ಗಾಳಿಯಲ್ಲಿ ಬಂದು ಹೋಗುವವರನ್ನು ನಂಬಬೇಡಿ: ರೆಡ್ಡಿ ಬಗ್ಗೆ ಕಳಕನಗೌಡ ಪರೋಕ್ಷ ಟೀಕೆ

ನಾನು ಗಂಗಾವತಿಯಿಂದ ಬಿಜೆಪಿಯ ಟಿಕೆಟ್ ಕೇಳುತ್ತೇನೆ

Team Udayavani, Jan 13, 2023, 7:03 PM IST

1-asddsad

ಗಂಗಾವತಿ: ಗಾಳಿಯಲ್ಲಿ ಬಂದು ಹೋಗುವವರನ್ನು ಕೊಪ್ಪಳ ಜಿಲ್ಲೆಯ ಜನರು ನಂಬಬೇಡಿ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಪಂಚಮಸಾಲಿ ಸಮಾಜದ ನಾಯಕ ಕಳಕನಗೌಡ ಪಾಟೀಲ್ ಪರೋಕ್ಷವಾಗಿ ಗಾಲಿ ಜನಾರ್ದನ ರೆಡ್ಡಿ ಕುರಿತು ಟೀಕೆ ಮಾಡಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹೆತ್ತ ತಾಯಿ ಮತ್ತು ಪಕ್ಷಕ್ಕೆ ದ್ರೋಹ ಮಾಡಿ ಸ್ವಾರ್ಥಪರವಾದ ನಿಲುವುಗಳ ಮೂಲಕ ಜನರ ಮನಸ್ಸನ್ನು ಮರಳು ಮಾಡುವ ವ್ಯಕ್ತಿಗಳಿಂದ ಜನರು ಯಾವುದನ್ನು ನಿರೀಕ್ಷೆ ಮಾಡಬಾರದು. ಬದುಕಿನಲ್ಲಿ ಪ್ರಾಮಾಣಿಕತೆಯಿಂದ ದುಡಿಯೋ ವ್ಯಕ್ತಿಗಳನ್ನು ಗೆಲ್ಲಿಸಬೇಕು. ಬಳ್ಳಾರಿ ಜಿಲ್ಲೆಯಿಂದ ಗಂಗಾವತಿ ಕ್ಷೇತ್ರಕ್ಕೆ ಆಗಮಿಸಿ ಬರಿ ಮಾತುಗಳಲ್ಲಿ ಕೋಟಿ ರೂಪಾಯಿಗಳನ್ನು ತೋರಿಸಿ ಮಾತನಾಡುವ ವ್ಯಕ್ತಿಗಳು ಮೊದಲು ಪ್ರಾಮಾಣಿಕವಾಗಿ ಜನರ ಸೇವೆ ಮಾಡಲಿ. ನಂತರ ಚುನಾವಣೆಗೆ ಸ್ಪರ್ಧೆ ಮಾಡಿದರೆ ಜನರು ನಂಬುತ್ತಾರೆ ಎಂದು ಹೇಳಿದರು.

ಈ ಬಾರಿ ನಾನು ಯಲಬುರ್ಗಾ ಅಥವಾ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಟಿಕೆಟ್ ಕೇಳಲಿದ್ದು, ನೀಡಿದರೆ ಜನರ ವಿಶ್ವಾಸದಿಂದ ಗೆದ್ದು ತೋರಿಸುತ್ತೇನೆ. ನಿನ್ನೆ ಮೊನ್ನೆ ಗಂಗಾವತಿಗೆ ಬಂದವರು ಗಾಳಿಯಲ್ಲಿ ಗುಂಡು ಹೊಡೆಯುತ್ತಿರುವುದು ವ್ಯರ್ಥ ಪ್ರಯತ್ನ. ಇದನ್ನು ಮಾಡಬಾರದು. ಕಿಷ್ಕಿಂದಾ ಅಂಜನಾದ್ರಿಯ ಹನುಮಂತ ದೇವರು ಹಾಗೂ ಗ್ರಾಮ ದೇವತೆ ದುರ್ಗಮ್ಮ ಇರುವ ಸ್ಥಳವಾಗಿದ್ದು ಇಲ್ಲಿ ನಂಬಿಕೆ ದ್ರೋಹ ಅಪ್ರಮಾಣಿಕತೆ ಸುಳ್ಳು ಭರವಸೆ ನೀಡಿದವರಿಗೆ ಜಯವಿಲ್ಲ. ಇಲ್ಲಿ ಪ್ರಾಮಾಣಿಕತೆ ನಿಷ್ಠೆ ಗಳಿಗೆ ಗೆಲುವಿದ್ದು ಯಲಬುರ್ಗಾ ಅಥವಾ ಗಂಗಾವತಿಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಲು ಬಿಜೆಪಿಯ ಹಿರಿಯ ಮುಖಂಡರು ತಮಗೆ ಅವಕಾಶ ಕೊಡಬೇಕು ಎಂದರು.

