ಆತಂಕ ಹುಟ್ಟಿಸುತ್ತಿದೆ ಮಕ್ಕಳ ಹೃದಯಾಘಾತ!: ಎರಡು ವರ್ಷಗಳಿಂದ ಪ್ರಕರಣ ಹೆಚ್ಚಳ


Team Udayavani, Jan 13, 2023, 7:00 AM IST

ಆತಂಕ ಹುಟ್ಟಿಸುತ್ತಿದೆ ಮಕ್ಕಳ ಹೃದಯಾಘಾತ!: ಎರಡು ವರ್ಷಗಳಿಂದ ಪ್ರಕರಣ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಸಾಮಾನ್ಯವಾಗಿ ಹಿರಿಯರು ಮತ್ತು ಪ್ರೌಢರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯಾಘಾತವು ಈಗ ಮಕ್ಕಳಲ್ಲಿಯೂ ಸಂಭವಿಸುತ್ತಿರುವುದು ಅಚ್ಚರಿ ಹಾಗೂ ಆತಂಕಕ್ಕೆ ಕಾರಣವಾಗಿದೆ.

ಒಂದು ವಾರದಲ್ಲಿ ರಾಜ್ಯದ ವಿವಿಧೆಡೆ ಮೂವರು ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪಿರುವುದು ವರದಿಯಾಗಿದ್ದು, ಇದು ಹೃದಯ ತಜ್ಞರಿಗೂ ಸವಾಲಾಗಿ ಪರಿಣಮಿಸಿದೆ.

ಎರಡು ವರ್ಷಗಳಿಂದ ಹದಿಹರೆಯದವರು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಶೇ. 8ರಷ್ಟು ಏರಿಕೆಯಾಗಿದ್ದು, ಈ ಸಮಸ್ಯೆಗೆ ನಿಖರ ಕಾರಣ ಪತ್ತೆಯಾಗಿಲ್ಲ.  ಈ ಕುರಿತು ತಜ್ಞವೈದ್ಯರು ಹಾಗೂ ಸರಕಾರ ಗಂಭೀರವಾಗಿ ಪರಿಗಣಿಸಿ ಅಧ್ಯಯನ ನಡೆಸಬೇಕಿದೆ.

ಶೇ. 60 ಪ್ರಕರಣಗಳಲ್ಲಿ ಕಂದಮ್ಮಗಳಿಗೆ ಹೃದಯ ಸಮಸ್ಯೆಯಿದ್ದರೂ ಈ ಸಂಗತಿ ಅವರ ಅರಿವಿಗೆ ಬಾರದೇ ಅನಾಹುತ ಸಂಭವಿಸುತ್ತದೆ ಎಂಬುದು ಬಹುತೇಕ ಹೃದ್ರೋಗ ತಜ್ಞರ ಅಭಿಪ್ರಾಯ.

ಅನುವಂಶೀಯವಾಗಿ ಬರುವ ಹೃದಯ ಸಮಸ್ಯೆ:

ಪ್ರತೀ ಸಾವಿರ ಮಕ್ಕಳಲ್ಲಿ 5-6 ಮಕ್ಕಳಿಗೆ ಹುಟ್ಟುವಾಗಲೇ ಹೃದಯ ಸಮಸ್ಯೆ ಎದುರಾಗುತ್ತದೆ. ಈ ಪೈಕಿ ಶೇ. 1-2ರಷ್ಟು ಮಕ್ಕಳಲ್ಲಿ ಹೃದಯಾಘಾತ ಸಂಭವಿಸಬಹುದು. ಹದಿಹರೆಯದ ಮಕ್ಕಳ ಹೃದಯದ ರಕ್ತನಾಳಗಳು ಅದಲು ಬದಲಾಗುವುದು, ರಕ್ತ ಸಂಬಂಧಿಗಳಿಂದ ಆನುವಂಶೀಯವಾಗಿ ಮಕ್ಕಳಿಗೆ ಸಣ್ಣ ವಯಸ್ಸಿನಲ್ಲೇ ಹೃದಯ ಸಮಸ್ಯೆಗಳು ಅಂಟಿಕೊಳ್ಳುತ್ತವೆ. ಹೃದಯದ ರಕ್ತನಾಳಗಳಲ್ಲಿ ಸಮಸ್ಯೆ, ಅಭಿದಮನಿ ನಾಳದಲ್ಲಿ ತೊಂದರೆಯಿದ್ದರೂ 15 ವರ್ಷದೊಳಗಿನವರಲ್ಲಿ ಹೃದಯಾಘಾತ ಸಂಭವಿಸುತ್ತದೆ. 15ರಿಂದ 18 ವರ್ಷದ ಶೇ. 2ರಷ್ಟು, 12-15ರ ಶೇ. 1ರಷ್ಟು ಹಾಗೂ 12ಕ್ಕಿಂತ ಕಡಿಮೆ ವಯಸ್ಸಿನ ಶೇ. 0.5ರಷ್ಟು ಮಕ್ಕಳಲ್ಲಿ ಹೃದಯ ಸಂಬಂಧಿ ಸಮಸ್ಯೆಗಳಿವೆ ಎಂದು ಅಂದಾಜಿಸಲಾಗಿದೆ ಎಂದು ಜಯದೇವ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ನಿರ್ದೇಶಕ ಡಾ| ಸಿ.ಎನ್‌. ಮಂಜುನಾಥ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಕಾರಣವೇನು?:

