ಅಂಡರ್‌ 19 ವನಿತಾ ಟಿ20 ವಿಶ್ವಕಪ್‌ ;ಭಾರತ ವನಿತೆಯರಿಗೆ ಭರ್ಜರಿ ಗೆಲುವು: ಯುಎಇಗೆ ಸೋಲು


Team Udayavani, Jan 16, 2023, 11:30 PM IST

1-sadsadas

ಬೆನೋನಿ (ದಕ್ಷಿಣ ಆಫ್ರಿಕಾ): ನಾಯಕಿ ಶಫಾಲಿ ವರ್ಮ ಅವರ ಸ್ಫೋಟಕ ಆಟ ಮತ್ತು ಆರಂಭಿಕ ಆಟಗಾರ್ತಿ ಶ್ವೇತಾ ಸೆಹ್ರಾವತ್‌ ಅವರ ಅಮೋಘ ಆಟದಿಂದಾಗಿ ಭಾರತೀಯ ತಂಡವು ಅಂಡರ್‌ 19 ವನಿತಾ ಟಿ20 ವಿಶ್ವಕಪ್‌ನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಯುಎಇ ತಂಡವನ್ನು 122 ರನ್ನುಗಳಿಂದ ಭರ್ಜರಿಯಾಗಿ ಸೋಲಿಸಿದೆ.

ಶಫಾಲಿ, ಶ್ವೇತಾ ಮತ್ತು ರಿಚಾ ಘೋಷ್‌ ಅವರ ಭರ್ಜರಿ ಆಟ ದಿಂದಾಗಿ ಭಾರತವು ಮೂರು ವಿಕೆಟಿಗೆ 219 ರನ್ನುಗಳ ಬೃಹತ್‌ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ ಭಾರತೀಯ ಬೌಲರ್‌ಗಳ ನಿಖರ ದಾಳಿಗೆ ರನ್‌ ಗಳಿಸಲು ಒದ್ದಾಡಿದ ಯುಎಇ ಆಟಗಾರ್ತಿಯರು 5 ವಿಕೆಟಿಗೆ ಕೇವಲ 97 ರನ್‌ ಗಳಿಸಲಷ್ಟೇ ಶಕ್ತರಾಗಿ ಶರಣಾದರು.

“ಡಿ’ ಬಣದಲ್ಲಿ ಆಡುತ್ತಿರುವ ಭಾರತಕ್ಕೆ ಇದು ಎರಡನೇ ಗೆಲುವು ಆಗಿದ್ದು ಅಗ್ರಸ್ಥಾನವನ್ನು ಇನ್ನಷ್ಟು ಭದ್ರಪಡಿಸಿಕೊಂಡಿದೆ. ಮೊದಲ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿತ್ತು.

ಶಫಾಲಿ, ಶ್ವೇತಾ ಅಮೋಘ ಆಟ
ಸೀನಿಯರ್‌ ತಂಡದಲ್ಲಿ ಆಡಿದ ಅನುಭವ ಹೊಂದಿರುವ ಶಫಾಲಿ ಮತ್ತೆ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿ ತಂಡದ ಬೃಹತ್‌ ಮೊತ್ತಕ್ಕೆ ಕಾರಣರಾದರು. ಬೌಂಡರಿಗಳ ಸುರಿಮಳೆಗೈದ ಅವರು ಮೊದಲ ವಿಕೆಟಿಗೆ ಶ್ವೇತಾ ಜತೆ ಕೇವಲ 8.3 ಓವರ್‌ಗಳಲ್ಲಿ 111 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡರು. ಕೇವಲ 34 ಎಸೆತ ಎದುರಿಸಿದ ಅವರು 12 ಬೌಂಡರಿ ಮತ್ತು 4 ಸಿಕ್ಸರ್‌ ನೆರವಿನಿಂದ 78 ರನ್‌ ಗಳಿಸಿದರು.
ಶ್ವೇತಾ ಮತ್ತು ರಿಚಾ ಘೋಷ್‌ ಕೂಡ ಉತ್ತಮ ಆಟದ ಪ್ರದರ್ಶನ ನೀಡಿದ್ದರಿಂದ ತಂಡದ ಮೊತ್ತ 200ರ ಗಡಿ ದಾಟುವಂತಾಯಿತು. ಅವರಿಬ್ಬರು ದ್ವಿತೀಯ ವಿಕೆಟಿಗೆ 89 ರನ್‌ ಪೇರಿಸಿದರು. 49 ಎಸೆತ ಎದುರಿಸಿದ ಅವರು ಶ್ವೇತಾ 10 ಬೌಂಡರಿ ನೆರವಿನಿಂದ 74 ರನ್‌ ಗಳಿಸಿ ಔಟಾಗದೆ ಉಳಿದರೆ ರಿಚಾ ಕೇವಲ 29 ಎಸೆತಗಳಿಂದ 5 ಬೌಂಡರಿ ಮತ್ತು 2 ಸಿಕ್ಸರ ನೆರವಿನಿಂದ 49 ರನ್‌ ಗಳಿಸಿದರು.

ಸಂಕ್ಷಿಪ್ತ ಸ್ಕೋರು
ಭಾರತ 3 ವಿಕೆಟಿಗೆ 219 (ಶ್ವೇತಾ ಸೆಹ್ರಾವತ್‌ 74 ಔಟಾಗದೆ, ಶಫಾಲಿ 78, ರಿಚಾ ಘೋಷ್‌ 49); ಯುಎಇ 5 ವಿಕೆಟಿಗೆ 97 (ಲಾವಣ್ಯ ಕೆನಿ 24, ಮಹಿಕಾ ಗೌರ್‌ 26).

ಬಾಂಗ್ಲಾಕ್ಕೆ 2ನೇ ಜಯ
ಬೆನೋನಿ: ಅಂಡರ್‌ 19 ವಿಶ್ವಕಪ್‌ನ ಇನ್ನೊಂದು ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಶ್ರೀಲಂಕಾ ತಂಡವನ್ನು 10 ರನ್ನುಗಳಿಂದ ಸೋಲಿಸಿದೆ. “ಎ’ ಬಣದಲ್ಲಿ ಆಡುತ್ತಿರುವ ಬಾಂಗ್ಲಾ ತಂಡಕ್ಕೆ ಇದು ಎರಡನೇ ಗೆಲುವು ಆಗಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾವು ಬಲಿಷ್ಠ ತಂಡಗಳಲ್ಲಿ ಒಂದಾದ ಆಸ್ಟ್ರೇಲಿಯವನ್ನು ಬಗ್ಗುಬಡಿದಿತ್ತು.

ಮೊದಲು ಬ್ಯಾಟಿಂಗ್‌ ನಡೆಸಿದ ಬಾಂಗ್ಲಾ ತಂಡವು ಕೇವಲ 2 ವಿಕೆಟಿಗೆ 165 ರನ್‌ ಗಳಿಸಿತ್ತು. ಆರಂಭಿಕ ಆಟಗಾರ್ತಿ ಅಫಿಯಾ ಪ್ರೊಟಶಾ ಮತ್ತು ಶೋರ್ಣ ಅಕ್ತೆರ್‌ ಅರ್ಧಶತಕ ಹೊಡೆದಿದ್ದರು. ಇದಕ್ಕುತ್ತರವಾಗಿ ಶ್ರೀಲಂಕಾ ತಂಡವು 4 ವಿಕೆಟ್‌ ಕಳೆದುಕೊಂಡಿದ್ದು 155 ರನ್‌ ಗಳಿಸಲಷ್ಟೇ ಶಕ್ತವಾಗಿತ್ತು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.