ಕುಷ್ಟಗಿ: ಮದ್ಯ ಸೇವಿಸಿ ಯುವಕರ ಆರೋಗ್ಯ ಹಾಳು: ಮದ್ಯಪಾನ ನಿಷೇಧ ಹೋರಾಟ
Team Udayavani, Jan 13, 2023, 10:54 AM IST
ಕುಷ್ಟಗಿ: ಪಿಎಸೈ ಹಿರೇಗೌಡ್ರು ಇದ್ದಾಗ ನಮ್ಮೂರಾಗ ಮದ್ಯಪಾನ ಬಂದ್ ಇತ್ತು ಈಗ ಯಾಕೆ ಬಂದ್ ಆಗಿಲ್ಲ ಎಂದು ತಳವಗೇರಾ ಗ್ರಾಮಸ್ಥರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಕರ್ನಾಟಕ ಮಾನವ ಹಕ್ಕುಗಳ ಜನಸೇವಾ ಸಮಿತಿ ಹಾಗೂ ಶರಣಬಸವೇಶ್ವರ ಸೇವಾ ಸಮಿತಿ ನೇತೃತ್ವದಲ್ಲಿ ತಳವಗೇರಾ ಗ್ರಾಮದಲ್ಲಿ ಮದ್ಯಪಾನ ನಿಷೇಧಿಸಬೇಕೆಂಬ ಒತ್ತಾಯದ ಹಿನ್ನೆಲೆ ಅಬಕಾರಿ ಇಲಾಖೆಯ ಅಧಿಕಾರಿ ಶಂಕರ್ ಆಗಮಿಸಿ ಸಮಾಲೋಚನೆ ನಡೆಸಿದರು.
ಈ ವೇಳೆ ಗ್ರಾಮಸ್ಥರು ಕುಷ್ಟಗಿ ಪಿಎಸೈ ವಿಶ್ವನಾಥ ಹಿರೇಗೌಡ್ರು ಇದ್ದಾಗ ಗ್ರಾಮದಲ್ಲಿ ಮದ್ಯ ಸೇವನೆ ಬಂದ್ ಮಾಡಲಾಗಿತ್ತು. ಅವರ ವರ್ಗಾವಣೆ ಬಳಿಕ ಗ್ರಾಮದ ದೇವಸ್ಥಾನದ ಅಕ್ಕ-ಪಕ್ಕ ಮದ್ಯ ಸೇವನೆ ನಡೆಯುತ್ತಿದೆ. ರಾತ್ರಿಯಾಗುತ್ತಿದ್ದಂತೆ ಶಾಲಾ ಆವರಣ, ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಯುವಕರು ಮದ್ಯ ಸೇವಿಸುತ್ತಿದ್ದು, ವಾತವರಣ ಕಲುಷಿತಗೊಳಿಸಿದ್ದಾರೆಂದು ಆರೋಪಿಸಿದರು.
ಇದಕ್ಕೆ ಅಬಕಾರಿ ಅಧಿಕಾರಿ ಸ್ಪಂದಿಸಿ ಗ್ರಾಮದಲ್ಲಿ ಎಲ್ಲೆಂದರಲ್ಲಿ ಮದ್ಯ ಸೇವಿಸಿ ಯುವಕರು ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಹಿರಿಯರ ಮಾತುಗಳಿಗೆ ಬೆಲೆ ಇಲ್ಲದಂತಾಗಿದೆ. ಇನ್ಮುಂದೆ ಗ್ರಾಮದ ದೇವಸ್ಥಾನ ಪ್ರದೇಶದಲ್ಲಿ ಮದ್ಯಪಾನ ನಿಯಂತ್ರಿಸಲು ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ. ಗ್ರಾಮದಲ್ಲಿ ಮದ್ಯ ಮಾರಾಟ ಕಂಡು ಬಂದರೆ ನಮಗೆ ಮಾಹಿತಿ ನೀಡಿ, ಮದ್ಯದ ಲೇಬಲ್ ಆಧಾರದ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಕರ್ನಾಟಕ ಮಾನವ ಹಕ್ಕು ಜನ ಸೇವಾ ಸಮಿತಿ ಅಧ್ಯಕ್ಷ ಬಸವರಾಜ ಸಿ. ಮೇಟಿ ಮದ್ಯಪಾನ ನಿಷೇಧದ ಹೋರಾಟದ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?