ಸಾಮಾನ್ಯವಾಗಿ ಮಯೋಕಾರ್ಡಿಟಿಸ್‌ ವೈರಲ್‌ ಇನ್‌ಫೆಕ್ಷನ್‌, ರುಮಾಟಿಕ್‌ ಕಾರ್ಡಿಟಿಸ್‌, ಹೃದಯ ಕವಾಟದಲ್ಲಿ ರಕ್ತ ಸೋರಿಕೆಯಾಗಿ ಮಕ್ಕಳಲ್ಲಿ ಹೃದಯಾಘಾತ ಉಂಟಾಗುತ್ತದೆ. ಪುಟ್ಟ ಕಂದಮ್ಮಗಳ ದೇಹದಲ್ಲಿ ಬೊಜ್ಜು ಹಾಗೂ ಕ್ಯಾಲ್ಸಿಯಂಗಳು ರಕ್ತನಾಳಗಳಿಗೆ ಸೇರಿಕೊಂಡರೆ ರಕ್ತನಾಳವು ಕುಗ್ಗುತ್ತದೆ. ಇದರಿಂದ ರಕ್ತ ಚಲನೆಗೆ ಸಮಸ್ಯೆ ಆಗಿ ಆ ಜಾಗದಲ್ಲಿ ರಕ್ತ ಹೆಪ್ಪುಗಟ್ಟುತ್ತದೆ. ಇದರಿಂದ ಹೃದಯಕ್ಕೆ ಸಾಗುವ ರಕ್ತ ಸಂಚಾರ ನಿಂತು ಹೃದಯ ಬಡಿತ ನಿಲ್ಲಬಹುದು. ಹದಿಹರೆಯದವರಲ್ಲೂ ಇತ್ತೀಚೆಗೆ ಸಕ್ಕರೆ ಕಾಯಿಲೆ ಕಾಣಿಸಿಕೊಂಡು ಹೃದಯಕ್ಕೆ ಹಾನಿಯಾಗುತ್ತಿವೆ. ಪ್ರೌಢಾವಸ್ಥೆಗೆ ಬಂದ ಬಾಲಕ/ಬಾಲಕಿಯರ ದೇಹದಲ್ಲಿ ರಕ್ತದ ಪೂರೈಕೆಗೆ ಅಡಚಣೆ ಉಂಟಾದಾಗ, ಹೃದಯದ ಸ್ನಾಯುಗಳು ಸರಿಯಾಗಿ ಕಾರ್ಯ ನಿರ್ವಹಿಸದೆ ಹೃದಯಾಘಾತ ಸಂಭವಿಸಿದ ಸಾಕಷ್ಟು ಉದಾಹರಣೆಗಳಿವೆ ಎನ್ನುತ್ತಾರೆ ಎಂ.ಎಸ್‌. ರಾಮಯ್ಯ ಆಸ್ಪತ್ರೆಯ ಹೃದ್ರೋಗ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ| ಯು.ಎಂ. ನಾಗಮಲ್ಲೇಶ್‌.

