ಪೈಪೋಟಿ ನಡುವೆಯೂ 100 ಕೋಟಿ ದಾಟಿದ ʼವಾರಿಸುʼ, ʼತುನಿವುʼ: ಪೊಂಗಲ್ ಹಬ್ಬಕ್ಕೆ ಹೌಸ್ ಫುಲ್
Team Udayavani, Jan 15, 2023, 11:28 AM IST
ಚೆನ್ನೈ: ದಳಪತಿ ವಿಜಯ್ ʼವಾರಿಸುʼ ಹಾಗೂ ಅಜಿತ್ ಕುಮಾರ್ ʼತುನಿವುʼ ಕಾಲಿವುಡ್ ನಲ್ಲಿ ವರ್ಷದ ಮೊದಲ ದೊಡ್ಡ ಹಿಟ್ಗಳತ್ತ ಸಾಗುತ್ತಿದೆ. ನಿರೀಕ್ಷೆಯಂತೆ ಸಿನಿಮಾಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಗಳಿಕೆಯಲ್ಲೂ ಹಿಂದೆ ಬಿದ್ದಿಲ್ಲ.
ಪೊಂಗಲ್ ಹಬ್ಬವನ್ನು ಗುರಿಯಾಗಿಸಿಕೊಂಡು ಜ.11 ರಂದು ವಿಶ್ವದಾದ್ಯಂತ ತೆರೆಗೆ ಬಂದ ʼವಾರಿಸುʼ ಮೊದಲ ದಿನದಲ್ಲೇ ವರ್ಲ್ಡ್ ವೈಡ್ 45 ಕೋಟಿ ಗಳಿಕೆ ಕಂಡಿತ್ತು. ನಿರೀಕ್ಷೆಯಂತೆ ವಿಜಯ್ ಸಿನಿಮಾ 100 ಕೋಟಿ ಗಳಿಕೆಯನ್ನು ಕಂಡಿದೆ. ರಿಲೀಸ್ ಆದ ಐದೇ ದಿನದಲ್ಲೇ ಸಿನಿಮಾ 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿ ಸದ್ದು ಮಾಡಿದೆ.
ಸಿನಿಮಾ ವ್ಯಾಪಾರ ವಿಶ್ಲೇಷಕ ರಮೇಶ್ ಬಾಲಾ ಅವರು ಟ್ವೀಟ್ ಮಾಡಿದ್ದು, ʼವಾರಿಸುʼ ಹಾಗೂ ʼತುನಿವುʼ ಸಿನಿಮಾ ವರ್ಲ್ಡ್ ವೈಡ್ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿಗೂ ಅಧಿಕ ಗಳಿಕೆ ಕಂಡಿದೆ ಎಂದು ಹೇಳಿದ್ದಾರೆ.
ಅಜಿತ್ ಕುಮಾರ್ ಅವರ ʼತುನಿವುʼ ಸಿನಿಮಾದೊಂದಿಗೆ ಪೈಪೋಟಿ ನೀಡಿ, ʼವಾರಿಸುʼ ಎದ್ದು ಗೆದ್ದು ಬಂದಿದೆ. ಶ್ರೀಮಂತ ಉದ್ಯಮಿ ಕುಟುಂಬದ ಕಥೆಯಲ್ಲಿ ವಿಜಯ್ ಮಾಸ್ & ಕ್ಲಾಸ್ ಲುಕ್ ನಲ್ಲಿ ಮಿಂಚಿದ್ದಾರೆ.
ಇದನ್ನೂ ಓದಿ: ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ: ಜೈಲಿನಲ್ಲಿದ್ದುಕೊಂಡೇ ಕೃತ್ಯವೆಸಗಿದ ಪುತ್ತೂರಿನ ಜಯೇಶ್
ದಿಲ್ ರಾಜು ಸಿನಿಮಾಕ್ಕೆ ಬಂಡವಾಳ ಹಾಕಿದ್ದು, ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ, ಪ್ರಕಾಶ್ ರಾಜ್, ಶರತ್ ಕುಮಾರ್, ಜಯಸುಧಾ, ಶ್ರೀಕಾಂತ್, ಶಾಮ್ ,ಯೋಗಿ ಬಾಬು ಮುಂತಾದ ಕಲಾವಿದರು ಬಣ್ಣ ಹಚ್ಚಿದ್ದಾರೆ.
ವಾರಿಸು ʼ ವಾರ್ಸುಡುʼ ಆಗಿ ತೆಲುಗು ವರ್ಷನ್ ನಲ್ಲಿ ಜ.14 ರಿಂದ ಆಂಧ್ರ ಹಾಗೂ ತೆಲಂಗಾಣದಲ್ಲಿ ರಿಲೀಸ್ ಆಗಿದೆ.
ಇತ್ತ ಮಾಸ್ ಪ್ರಿಯರ ಮನ ಕದ್ದ ʼತುನಿವುʼ ಕೂಡ ವಿಶ್ವದಾದ್ಯಂತ 100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸದ್ದು ಮಾಡಿದೆ.
ಆಸ್ಟ್ರೇಲಿಯಾದಲ್ಲಿ ʼತುನಿವುʼ ಅಜಿತ್ ಕುಮಾರ್ ನ ʼ ವಿವೇಗಂʼ ದಾಖಲೆಯನ್ನು ಮುರಿದು ಹೆಚ್ಚಿನ ಕಲೆಕ್ಷನ್ ಮಾಡಿದೆ.
ಉತ್ತರ ಅಮೆರಿಕಾದಲ್ಲಿ ʼತುನಿವುʼ 6 ಕೋಟಿಗೂ ಅಧಿಕ ಕಮಾಯಿ ಮಾಡಿದೆ. ಮಂಜು ವಾರಿಯರ್, ಜಾನ್ ಕೊಕ್ಕೆನ್, ಅಮೀರ್, ಪಾವ್ನಿ ಮತ್ತು ಬಗವತಿ ಪೆರುಮಾಳ್ ಮುಂತಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ಹೆಚ್. ವಿನೋಥ್ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
Arrested: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ
Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