ಉಜ್ಬೇಕಿಸ್ಥಾನ್ ಕೆಮ್ಮು ಸಿರಪ್ ಪ್ರಕರಣ: ಮರಿಯನ್ ಬಯೋಟೆಕ್ ಉತ್ಪಾದನಾ ಪರವಾನಗಿ ಅಮಾನತು
ಪರೀಕ್ಷಾ ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ...
Team Udayavani, Jan 12, 2023, 2:33 PM IST
ನವದೆಹಲಿ : ಉಜ್ಬೇಕಿಸ್ಥಾನ್ ದಲ್ಲಿ ಮಕ್ಕಳ ಜೀವ ಕಳೆದುಕೊಳ್ಳಲು ಕಾರಣವಾಗಿದೆ ಎನ್ನಲಾದ ನೋಯ್ಡಾ ಮೂಲದ ಔಷಧೀಯ ಸಂಸ್ಥೆ ಮರಿಯನ್ ಬಯೋಟೆಕ್ನ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ.
ವಿವಾದಾತ್ಮಕ ಕೆಮ್ಮಿನ ಸಿರಪ್ನ ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ ಎಂದು ಉತ್ತರ ಪ್ರದೇಶದ ಔಷಧ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಕೇಂದ್ರೀಯ ಏಜೆನ್ಸಿಗಳು ಮತ್ತು ಉತ್ತರ ಪ್ರದೇಶದ ಔಷಧ ವಿಭಾಗದ ತಂಡವು ಡಿಸೆಂಬರ್ 29 ರಂದು ಇಲ್ಲಿನ ಸಂಸ್ಥೆಯ ಕಚೇರಿಯಲ್ಲಿ ತಪಾಸಣೆ ನಡೆಸಿ ಆರು ಮಾದರಿಗಳನ್ನು ಪರೀಕ್ಷೆಗೆ ತೆಗೆದುಕೊಂಡಿದ್ದರು.
ತಪಾಸಣೆಯ ಸಮಯದಲ್ಲಿ, ಕಂಪನಿಯ ಪ್ರತಿನಿಧಿಗಳು ‘ಡಾಕ್-1 ಮ್ಯಾಕ್ಸ್’ ಕೆಮ್ಮಿನ ಸಿರಪ್ ಉತ್ಪಾದನೆಗೆ ಸಂಬಂಧಿಸಿದ ದಾಖಲೆಗಳನ್ನು ನೀಡಲು ಸಾಧ್ಯವಾಗಲಿಲ್ಲ, ಆದ್ದರಿಂದ ತಕ್ಷಣವೇ ಅದರ ಉತ್ಪಾದನೆಯನ್ನು ಸ್ಥಗಿತಗೊಳಿಸುವಂತೆ ಸರ್ಕಾರಕ್ಕೆ ಆದೇಶ ನೀಡುವಂತೆ ಗೌತಮ್ ಬುದ್ಧ ನಗರದ ಡ್ರಗ್ ಇನ್ಸ್ಪೆಕ್ಟರ್ ವೈಭವ್ ಬಬ್ಬರ್ ಹೇಳಿದ್ದರು.
“ಡಿಸೆಂಬರ್ 29 ರಂದು ಆದೇಶದಂತೆ ಸಂಸ್ಥೆಯ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಈಗ ಜನವರಿ 10 ರಂದು ಸಂಸ್ಥೆಗೆ ಲಿಖಿತವಾಗಿ ಅಮಾನತು ಆದೇಶವನ್ನು ನೀಡಲಾಗಿದೆ ಮತ್ತು ಸಂಸ್ಥೆಯು ಒಪ್ಪಿಕೊಂಡಿದೆ” ಎಂದು ಬಬ್ಬರ್ ಪಿಟಿಐಗೆ ತಿಳಿಸಿದ್ದಾರೆ. ಪರೀಕ್ಷಾ ಫಲಿತಾಂಶಗಳ ಸ್ಥಿತಿಯ ಕುರಿತು ಅಧಿಕಾರಿಯು ಕೇಂದ್ರ ಏಜೆನ್ಸಿಗಳಿಂದ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಅವುಗಳ ಫಲಿತಾಂಶಗಳು ಇನ್ನಷ್ಟೇ ಬರಬೇಕಿದೆ ಎಂದು ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ (WHO) ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮು ಸಿರಪ್ಗಳನ್ನು ಮಕ್ಕಳಿಗೆ ನೀಡಬಾರದು ಎಂದು ಶಿಫಾರಸು ಮಾಡಿದೆ. ಸಿರಪ್ಗಳನ್ನು ಮಕ್ಕಳಿಗೆ ಬಳಸಬಾರದು, ಉತ್ಪನ್ನಗಳು ಉಜ್ಬೇಕಿಸ್ಥಾನ್ನ 19 ಮಕ್ಕಳ ಜೀವಗಳು ಕಳೆದುಕೊಳ್ಳಲು ಕಾರಣವಾಗಿವೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