6 ವರ್ಷಗಳಲ್ಲಿ 828 ಕೇರಳ ಪೊಲೀಸರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳು!
Team Udayavani, Jan 11, 2023, 9:41 PM IST
ತಿರುವನಂತಪುರಂ : ಕಳೆದ ಆರು ವರ್ಷಗಳಲ್ಲಿ ಕೇರಳ ಪೊಲೀಸ್ ಪಡೆಯ 828 ಸಿಬಂದಿ ವಿವಿಧ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಧಾನಸಭೆಗೆ ತಿಳಿಸಿದ್ದಾರೆ.
ಇದೀಗ ತೀವ್ರತರವಾದ ಪ್ರಕರಣಗಳಲ್ಲಿ ಭಾಗಿಯಾಗಿರುವವರನ್ನು ವಜಾಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಅಯೋಗ್ಯ ಸಿಬಂದಿಯನ್ನು ತಿರಸ್ಕರಿಸುವ ಪ್ರಕ್ರಿಯೆಯನ್ನು ಗೃಹ ಸಚಿವಾಲಯ ಆರಂಭಿಸಿದೆ. ಇತ್ತೀಚೆಗಷ್ಟೇ ಸೇವೆಯಿಂದ ವಜಾಗೊಂಡಿರುವ ಇನ್ಸ್ ಪೆಕ್ಟರ್ ಪಿಆರ್ ಸುನು ಅವರೂ ಒಬ್ಬರಾಗಿದ್ದು, ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಹಲವಾರು ಬಾರಿ ಶಿಸ್ತು ಕ್ರಮಕ್ಕೆ ಒಳಗಾಗಿದ್ದರು. ಸುನು ಅವರ ಮೇಲೆ ದುಷ್ಕೃತ್ಯದ ಆರೋಪ ಹೊರಿಸಿದ್ದು, ಸೇವೆಯಲ್ಲಿ ಮುಂದುವರಿಯಲು ಅವರನ್ನು ಎಂದಿಗೂ ಅನುಮತಿಸುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ತಿರುವನಂತಪುರಂ ನಗರ ಮತ್ತು ಗ್ರಾಮಾಂತರ ಪೊಲೀಸ್ ಜಿಲ್ಲೆಗಳಲ್ಲಿ 118 ಕ್ರಿಮಿನಲ್ ಪ್ರಕರಣಗಳು, ಎರ್ನಾಕುಲಂನಲ್ಲಿ 97, ಕೋಝಿಕ್ಕೋಡ್ನಲ್ಲಿ 63 ಮತ್ತು ಆಲಪ್ಪುಳದಲ್ಲಿ 99 ಆರೋಪಿಗಳು ಪೊಲೀಸ್ ಇಲಾಖೆಯಲ್ಲಿ ಸೇರಿವೆ. ಒಟ್ಟು 32 ಅಧಿಕಾರಿಗಳನ್ನು ಖುಲಾಸೆಗೊಳಿಸಲಾಗಿದ್ದು, 30 ಎಫ್ಐಆರ್ಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ. 89 ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ.
ಪೋಕ್ಸೋ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಿಬಂದಿಗಳ ಸಂಖ್ಯೆ 23 ಮತ್ತು 2016 ರಿಂದ ವಜಾಗೊಂಡ ಪೊಲೀಸ್ ಸಿಬಂದಿಗಳ ಸಂಖ್ಯೆ 13 ಎಂದು ಅಂಕಿ ಅಂಶಗಳು ತಿಳಿಸಿವೆ.
ಸಿಪಿಎಂ ನೇತೃತ್ವದ ಎಲ್ಡಿಎಫ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎಲ್ಲಾ ಕ್ಷೇತ್ರಗಳಲ್ಲಿ ಕೇರಳ ‘ನಂ1’ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದು ಈಗ ನಿಜ ಗೊತ್ತಾಗಿದೆ ಎಂದು ಹಲವರು ಸಾಮಾಜಿಕ ತಾಣಗಳಲ್ಲಿ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