ಹದಿಹರೆಯದವರಲ್ಲಿ ಹೃದಯದ ಸಮಸ್ಯೆ ಲಕ್ಷಣ:

ಮಕ್ಕಳಲ್ಲಿ ಆಗಾಗ ಉಸಿರಾಟದ ಸಮಸ್ಯೆ ಕಾಡುವುದು ಹೃದಯ ಸಂಬಂಧಿ ಕಾಯಿಲೆಯ ಪ್ರಮುಖ ಲಕ್ಷಣವಾಗಿದೆ. ಯಾವುದೇ ಕಾರ್ಯ ಚಟುವಟಿಕೆಯಲ್ಲಿ ತೊಡಗದಿದ್ದರೂ ಹೆಚ್ಚು ಹೃದಯ ಬಡಿತ, ಆಟವಾಡುವ ವೇಳೆ ಅತೀ ಆಯಾಸ, ಎಲ್ಲ ಮಕ್ಕಳಂತೆ ಓಡಾಟ ಮಾಡಿದರೆ ಉಸಿರು ತೆಗೆದುಕೊಳ್ಳಲು ಕಷ್ಟವಾಗುವುದು, ಎಡ ಬದಿಯ ಎದೆಯಲ್ಲಿ ನೋವು, ಸ್ನಾಯು ಸೆಳೆತ ಹಾಗೂ ರಾತ್ರಿ ನಿದ್ದೆಗೆ ಜಾರಿದಾಗಲೂ ಹೃದಯ ಬಡಿತ ಹೆಚ್ಚಳ, ಎಡ ಭಾಗದಲ್ಲಿ ಎದೆನೋವು ಹೃದಯ ಸಂಬಂಧಿ ಕಾಯಿಲೆಯ ಮುನ್ಸೂಚನೆಯಾಗಿದೆ. ಕರ್ನಾಟಕದಲ್ಲಿ ಕಳೆದ 10 ವರ್ಷಗಳಲ್ಲಿ ಶೇ. 20ರಷ್ಟು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಪೈಕಿ ಶೇ. 30ರಷ್ಟು 45 ವರ್ಷದೊಳಗಿನ ಯುವಕರು ಹಾಗೂ ಮಕ್ಕಳು ಸೇರಿದ್ದಾರೆ.

ಮಕ್ಕಳ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆ:

  • ಆದಷ್ಟು ಮಕ್ಕಳನ್ನು ಮೊಬೈಲ್, ಕಂಪ್ಯೂಟರ್‌ನಿಂದ ದೂರ ಇರುವಂತೆ ನೋಡಿಕೊಳ್ಳಿ.
  • ಮೈದಾನದಲ್ಲಿ ಆಟವಾಡಲು ಕಳುಹಿಸಿ. ದೇಹ, ಮನಸ್ಸಿಗೆ ವ್ಯಾಯಾಮ ಸಿಗಬೇಕು. ಶಾಲಾ ಕೆಲಸಗಳಲ್ಲಿ ಅತಿಯಾದ ಒತ್ತಡ, ನಿದ್ರಾಹೀನತೆ, ರಾತ್ರಿ ಓದು-ಬರಹ ಕೆಲಸ ಒಳ್ಳೆಯದಲ್ಲ.
  • ವಾಯು ಮಾಲಿನ್ಯ ಹಾಗೂ ಮಣ್ಣಿನ ಮಾಲಿನ್ಯಗಳಿಂದ ಮಕ್ಕಳನ್ನು ದೂರಿ ಇರಿಸಿ.
  • ಹೆಚ್ಚೆಚ್ಚು ಜಂಕ್‌ ಫ‌ುಡ್‌ ಸೇವನೆಯಿಂದ ಹೃದಯದ ರಕ್ತನಾಳಗಳಲ್ಲಿ ಬೊಜ್ಜು ಶೇಖರಣೆಯಾಗುವ ಸಾಧ್ಯತೆ.
  • ಸ್ಥೂಲಕಾಯದ ಸಮಸ್ಯೆಯೂ ಮಕ್ಕಳಲ್ಲಿ ಹೃದಯಾಘಾತಕ್ಕೆ ಕಾರಣ.
  • ಮಕ್ಕಳಲ್ಲಿ ಹೃದಯಾಘಾತವಾಗಿ ಪ್ರಜ್ಞಾಹೀನರಾದರೆ ಎದೆ ಮೇಲೆ ಕೈ ಇಟ್ಟು ಜೋರಾಗಿ ಒತ್ತಿ. ಎಚ್ಚರವಿದ್ದಾಗ ಒತ್ತಿದರೆ ಉಸಿರಾಡಲು ಮತ್ತಷ್ಟು ಸಮಸ್ಯೆಯಾಗಬಹುದು ಎಚ್ಚರ.

