಟೂಲ್ ಕಿಟ್ ರಾಜಕಾರಣದ ಭಾಗ ಎಂದು ತಿರುಗೇಟು ನೀಡಿದರು.
ಬಸ್ ಯಾತ್ರೆ ಸಂದರ್ಭದಲ್ಲಿ ಉಚಿತ ವಿದ್ಯುತ್ ಭರವಸೆ ನೀಡಿರುವ ಕಾಂಗ್ರೆಸ್ ನಾಯಕರು ಜನರನ್ನು ಮೋಸ ಮಾಡಲು ಹೊರಟಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಆಡಳಿತದಲ್ಲಿ ಇರುವ ರಾಜ್ಯ ಸರ್ಕಾರಗಳು ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿದ ಸಂದರ್ಭದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವ ರಾಜ್ಯಗಳು ಬೆಲೆ ಇಳಿಕೆ ಮಾಡಲಿಲ್ಲ. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಕತ್ತಲೆ ಇತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ವಿದ್ಯುತ್ ಕ್ಷಾಮ ಕಡಿಮೆಯಾಗಿದೆ ಎಂದು ಹೇಳಿದರು.
ಅಲೆಮಾರಿ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು “ಅಲೆಮಾರಿ ಸಿದ್ದ” ಎಂದು ಟೀಕಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, “ಶ್ರೀನಿವಾಸಗೌಡರು ಕೋಲಾರ ಕ್ಷೇತ್ರವನ್ನು ಬಿಟ್ಟುಕೊಡುವ ಹಿನ್ನೆಲೆ ಏನೆಂಬ ಬಗ್ಗೆ ಆಡಿರುವ ಮಾತುಗಳ ಆಡಿಯೋ ರಿಲೀಸ್ ಮಾಡಿದರು.
ಶ್ರೀನಿವಾಸಗೌಡರು ಕ್ಷೇತ್ರ ತ್ಯಾಗ ಮಾಡಿದ್ದಾರೆ ಎಂಬುದು ಸುಳ್ಳು. ಅವರಿಗೆ ಖುದ್ದು ಸಿದ್ದರಾಮಯ್ಯನವರೇ ಆಮಿಷವೊಡ್ಡಿದ್ದಾರೆ. ತಾವು ಮಾಡಿರುವ 17.5 ಕೋಟಿ ರೂ.ಸಾಲ ತೀರಿಸುವ ಜತೆಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ಕೊಡಿಸುವುದಾಗಿ ಸಿದ್ದರಾಮಯ್ಯ ಭರವಸೆ ಕೊಟ್ಟಿರುವ ಬಗ್ಗೆ ಶ್ರೀನಿವಾಸ ಗೌಡರು ಆಡಿಯೋದಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯನವರು ವರುಣಾ, ಚಾಮುಂಡೇಶ್ವರಿ, ಬಾದಾಮಿಯಲ್ಲಿ ಅಲೆದಾಟ ನಡೆಸಿ ಈಗ ಕೋಲಾರಕ್ಕೆ ಬಂದಿದ್ದಾರೆ. ಅಲ್ಲಿಯೂ ಅವರು ಸೋಲುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು
ಆನೆ ಕಂಡು ಚರಂಡಿಗೆ ಇಳಿದ ಬೊಲೆರೋ… ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ
Legislative Council Elections: ಬಿಜೆಪಿ-ಜೆಡಿಎಸ್ ಮೈತ್ರಿ 5:1 ಅಲ್ಲ, 4:2
Prajwal Revanna ವಿಮಾನ ಟಿಕೆಟ್ ರದ್ದು; ಸಂಸದನ ನಡೆ ಕುತೂಹಲ, ಸಿಗದ ಸುಳಿವು
ತೀರ್ಪು ತಿದ್ದಿದ ಪ್ರಕರಣ: ಡಾ| ಸಿದ್ಧಲಿಂಗ ಸ್ವಾಮೀಜಿಗೆ ಸುಪ್ರೀಂ ನೋಟಿಸ್ ಜಾರಿ
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ
Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ
LS polls: ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್; ಫೋಟೋಸ್ ವೈರಲ್
RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ
ಭಾರತದ ವಿಮಾನಗಳನ್ನು ಹಾರಿಸಲು ಸಮರ್ಥರಿರುವ ಒಬ್ಬನೇ ಒಬ್ಬ ಪೈಲೆಟ್ ನಮ್ಮಲಿಲ್ಲ: ಮಾಲ್ಡೀವ್ಸ್