ತೆರಿಗೆ ವಂಚನೆ ಆರೋಪ: ಶ್ರೀರಾಮುಲು ಒಡೆತನದ ಕಚೇರಿಗೆ ಐಟಿ ದಾಳಿ
Team Udayavani, Jan 15, 2023, 12:30 AM IST
ಬಳ್ಳಾರಿ: ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಸಚಿವ ಬಿ.ಶ್ರೀರಾಮುಲು ಮತ್ತವರ ಅಳಿಯ ಮಾಜಿ ಶಾಸಕ ಟಿ.ಎಚ್. ಸುರೇಶ್ಬಾಬು ಒಡೆತನದ ಫ್ಯಾಕ್ಟರಿ ನಡೆಸುತ್ತಿದ್ದ ವ್ಯಕ್ತಿಯ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿ ಕಾರಿಗಳು ಶನಿವಾರ ದಾಳಿ ನಡೆಸಿದರು.
ಬೆಂಗಳೂರು ಹಾಗೂ ಚೆನ್ನೈ ಮೂಲದ ಹದಿನೈದು ಮಂದಿ ಅಧಿಕಾರಿಗಳ ತಂಡ, ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ಪಾಲುದಾರಿಕೆಯ ಬೆಂಗಳೂರು, ಬಳ್ಳಾರಿ, ಕೊಪ್ಪಳದಲ್ಲಿರುವ ಕಂಪೆನಿಗಳ ಮೇಲೆ ದಾಳಿ ನಡೆಸಿದೆ. ಬಳ್ಳಾರಿಯ ವಿದ್ಯಾನಗರದ “ರಾಗಾಸ್ ಪೋರ್ಟ್ ಅಪಾರ್ಟ್ ಮೆಂಟ್ ’ನ ಎರಡು ಫ್ಲ್ಯಾಟ್ಗಳಲ್ಲೂ ದಾಖಲೆಗಳ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ.
ಸಚಿವ ಶ್ರೀರಾಮುಲು, ಮಾಜಿ ಶಾಸಕ ಸುರೇಶ್ ಬಾಬು, ಲಾಡ್ ಕುಟುಂಬದ ಪ್ಲಾಂಟ್ಗಳನ್ನು ಪಾಲುದಾರ ಕೈಲಾಸ್ ವ್ಯಾಸ್ ಅವರು ಬಾಡಿಗೆ ಹಾಗೂ ಲೀಜ್ ಮೇಲೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು
Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