ಖಾತೆ ಸಮಸ್ಯೆ: ನಗರಸಭೆ ವಿರುದ್ಧ  ಪ್ರತಿಭಟನೆ ಎಚ್ಚರಿಕೆ


Team Udayavani, Jan 15, 2023, 2:30 PM IST

tdy-13

ಚನ್ನಪಟ್ಟಣ: ಕಳೆದ 20 ವರ್ಷಗಳಿಂದಲೂ ನಗರಸಭೆಯ ಅಧಿಕಾರಿಗಳು ಸಿಎಂಸಿ ಬಡಾವಣೆಯ ನಿವೇಶನಗಳ ಖಾತೆಯ ಸಮಸ್ಯೆಯನ್ನು ಬಗೆಹರಿಸುವ ಬದಲಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಹಾಗೂ ದಲಿತರಿಗೆ ಸೇರಿರುವ ನಿವೇಶನಗಳು ಎಂಬ ಉದ್ದೇಶದಿಂದ ಕಡೆಗಣನೆ ಮಾಡುತ್ತಿದ್ದಾರೆ. ಮೂಲ ದಾಖಲೆಗಳನ್ನು ನೀಡಿದರೂ, ಹಿಂದೇಟು ಹಾಕುತ್ತಿರುವ ನಗರಸಭೆ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ಮಾಡಲು ಸ್ಥಳೀಯ ನಿವಾಸಿಗಳು ಮುಂದಾಗಬೇಕಾಗಿದೆ ಎಂದು ನಿವೃತ್ತ ಶಿಕ್ಷಕ ಶಿವಣ್ಣ ತಿಳಿಸಿದರು.

ಸಿಎಂಸಿ ಬಡಾವಣೆಯ ಉದ್ಯಾನವನದಲ್ಲಿ ಸಿಎಂಸಿ ಬಡಾವಣೆ ನಾಗರಿಕರ ಹಿತರಕ್ಷಣಾ ವೇದಿಕೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೆ ದಾಖಲೆಗಳ ಮೂಲಕ ಕೋರ್ಟ್‌ಗೆ ದೂರು ಸಲ್ಲಿಸಿದ್ದು, ಇದರ ಬಗ್ಗೆ ನಮಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ. ಕೆಲವೊಂದು ಬಾರಿ ನಗರಸಭೆಯಲ್ಲಿ ಖಾತೆಗಳ ಬಗ್ಗೆ ಪ್ರಶ್ನಿಸಿದರೆ, ಇದಕ್ಕೂ ನಮಗೂ ಸಂಭಂದವಿಲ್ಲ ಎಂದು ಅಡ್ಡಗೋಡೆಯಲ್ಲಿ ದೀಪವಿಟ್ಟಂತೆ ತಿಳಿಸಿ ಈಗಲ್ಲ ಮುಂದಿನ ದಿನಗಳಲ್ಲಿ ಖಾತೆ ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಅರ್ಜಿ ಸಲ್ಲಿಸಿ ರಸೀದಿ ಪಡೆಯಿರಿ: ನಿವೇಶನಗಳ ಖಾತೆಗಾಗಿ ಫೆ. ಮೊದಲನೇ ವಾರಕ್ಕೆ ವಾದವಿದ್ದು, ನಮ್ಮಗಳ ಪರವಾಗಿ ಆದೇಶ ಹೊರಡಲಿದೆ ಎಂಬ ವಿಶ್ವಾಸವಿದೆ. ಇದರ ಬಗ್ಗೆ ಈಗಾಗಲೆ ವಕೀಲರು ಮಾಹಿತಿ ನೀಡಿದ್ದಾರೆ. ಅಕಸ್ಮಾತ್‌ ಬದಲಾವಣೆ ಅದರೂ ಸಹ ನಗರಸಭೆಗೆ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಿ ರಸೀದಿ ಪಡೆಯಿರಿ. ಈಗಾಗಲೆ 470 ನಿವೇಶನಗಳಲ್ಲಿ 272 ನಿವೇಶನಗಳಿಗೆ ಖಾತೆ ಯಾಕೇ ಆಗಿಲ್ಲ ಎಂಬ ಪ್ರಶ್ನೆàಯ ಮೂಲಕ ಹೋರಾಟ ಮಾಡೋಣ ಎಂದರು.

