ನ್ಯಾಯಾಧೀಶರ ನೇಮಕ ವಿಚಾರದಲ್ಲಿ ಪ್ರತಿಷ್ಠೆ ಬೇಡ


Team Udayavani, Jan 17, 2023, 6:00 AM IST

ನ್ಯಾಯಾಧೀಶರ ನೇಮಕ ವಿಚಾರದಲ್ಲಿ ಪ್ರತಿಷ್ಠೆ ಬೇಡ

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯುತ್ತಮ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿರುವ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದಲ್ಲೀಗ ನ್ಯಾಯಾಂಗ ಮತ್ತು ಸರಕಾರದ ನಡುವೆ ತಿಕ್ಕಾಟ ತೀವ್ರಗೊಂಡಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆಯ ಅತ್ಯುನ್ನತ ನ್ಯಾಯಾಲಯಗಳಾಗಿರುವ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಾಧೀಶರನ್ನು ನೇಮಕ ಮಾಡುವ ವಿಚಾರ ಈ ವಿವಾದದ ಕೇಂದ್ರಬಿಂದು. ವಿವಾದ ತಲೆದೋರಿ ತಿಂಗಳುಗಳೇ ಉರುಳಿದ್ದರೂ ಇದಕ್ಕೊಂದು ಪರಿಹಾರೋಪಾಯವನ್ನು ಕಂಡುಹುಡುಕುವ ನಿಟ್ಟಿನಲ್ಲಿ ಇತ್ತಂಡಗಳಿಂದಲೂ ಸಕಾರಾತ್ಮಕ ಪ್ರಯತ್ನ ನಡೆಯದಿರುವುದು ಸೋಜಿಗವೇ ಸರಿ.

ನ್ಯಾಯಾಧೀಶರ ನೇಮಕಾತಿಯನ್ನು ಕೇಂದ್ರ ಸರಕಾರ ಮತ್ತುಸು. ಕೋ. ಪ್ರತಿಷ್ಠೆಯ ವಿಷಯವನ್ನಾಗಿಸಿಕೊಂಡಿದ್ದು ಪಾರಮ್ಯ ಮೆರೆಯಲು ಪೈಪೋಟಿ ನಡೆಸಿವೆ. ಈ ವಿಷಯವಾಗಿ ರಾಜ್ಯಸಭೆಯ ಸಭಾಧ್ಯಕ್ಷರೂ ಆಗಿರುವ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ಕೇಂದ್ರದ ಕಾನೂನು ಸಚಿವ ಕಿರಣ್‌ ರಿಜಿಜು ಬಹಿರಂಗ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಕ್ಕೆ ತುಪ್ಪ ಸುರಿಯುತ್ತಿದ್ದಾರೆ. ಸು. ಕೋ. ಮುಖ್ಯ ನ್ಯಾಯಾಧೀಶರ ನೇತೃತ್ವದ ಕೊಲೀಜಿಯಂ ಕೂಡ ಈ ವಿವಾದವನ್ನು ತಣ್ಣಗಾಗಿಸಲು ಮುಂದಾಗದೆ ಸರಕಾರದ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಹೆಚ್ಚಿನ ಆಸಕ್ತಿ ತೋರುತ್ತಿರುವುದು ದುರದೃಷ್ಟಕರ.

ಸರಕಾರ ಮತ್ತು ಕೊಲೀಜಿಯಂ ನಡುವಣ ಈ ಸಂಘರ್ಷದಿಂದಾಗಿ ದೇಶದ ವಿವಿಧ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾ ಧೀಶರ ಹಲವು ಹುದ್ದೆಗಳಿಗೆ ನೇಮಕಾತಿ ಸಾಧ್ಯವಾಗಿಲ್ಲ. ಇದರಿಂದಾಗಿ ಪ್ರಕರಣಗಳ ವಿಚಾರಣೆಯ ಮೇಲೆ ಭಾರೀ ಪರಿಣಾಮ ಬೀರುತ್ತಿದೆ.

ನ್ಯಾಯಾಧೀಶರ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರುವ ಅಗತ್ಯವಿದೆ ಎಂದು ಪ್ರತಿಪಾದಿಸುತ್ತಿರುವ ಕೇಂದ್ರ, ಸು. ಕೋ. ಸಂಸತ್‌ನ ಅಧಿಕಾರವನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಸರಕಾರವು ಸಂವಿಧಾನದ ಮೇಲೆ ಸವಾರಿ ಮಾಡಹೊರಟಿದೆ ಮತ್ತು ನ್ಯಾಯಾಂಗದ ಮೇಲೆ ತನ್ನ ಪ್ರಭಾವನ್ನು ಬೀರಲು ಮುಂದಾಗಿದೆ ಎಂಬುದು ಕೊಲೀಜಿಯಂನ ಪ್ರತ್ಯಾರೋಪ.

ಈ ವಿವಾದದ ಮುಂದುವರಿದ ಭಾಗವಾಗಿ ನ್ಯಾಯಾಧೀಶರ ನೇಮ ಕಾತಿಗಾಗಿರುವ ಕೊಲೀಜಿಯಂಗೆ ಕೇಂದ್ರ ಮತ್ತು ಆಯಾಯ ರಾಜ್ಯ ಸರಕಾರಗಳ ಪ್ರತಿನಿಧಿಯನ್ನು ಸೇರ್ಪಡೆಗೊಳಿಸುವಂತೆ ಸಲಹೆ ನೀಡಿ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಸು. ಕೋರ್ಟ್‌ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿರುವುದು ಈ ಕುರಿತಾಗಿನ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಆದರೆ ಕೊಲೀಜಿಯಂ ಕೇಂದ್ರದ ಈ ಸಲಹೆಯನ್ನು ಸಾರಾಸಗಟಾಗಿ ತಿರಸ್ಕರಿಸಿದೆ. ಅಷ್ಟು ಮಾತ್ರವಲ್ಲದೆ ಈ ಹಿಂದೆ ಸು. ಕೋರ್ಟ್‌ನಿಂದ ರದ್ದುಗೊಳಿಸಲ್ಪಟ್ಟ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗವನ್ನು ಹಿಂಬಾಗಿಲಿನಿಂದ ಜಾರಿಗೆ ತರುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದೆ.

ನ್ಯಾಯಾಧೀಶರ ನೇಮಕಾತಿ ವಿಷಯವಾಗಿ ಹೊತ್ತಿಕೊಂಡಿರುವ ಕಿಡಿ ಸದ್ಯಕ್ಕಂತೂ ಶಮನವಾಗುವ ಲಕ್ಷಣ ಕಾಣುತ್ತಿಲ್ಲ. ಇಂಥ ಗಂಭೀರ ವಿಷಯ ಗಳು ಸಾರ್ವಜನಿಕವಾಗಿ ಚರ್ಚೆಗೀಡಾಗುವುದು ಸರಿಯಲ್ಲ. ಸರಕಾರ ಮತ್ತು ನ್ಯಾಯಾಂಗ ಪರಸ್ಪರ ಕೊಡು-ಕೊಳ್ಳುವಿಕೆಯ ಮನೋಭಾವ ದೊಂದಿಗೆ ಸಂವಿಧಾನದ ಚೌಕಟ್ಟಿನಲ್ಲಿ ಈ ಸಮಸ್ಯೆಗೆ ಪರಿಹಾರ ಸೂತ್ರವನ್ನು ಕಂಡುಹಿಡಿಯಬೇಕಾದುದು ಇಂದಿನ ಅಗತ್ಯ ಮತ್ತು ಅನಿವಾರ್ಯತೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.