ಗಂಗಾವತಿ ಭತ್ತದ ಕಣಜ. ಹಸಿದವರಿಗೆ ಅನ್ನವನ್ನು ಕೊಡುವ ಜಾಗ ಈ ಜಾಗದಲ್ಲಿ ಸುಳ್ಳು ಅಪ್ರಮಾಣಿಕತೆ ಭ್ರಷ್ಟಾಚಾರಿಗಳಿಗೆ ಅವಕಾಶವಿಲ್ಲ. ಇದನ್ನು ಅನ್ಯ ಊರುಗಳಿಂದ ಬಂದು ಗಂಗಾವತಿ ಕ್ಷೇತ್ರದ ಮೇಲೆ ಕಣ್ಣಿಟ್ಟವರು ಅರ್ಥಮಾಡಿಕೊಳ್ಳಬೇಕು. ಪ್ರಾಮಾಣಿಕತೆಯ ಪ್ರತಿರೂಪದಂತಿರುವ ವಿಶ್ವದ ಶ್ರೇಷ್ಠ ನಾಯಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿ ಪಕ್ಷವನ್ನು ಮುನ್ನಡೆಸುತ್ತಿದ್ದು ಗಂಗಾವತಿ ಕ್ಷೇತ್ರದಲ್ಲಿ ಜನತೆ ಅಪ್ರಮಾಣಿಕ ಸ್ಪರ್ಧೆ ಮಾಡುವ, ಸುಳ್ಳು ಭ್ರಷ್ಟಾಚಾರಿಗಳು ಸಂವಿಧಾನ ಕಾನೂನು ಉಲ್ಲಂಘಿಸುವವರಿಗೆ ಅವಕಾಶ ನೀಡುವುದಿಲ್ಲ ಎಂದರು.

ಬಿಜೆಪಿ ಪ್ರಾಮಾಣಿಕ ಕಾರ್ಯಕರ್ತರನ್ನು ಹೊಂದಿದೆ. ಪಕ್ಷವನ್ನು ತೊರೆದವರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಇನ್ನು 25 ವರ್ಷ ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಆಡಳಿತ ನಡೆಸುವಂತೆ ಜನರ ಆಶೀರ್ವಾದವಿದ್ದು, ಪ್ರಧಾನಿ ನರೇಂದ್ರ ಮೋದಿ ಪಕ್ಷಕ್ಕೆ ಮತ್ತು ದೇಶಕ್ಕೆ ಸಿಕ್ಕಿರುವ ಅಪರೂಪದ ಪ್ರಾಮಾಣಿಕ ವ್ಯಕ್ತಿ. ಇದರಿಂದ ಬಿಜೆಪಿ ವಿಶ್ವದ ಹೆಚ್ಚು ಕಾರ್ಯಕರ್ತರಿರುವ ಪಕ್ಷವಾಗಿ ಹೊರಹೊಮ್ಮಿದೆ. ಯಾವ ಗಾಳಿ, ಹಣ ದೌರ್ಜನ್ಯಗಳು ಕೆಲಸ ಮಾಡುವುದಿಲ್ಲ. ಅನ್ಯ ಊರಿನಿಂದ ಬಂದವರು ಅರ್ಥ ಮಾಡಿಕೊಳ್ಳಬೇಕು. ಕೂಡಲೇ ಜಾಗ ಖಾಲಿ ಮಾಡಿ ಬಿಜೆಪಿಯವರಿಗೆ ಅವಕಾಶ ಕೊಡಬೇಕು. ಅದನ್ನು ಬಿಟ್ಟು ಹೆತ್ತ ತಾಯಿಗೆ ದ್ರೋಹ ಮಾಡುವ ಕೆಲಸ ಯಾರೂ ಸಹ ಮಾಡಬಾರದು ಎಂದಿದ್ದಾರೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.