ಪ್ರಮುಖ ಪ್ರಕರಣಗಳು:

  • ಶಿವಮೊಗ್ಗದ ಸೊರಬದಲ್ಲಿ 10ನೇ ತರಗತಿ ವಿದ್ಯಾರ್ಥಿ ಜಯಂತ್‌ ರಜತಾದ್ರಯ್ಯ ಬೆಳಗ್ಗೆ ಶಾಲೆಗೆ ಹೊರಡುತ್ತಿದ್ದಾಗ ಎದೆನೋವು ಉಂಟಾಗಿ ಏಕಾಏಕಿ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾನೆ.
  • ಜ. 9ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್‌ ಹಸೀಮ್‌ (17) ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದಾಗ ಏಕಾಏಕಿ ತಲೆಸುತ್ತು ಬಂದು ಬಿದ್ದು ಹೃದಯಾಘಾತದಿಂದ ಅಸುನೀಗಿದ್ದ.
  • ಜ. 7ರಂದು ಮಡಿಕೇರಿಯ ಕುಶಾಲನಗರದ ಕೀರ್ತನ್‌ (12) ಎದೆನೋವಿನಿಂದ ಬಳಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾನೆ.
  • 2022 ಫೆ. 12ರಂದು ಧಾರವಾಡ ಕಲಘಟಗಿ ಪಟ್ಟಣದ 6ನೇ ತರಗತಿಯ ಬಾಲಕನೊಬ್ಬ ಶಾಲೆಯಲ್ಲಿಯೇ ಕುಸಿದುಬಿದ್ದು ಹೃದಯಾಘಾದಿಂದ ಸಾವನ್ನಪ್ಪಿದ್ದಾನೆ.

ಬಹುತೇಕ ಪ್ರಕರಣಗಳಲ್ಲಿ ಅನುವಂಶೀಯವಾಗಿ ಬಂದ ಹೃದಯ ಸಂಬಂಧಿತ ಕಾಯಿಲೆಗಳಿಂದ ಮಕ್ಕಳಲ್ಲಿ ಹೃದಯಾಘಾತ ಸಂಭವಿಸುತ್ತಿದೆ. ಹೃದಯ ಸಂಬಂಧಿ ಸಮಸ್ಯೆಗಳ ಲಕ್ಷಣ ಕಂಡುಬಂದ ಮಕ್ಕಳನ್ನು ಕೂಡಲೇ ಸೂಕ್ತ ವೈದರ ಬಳಿ ಹೋಗಿ ತಪಾಸಣೆ ನಡೆಸುವುದು ಅತ್ಯಗತ್ಯ. ಇದರಿಂದ ಮುಂದೆ ಆಗುವ ಅನಾಹುತ ತಪ್ಪಿಸಬಹುದು.   ಡಾ| ಯು.ಎಂ. ನಾಗಮಲ್ಲೇಶ್‌, ಎಂ.ಎಸ್‌. ರಾಮಯ್ಯ ಆಸ್ಪತ್ರೆ ಹೃದ್ರೋಗ ವಿಭಾಗದ ಮುಖ್ಯಸ್ಥ  

ಯುವಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಹೃದಯಾಘಾತ ಪ್ರಮಾಣ ಕೊಂಚ ಕಡಿಮೆಯಿದೆ. ಆತಂಕಪಡುವ ಅಗತ್ಯವಿಲ್ಲ. ಆದರೆ ಮಕ್ಕಳೂ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಮಕ್ಕಳ ದೇಹಕ್ಕೆ ಪ್ರತಿನಿತ್ಯ ಕನಿಷ್ಠ 30 ನಿಮಿಷ ವ್ಯಾಯಮ ಸಿಕ್ಕಿದರೆ ಉತ್ತಮ.ಡಾ| ಸಿ.ಎನ್‌. ಮಂಜುನಾಥ್‌, ಜಯದೇವ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆ ನಿರ್ದೇಶಕ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.