ಪೌರಾಯುಕ್ತರ ಜತೆಯಲ್ಲಿ ಚರ್ಚೆ: ರೇಷ್ಮೇ ಇಲಾಖೆಯ ನಿವೃತ್ತ ಅಧಿಕಾರಿ ಗುಂಡಣ್ಣ ಮಾತನಾಡಿ, ಇ-ಖಾತೆಗಳಿಗೆ ನಿವೇಶನದಾರರು ನಿಮ್ಮಗಳ ನಿವೇಶನಗಳಲ್ಲಿ ಭಾವಚಿತ್ರ ತಗೆದುಕೊಂಡು ಇಸಿ ಮತ್ತು ಪತ್ರಗಳನ್ನು ಮತ್ತೋಮ್ಮೆ ನಗರಸಭೆ ಸಲ್ಲಿಸಲು ನಿವೆಲ್ಲರೂ ಮುಂದಾಗಬೇಕಾಗಿದೆ. ಈಗಾಗಲೆ ಪೌರಾಯುಕ್ತರ ಜತೆಯಲ್ಲಿ ಚರ್ಚಿಸಲಾಗಿದೆ. ಕೋರ್ಟ್‌ ಅದೇಶ ಬರುವ ಮುನ್ನವೇ ನಮ್ಮಗಳ ಜವಾಬ್ದಾರಿಯುತವಾದ ಕಾರ್ಯ ನಿರ್ವಹಿಸೋಣ ಎಂದು ತಿಳಿಸಿದರು.

ಸಮಸ್ಯೆ ಬಗ್ಗೆ ಕಿಂಚಿತ್ತು ಕಣ್ಣು ಬಿಟ್ಟಿಲ್ಲ: ನಿವೃತ್ತ ಪ್ರಾಂಶುಪಾಲ ಶಿವರಾಮೇಗೌಡ ಮಾತನಾಡಿ, ಹಿಂದೆ ಆಗಿರುವ ತೊಂದರೆಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಸರ್ಕಾರದ ಅದೇಶದಂತೆ ಮೂಲ ದಾಖಲೆಗಳನ್ನು ಸಿದ್ದಪಡಿಸಿ ಅರ್ಜಿ ಸಲ್ಲಿಸಿ. ನಗರಸಭೆ ಸದಸ್ಯರು ಪಕ್ಷೇತರವಾಗಿ ಜಯಗಳಿಸಿದ್ದಾರೆ. ಮುಖ್ಯಮಂತ್ರಿ ಯಾಗಲಿ, ಶಾಸಕರಾಗಲಿ, ಯಾರೇ ಜನಪ್ರತಿನಿಧಿಗಳಾ ಗಲಿ ಇದರ ಬಗ್ಗೆ ಕಿಂಚಿತ್ತು ಕಣ್ಣು ಬಿಟ್ಟಿಲ್ಲ. ಹಾಗಾಗಿ, ಪಕ್ಷೇತರವಾಗಿ ಜಯಗಳಿಸಿ ನಗರಸಭೆ ಸದಸ್ಯರಾಗಿ ರುವ ನೀವು ಇದರ ಬಗ್ಗೆ ಗಮನ ಹರಿಸಬೇಕಾಗಿದೆ ಎಂದರು. ನಗರಸಭೆ ಸದಸ್ಯ ಕುಮಾರ್‌, ಆರ್‌ಟಿಒ ಮಾದೇವಪ್ಪ, ಅಭಿಯಂತರ ರಾಜಣ್ಣ, ಮರಿಯಪ್ಪ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.