ವಿರಾಟಪುರ ವಿರಾಗಿ ಚಿತ್ರ ವಿಮರ್ಶೆ: ವಿರಾಗಿಯ ಬದುಕಿನ ಮೇಲೊಂದು ಬೆಳಕು


Team Udayavani, Jan 14, 2023, 12:13 PM IST

viragi

12 ನೇ ಶತಮಾನದಲ್ಲಿ ಬಸವಣ್ಣನವರಿಂದ ಆರಂಭವಾದ ಭಕ್ತಿ ಪಂಥವು ಸಮಾಜದ ಏಳಿಗೆಗಾಗಿ ನಿರ್ಮಿಸಲ್ಪಟ್ಟಿದೆ. ಸಮಾಜದಲ್ಲಿನ ಜಾತಿಪದ್ಧತಿ ಎಂಬ ಅನಿಷ್ಠವನ್ನು ಹೋಗಲಾಡಿಸಿ, ಜಾತಿ, ಲಿಂಗ, ವೃತ್ತಿ, ಎಲ್ಲವನ್ನೂ ಮೀರಿ ಲಿಂಗದೀಕ್ಷೆ ನೀಡುವ ಮೂಲಕ, ಕಾಯಕದಿಂದ ಶಿವನಲ್ಲಿ ಲೀನವಾಗುವ ಪರಿಯನ್ನು ಲೋಕಕ್ಕೆ ಸಾರಿದವರು ಬಸವಣ್ಣ. ಬಸವಣ್ಣನವರ ನಂತರ 19-20 ಶತಮಾನದಲ್ಲಿ ವೀರಶೈವ ಧರ್ಮದ ಉದ್ಧಾರ, ಲೋಕ ಕಲ್ಯಾಣಕ್ಕಾಗಿ ಶ್ರಮಿಸಿದ ಯೋಗಿಗಳು ಹಾನಗಲ್‌ ಕ್ಷೇತ್ರದ ವಿರಾಟಪುರದ ಶ್ರೀ ಕುಮಾರ ಶಿವಯೋಗಿಗಳು. ಶ್ರೀ ಕುಮಾರ ಶಿವಯೋಗಿಗಳ ಜೀವನಗಾಥೆ ಲೋಕಕ್ಕೆ ಮಾದರಿಯಾಗಿದ್ದು, ಈ ವಾರ ತೆರೆ ಕಂಡ “ವಿರಾಟಪುರ ವಿರಾಗಿ’ ಚಿತ್ರ ಅದಕ್ಕೆ ಸಾಕ್ಷಿಯಾಗಿದೆ.

ನಿರ್ದೇಶಕ ಬಿ.ಎಸ್‌ ಲಿಂಗದೇವರು ನಿರ್ದೇಶನದ ಈ ಚಿತ್ರ ಶ್ರೀಗಳ ಜೀವನಾಧಾರಿತ ಚಿತ್ರವಾಗಿದೆ. ಶಿವಯೋಗಿಗಳ ಕುರಿತು ಸಂಪೂರ್ಣ ಅಧ್ಯಯನ ನಡೆಸಿ , ಅವರ ಜೀವನ ಘಟ್ಟದ ಅತೀ ಮುಖ್ಯ ಅಂಶಗಳನ್ನು ಮೂರು ಗಂಟೆಗಳ ಮಿತಿಯಲ್ಲಿ ಪ್ರಸ್ತುತಪಡಿಸುವ ಪ್ರಯತ್ನ ಚಿತ್ರತಂಡದ್ದಾಗಿದೆ.

ಶ್ರೀ ಕುಮಾರ ಶಿವಯೋಗಿಗಳ ಬಾಲ್ಯ, ಓದು, ಆತ್ಮಲಿಂಗದ ಕಡೆಗಿನ ಒಲವು, ಸನ್ಯಾಸ, ಸಮಾಜ ಪರ ಕಾರ್ಯಗಳು ಎಲ್ಲವನ್ನೂ ದೃಶ್ಯ ಕಾವ್ಯದ ಮೂಲಕ ತೋರಿಸಲಾಗಿದೆ. ಶ್ರೀ ಕುಮಾರ ಶಿವಯೋಗಿಗಳ , ಬದುಕಿನ ದಾರಿಯೇ ಭಿನ್ನವಾಗಿದ್ದು, ಸಮಾಜದಲ್ಲಿ ಶಿಕ್ಷಣ, ಅದರಲ್ಲೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಲ್ಲಿ, ಜಾತಿ ಪದ್ಧತಿಯನ್ನು ಹೋಗಲಾಡಿಸುವಲ್ಲಿ ಶ್ರೀಗಳು ನಡೆಸಿದ್ದು ಒಂದು ಕ್ರಾಂತಿ. ಭೀಕರ ಬರಗಾಲದಲ್ಲಿ ಅನ್ನದಾಸೋಹ ನಡೆಸಿ, ಪ್ಲೇಗ್‌ ರೋಗ ಇಡೀ ಊರನ್ನೇ ಆವರಿಸಿದಾಗ ಜನರನ್ನು ಆರೈಕೆ ಮಾಡಿ, ಬಡಜನರಿಗೆ ದಾರಿ ಯಾದವರು ಶ್ರೀ ಕುಮಾರ ಶಿವಯೋಗಿಗಳು. ವೀರಶೈವ ಮಹಾಸಭಾ ಆರಂಭಿಸಿ, ಸಮಾಜಮುಖೀ ಕಾರ್ಯಗಳಿಗೆ ಹೇಗೆ ಹೆಸರಾಗಿದ್ದರು ಎಂಬುದನ್ನು ಚಿತ್ರದಲ್ಲಿ ನೋಡಬಹುದಾಗಿದೆ.

ಇನ್ನು, ಚಿತ್ರದಲ್ಲಿ ನಟ ಸುಚೇಂದ್ರ ಪ್ರಸಾದ್‌, ಶಿವಯೋಗಿಗಳ ಪಾತ್ರ ನಿರ್ವಹಿಸಿದ್ದು, ತಮ್ಮ ಅಭಿನಯದ ಮೂಲಕ ಪಾತ್ರಕ್ಕೆ ಜೀವತುಂಬಿದ್ದಾರೆ. ಜೊತೆಯಲ್ಲಿ ಉತ್ತರ ಕರ್ನಾಟಕದ ರಂಗಭೂಮಿ ಕಲಾವಿದರು ಅಭಿನಯಿಸಿದ್ದು, ಕೆಲ ಸ್ವಾಮಿಜಿಗಳ ಪಾತ್ರಗಳನ್ನು ಸ್ವತಃ ಸ್ವಾಮಿಜಿಗಳೇ ನಿರ್ವಹಿ ಸಿದ್ದಾರೆ. ಶ್ರೀ ಪಂಚಾಕ್ಷರಿಗವಾಯಿಗಳ ಸಂಗೀತ ಆರಂಭವಾ ಗಿದ್ದ ದಿನಗಳ ಕುರಿತ ಅಂಶವನ್ನು ಇಲ್ಲಿ ತೋರಿಸಲಾಗಿದೆ.

“ವಿರಾಟಪುರ ವಿರಾಗಿ’ ಚಿತ್ರ ಕಮರ್ಷಿಯಲ್‌ ಅಂಶಗಳಿಂದ ಹೊರತಾಗಿದ್ದು, ಕಮರ್ಷಿಯಲ್‌ ಚಿತ್ರಗಳಿಂದಾಚಿನ ಚಿತ್ರ ಬಯಸುವವರು ನೋಡಬಹುದಾದ ಚಿತ್ರ.

ವಾಣಿ ಭಟ್ಟ

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.