ಹುಬ್ಬಳ್ಳಿಗೆ ಇಂದು ಮೋದಿ: ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ
ಸುಮಾರು 8 ಕಿ.ಮೀ. ರೋಡ್ ಶೋ
Team Udayavani, Jan 12, 2023, 7:00 AM IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರು ವಾರ ಹುಬ್ಬಳ್ಳಿಗೆ ಆಗಮಿಸಲಿದ್ದು, ಸಂಜೆ 4ಕ್ಕೆ ಇಲ್ಲಿನ ರೈಲ್ವೇ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡುವರು.
ಧಾರವಾಡದಲ್ಲಿ ಜ.12-16ರ ವರೆಗೆ ಉತ್ಸವ ನಡೆಯಲಿದ್ದು, ಅದರ ಉದ್ಘಾಟನಾ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಪ್ರಧಾನಿ ಮೋದಿಯವರ ಪಾಲ್ಗೊಳ್ಳುವಿಕೆ ಹಿನ್ನೆಲೆಯಲ್ಲಿ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಗುರುವಾರ ಮಧ್ಯಾಹ್ನ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಅವರು, ಸಮಾರಂಭ ಸ್ಥಳ ರೈಲ್ವೇ ಮೈದಾನದವರೆಗೆ ಸುಮಾರು 8 ಕಿ.ಮೀ. ರೋಡ್ ಶೋ ನಡೆ ಸುವರು. ರಸ್ತೆಯ ಎರಡೂ ಬದಿಗಳಲ್ಲಿ ಸಾರ್ವ ಜನಿಕರಿಗೆ ನಿಂತು ವೀಕ್ಷಿಸಲು ಅವ ಕಾಶ ನೀಡಲಾಗಿದೆ.
ಪ್ರಧಾನಿ ಆಗಮನ ಹಾಗೂ ಯುವಜನೋತ್ಸವ ಹಿನ್ನೆಲೆಯಲ್ಲಿ ಅವಳಿನಗರ ಶೃಂಗಾರಗೊಂಡಿದ್ದು, ಪ್ರಮುಖ ವೃತ್ತ-ರಸ್ತೆಗಳಲ್ಲಿ ಬ್ಯಾನರ್-ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.
ಎಷ್ಟು ಜನ ಭಾಗಿ?
ಉದ್ಘಾಟನ ಕಾರ್ಯಕ್ರಮದಲ್ಲಿ ಪ್ರಧಾನಿ, ಕೇಂದ್ರ ಸಚಿವರು ಹಾಗೂ ವಿವಿಧ ಜನಪ್ರತಿನಿಧಿಗಳು ಸೇರಿದಂತೆ ಒಟ್ಟು 25 ಜನ ಗಣ್ಯರು ಭಾಗವಹಿಸುವರು. ವಿವಿಧ ರಾಜ್ಯಗಳ ಸುಮಾರು 5,700ಕ್ಕೂ ಹೆಚ್ಚು ಮಂದಿ ಯುವಜನರಲ್ಲದೇ, ಪೋರ್ಟಲ್ನಲ್ಲಿ ನೋಂದಣಿ ಮಾಡಿದ ಸುಮಾರು 25 ಸಾವಿರ ಮಂದಿ ಯುವಜನರಿಗೂ ಪಾಲ್ಗೊಳ್ಳಲು ಅವಕಾಶ ಒದಗಿಸಲಾಗಿದೆ.
ಏನೇನು ಕಾರ್ಯಕ್ರಮ?
ಜಾನಪದ ನೃತ್ಯ, ಯುವ ಸಮ್ಮೇಳನ, ದೇಶೀಯ ಕ್ರೀಡೆಗಳು, ಆಹಾರ ಮೇಳ, ಜಾನಪದ ಹಾಡುಗಳ ಗಾಯನ, ಜಲ ಸಾಹಸ ಕ್ರೀಡೆಗಳು, ಯುವ ಕಲಾವಿದರ ಶಿಬಿರ, ಯುವ ಕೃತಿ ವಿಶೇಷ ಕಾರ್ಯ ಕ್ರಮ, ಯೋಗ ಥಾನ್, ಸಾಹಸ ಕ್ರೀಡೆ ಕಾರ್ಯಾಗಾರ ವಿವಿಧ ಕಾಲೇಜು, ರಂಗಮಂದಿರ ಹಾಗೂ ಕ್ರೀಡಾ ಮೈದಾನ ಗಳಲ್ಲಿ ನಡೆಯ ಲಿದೆ. ಜ. 16 ರಂದು ಕೆಸಿಡಿ ಕಾಲೇಜಿ ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