ನೋಟಿಸ್ ನೀಡಿದ ಮೂರು ತಿಂಗಳಲ್ಲೇ ವಾಜಪೇಯಿ ಸಂಪುಟ ಸೇರಿದ್ದೆ: ಯತ್ನಾಳ್

ನನ್ನ ಮಾತುಗಳು ಪಕ್ಷ ವಿರೋಧಿ ಚಟುವಟಿಕೆ ಆಗಲು ಹೇಗೆ ಸಾಧ್ಯವಿದೆ?

Team Udayavani, Jan 16, 2023, 8:26 PM IST

yatnal

ವಿಜಯಪುರ : ಎರಡು ದಶಕದ ಹಿಂದೆ ನನಗೆ ನೋಟಿಸ್ ನೀಡಿದ ಮೂರು ತಿಂಗಳಲ್ಲೇ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಮಂತ್ರಿ ಆಗಿದ್ದೆ. ಆದರೆ ಈ ಬಾರಿ ನನಗೆ ಕಾರಣ ಕೇಳಿ ಯಾವುದೇ ನೋಟಿಸ್ ಬಂದಿಲ್ಲ, ಇದೆಲ್ಲ ವದಂತಿ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿ, ನನಗೆ ಕೇಂದ್ರದಿಂದ ಯಾವುದೇ ನೋಟಿಸ್ ಬಂದಿಲ್ಲ. ನಿನ್ನೇ ವರಿಷ್ಠರೇ ನನ್ನೊಂದಿಗೆ ಮತನಾಡಿದ್ದಾರೆ. ಹೀಗಾಗಿ ವದಂತಿಗಳಿಗೆ ನಾನು ಹೆದರುವ ವ್ಯಕ್ತಿಯಲ್ಲ. ಸುಮ್ಮನೆ ಊಹಾ ಪೂಹ ಹರಡಿಸಿದ್ದಾರೆ ನಾನು ನೋಟಿಸ್ ಕೊಡುವಂತಹ ಯಾವುದೆ ಪಕ್ಷದ ವಿರೋಧಿ ಹೇಳಿಕೆ ನೀಡಿಲ್ಲ. ಭ್ರಷ್ಟರು, ವಂಶಪಾರಂಪರ್ಯ ರಾಜಕೀಯ ಮಾಡುವವರ ಬಗ್ಗೆ ಮಾತನಾಡಿದ್ದೇನೆ. ಇಂಥ ಮಾತುಗಳು ಪಕ್ಷ ವಿರೋಧಿ ಚಟುವಟಿಕೆ ಆಗಲು ಹೇಗೆ ಸಾಧ್ಯವಿದೆ ಎಂದು ಪ್ರಶ್ನಿಸಿದರು.

ತಮ್ಮ ವಿರುದ್ಧ ಇಷ್ಟೆಲ್ಲ ಮಾತನಾಡುತ್ತಿದ್ದರೂ ನೋಟಿಸ್ ನೀಡಿಲ್ಲ ಎಂದು ರಾಜಕೀಯ ವಿರೋಧಿಗಳು ನಡೆಸಿರುವ ಷಡ್ಯಂತ್ರವಿದು. ಹೀಗಾಗಿ ಊಹಾಪೋಹದ ವದಂತಿ ಹರಸಿಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ವರಿಷ್ಠರು ನನ್ನ ವಿರುದ್ಧ ಅನಗತ್ಯವಾಗಿ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.

ನನಗೆ ನೋಟಿಸ್ ನೀಡಿದ್ದರೆ ಇಷ್ಟರಲ್ಲಾಗಲೇ ನನಗೆ ತಲುಪುತಿತ್ತು. ಭ್ರಷ್ಟಾಚಾರ, ಅಕ್ರಮ ಕೃತ್ಯಗಳಂಥ ಯಾವುದೇ ಆರೋಪ ಇಲ್ಲದ ನನ್ನ ಮೇಲೆ ಇಲ್ಲ. ಚುನಾವಣೆ ಹತ್ತಿರ ಇರುವಾಗ ನನ್ನಂಥ ಉತ್ತಮ ನಾಯಕನನ್ನು ಅನಗತ್ಯವಾಗಿ ಕಳೆದುಕೊಳ್ಳಲು ಬಿಜೆಪಿ ವರಿಷ್ಠರು ಬಯಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನೆರಡು ದಿನಗಳಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ನಡೆಯಲಿದೆ. ಕಾರ್ಯಕಾರಿಣಿಯಲ್ಲಿ ಬಹುದೊಡ್ಡ ನಿರ್ಣಯಗಳು ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಮುಂದಿನ ಚುನಾವಣೆಗಳ ದೃಷ್ಟಿಯಿಂದ ಬಹಳ ಬದಲಾವಣೆ ಮಾಡುವ ಸಾಧ್ಯತೆ ಇವೆ. ನಿಮ್ಮ ಪರವಾಗಿಯೂ ಒಳ್ಳೆಯ ನಿರ್ಣಯ ಆಗಲಿದೆ ಎಂದು ತಿಳಿಸಿದ್ದಾರೆ ಎಂದರು.

ವಿಜಯಪುರಕ್ಕೆ ಬಂದಿದ್ದ ವೇಳೆ ಅರುಣಸಿಂಗ್ ನನ್ನ ಜೊತೆಗೆ ಮಾತನಾಡಿದ್ದಾರೆ. ನಾನು ಮಂತ್ರಿ-ಮುಖ್ಯಮಂತ್ರಿ ಸ್ಥಾನ ಕೇಳಿಲ್ಲ. ರಾಜ್ಯದಲ್ಲಿ ನಾನು ಮಂತ್ರಿಗಿಂತ ಪವರ್ ಪುಲ್ ಆಗಿದ್ದೀನಿ. ಸಂಪುಟದ ಎಲ್ಲ ಮಂತ್ರಿಗಳು ನನ್ನ ಸ್ನೇಹಿತರೇ. ಹೀಗಾಗಿ ಎಲ್ಲರೂ ನನ್ನ ಬೇಡಿಕೆಗೆ ಸ್ಪಂದಿಸುತ್ತಾರೆ. ಹೀಗಾಗಿ ನಾನು ಯಾವುದನ್ನು ನಿರೀಕ್ಷೆ ಮಾಡುವುದಿಲ್ಲ ಎಂದರು.

ಮೋದಿ ಆಶೀರ್ವಾದವೇ ಇರಬೇಕು ಎನ್ನುತ್ತಿದ್ದಾರೆ. ಸತ್ಯ, ಒಳ್ಳೆಯತನಕ್ಕೆ ಆಶೀರ್ವಾದ ಇರುತ್ತದೆ. ವಾಜಪೇಯಿ ಕಾಲದಲ್ಲೂ ನನಗೆ ನೋಟಿಸ್ ನೀಡಿದ ಬೆನ್ನಲ್ಲೇ ಮಂತ್ರಿ ಮಾಡಿದ ಮಾದರಿಯಲ್ಲಿ ಈಗಲೂ ನೋಟಿಸ್ ನೀಡಿದ್ದರೆ ಊಹಾಪೋಹದ ಷಡ್ಯಂತ್ರ ಮಾಡಿದವರು ಹೈರಾಣಾಗುವಂತೆ ಸಂಕ್ರಮಣದ ಉತ್ತರಾಯಣ ಕಾಲದಲ್ಲಿ ನನಗೆ ಒಳ್ಳೆಯದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.