ರೋಗಿ ಸಾವಿಗೆ ಕಾರಣರಾದ ವೈದ್ಯರಿಗೆ 8 ಲಕ್ಷ ದಂಡ


Team Udayavani, Jan 17, 2023, 1:22 PM IST

ರೋಗಿ ಸಾವಿಗೆ ಕಾರಣರಾದ ವೈದ್ಯರಿಗೆ 8 ಲಕ್ಷ ದಂಡ

ಮೈಸೂರು: ವೈದ್ಯಕೀಯ ನಿರ್ಲಕ್ಷ್ಯದೊಂದಿಗೆ ಸೇವಾ ನ್ಯೂನತೆ ಎಸಗಿ ರೋಗಿಯ ಸಾವಿಗೆ ಕಾರಣರಾದ ಇಬ್ಬರು ವೈದ್ಯರಿಗೆ ಮೈಸೂರು ಜಿಲ್ಲಾ ಗ್ರಾಹಕ ಆಯೋಗ 8 ಲಕ್ಷ ರೂ.ದಂಡ ವಿಧಿಸಿದೆ.

ಮೈಸೂರಿನ ವಿಕ್ರಮ್‌ ಜ್ಯೋತ್‌ ಆಸ್ಪತ್ರೆಯ ವೈದ್ಯರಾದ ಡಾ.ರಾಜ್‌ ಕುಮಾರ್‌ ವಾಧ್ವಾ, ಡಾ.ಎನ್‌. ರಾಘವೇಂದ್ರ ದಂಡ ಪಾವತಿಸಬೇಕಾಗಿದೆ. ಇವರಿಬ್ಬರ ನಿರ್ಲಕ್ಷ್ಯದಿಂದ ಮೈಸೂರಿನ ಕುವೆಂಪು ನಗರದ ನಿವಾಸಿ ಕೆ.ಶಂಕರ ನಾರಾಯಣ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ದಾವೆ ಹೂಡಲಾಗಿತ್ತು.

ಮೈಸೂರಿನ ಕುವೆಂಪು ನಗರದ ನಿವಾಸಿ ಎಚ್‌.ಜೆ. ವನಜಾಕ್ಷಿಯವರ ಪತಿ ಕೆ.ಶಂಕರ ನಾರಾಯಣ ಅವರು 2015ರ ಸಮಯದಲ್ಲಿ ಅನಾರೋಗ್ಯದ ಕಾರಣ ಯಾದವಗಿರಿಯಲ್ಲಿರುವ ವಿಕ್ರಮ್‌ ಜ್ಯೋತ್‌ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆ ಸಮಯದಲ್ಲಿ ಡಾ.ರಾಜ್‌ ಕುಮಾರ್‌ ವಾಧ್ವಾ ಅವರು ಶಂಕರ ನಾರಾಯಣ ಅವರಿಗೆ ಚಿಕಿತ್ಸೆ ನೀಡಿದ್ದಲ್ಲದೆ ಮಾತ್ರೆಯನ್ನು ಸೇವಿಸುವಂತೆ ಸಲಹೆ ನೀಡಿದ್ದರು. ಬಳಿಕ ಹೊಟ್ಟೆನೋವಿನ ಕಾರಣ ಶಂಕರ್‌ ನಾರಾಯಣ ಅವರು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದರು.

ಆಗ ಎಂಐಆರ್‌ ಸ್ಕ್ಯಾನ್‌ ಮಾಡಲಾಗಿ ಯಾವುದೇ ಸಮಸ್ಯೆ ಕಂಡುಬರಲಿಲ್ಲ. ನಂತರ ಶಂಕರ್‌ ನಾರಾಯಣ ಅವರಿಗೆ ಚಿಕಿತ್ಸೆ ನೀಡುವಂತೆ ಡಾ.ಎನ್‌.ರಾಘವೇಂದ್ರರಿಗೆ ಸೂಚಿಸಲಾಯಿತು. ಅವರು ಶಂಕರ ನಾರಾಯಣ ಅವರು ಕ್ಯಾನ್ಸರ್‌, ಅಲ್ಸರ್‌ ಅಥವಾ ಟಿ ಬಿ ಕಾಯಿಲೆಯಿಂದ ಬಳಲುತ್ತಿರಬಹುದೆಂಬ ಶಂಕೆಯಿಂದ ಅವರ ಪತ್ನಿ ವನಜಾಕ್ಷಿಯವರ ಗಮನಕ್ಕೆ ತಾರದೇ ಶಂಕರ ನಾರಾಯಣ ಅವರಿಗೆ ಲೆಪರಾಸ್ಕೋಪಿಕ್‌ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಶಸ್ತ್ರಚಿಕಿತ್ಸೆ ಸಮಯದಲ್ಲಿ ಸೂಕ್ತ ಎಚ್ಚರಿಕೆ ವಹಿಸದೇ ನಿರ್ಲಕ್ಷ್ಯ ತೋರಿದ್ದರಿಂದ ರೋಗಿಯು ಪ್ರಜ್ಞಾಹೀನ ಸ್ಥಿತಿಗೆ ಹೋಗುವಂತಾಯಿತು. ತದ ನಂತರ ಶಂಕರ ನಾರಾಯಣ್‌ ಅವರ ವಿವಿಧ ಅಂಗಗಳ ವೈಫ‌ಲ್ಯ ಉಂಟಾಗಿ ರೋಗಿಯ ಆರೋಗ್ಯ ತೀರಾ ಹದಗೆಟ್ಟಿತು. ತಾತ್ಕಾಲಿಕ ವೆಂಟಿಲೇಟರ್‌ ಅಳವಡಿಸಿ ತೀವ್ರನಿಗಾ ಘಟಕಕ್ಕೆ ರೋಗಿಯನ್ನು ದಾಖಲಿಸಲಾಯಿತು.

ನಂತರ ರೋಗಿಯು 14 ದಿನ ಪ್ರಜ್ಞಾಹೀನ ಸ್ಥಿತಿ ತಲುಪಲಾಗಿ ಮೂರು ತಿಂಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಇರುವಂತಾಯಿತು. ಆನಂತರ ಆಸ್ಪತ್ರೆಯವರಿಗೆ ಹೆಚ್ಚಿನ ಮೊತ್ತವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ವನಜಾಕ್ಷಿ ಅವರು ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿದಾಗ ಡಾ.ಎನ್‌.ರಾಘವೇಂದ್ರ ಅವರು ರೋಗಿಯನ್ನು ಕರೆದುಕೊಂಡು ಹೋಗಿ, ಇನ್ನು ಉಳಿಯುವುದು ಕಷ್ಟ ಎಂದು ಹೇಳಿ ಕೇಸ್‌ ಹಿಸ್ಟರಿಯನ್ನೂ ನೀಡದೇ ರೋಗಿಯನ್ನು 2015ರಲ್ಲಿ ಡಿಸ್ಚಾರ್ಜ್‌ ಮಾಡಿದ್ದರು. ಮತ್ತೆ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿ ಎರಡು ದಿನದ ಬಳಿಕ ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟರು.

ಗ್ರಾಹಕರ ಆಯೋಗದ ಮೊರೆ: ಶಂಕರ್‌ ನಾರಾಯಣ್‌ ಅವರ ಸಾವಿಗೆ ವಿಕ್ರಮ್‌ ಜ್ಯೋತ್‌ ಆಸ್ಪತ್ರೆ ಹಾಗೂ ಅದರ ವೈದ್ಯರಾದ ಡಾ.ರಾಜ್‌ ಕುಮಾರ್‌ ವಾಧ್ವಾ ಮತ್ತು ಡಾ.ಎನ್‌.ರಾಘವೇಂದ್ರ ಅವರ ವೈದ್ಯಕೀಯ ನಿರ್ಲಕ್ಷ್ಯ ಹಾಗೂ ಸೇವಾ ನ್ಯೂನತೆಯೇ ಕಾರಣ ಎಂದು ಆರೋಪಿ ವನಜಾಕ್ಷಿ ಮತ್ತು ಅವರ ಪುತ್ರಿ ಶಿವಾನಿ ಶಂಕರ್‌ ಪರಿಹಾರ ಕೋರಿ 2017 ರ ಡಿ.14 ರಂದು ಗ್ರಾಹಕರ ಆಯೋಗದ ಮೊರೆ ಹೋಗಿದ್ದರು. ಈ ಪ್ರಕರಣ ವಿಚಾರಣೆಯ ಹಂತದಲ್ಲಿರುವಾಗ 2021ರಲ್ಲಿ ಶಂಕರ ನಾರಾಯಣ ಅವರ ಪತ್ನಿ ವನಜಾಕ್ಷಿಯವರೂ ಸಹ ಮೃತರಾದರು.

ವೈದ್ಯಕೀಯ ನಿರ್ಲಕ್ಷ್ಯತೆ ಸಾಬೀತು: ಪ್ರಕರಣದ ವಿಚಾರಣೆ ನಡೆಸಿದ ಮೈಸೂರು ಜಿಲ್ಲಾ ಗ್ರಾಹಕರ ಆಯೋಗವು, ವೈದ್ಯರಾದ ಡಾ.ರಾಜ್‌ ಕುಮಾರ್‌ ವಾಧ್ವಾ ಮತ್ತು ಡಾ.ಎನ್‌ ರಾಘವೇಂದ್ರ ಅವರ ವೈದ್ಯಕೀಯ ನಿರ್ಲಕ್ಷ್ಯತೆ ಹಾಗೂ ಸೇವಾ ನ್ಯೂನತೆ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಯೋಗವು, ಇಬ್ಬರು ವೈದ್ಯರಿಗೆ 8 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ಮಾಡಿದೆ. ಜತೆಗೆ ಪ್ರಕರಣದ ವೆಚ್ಚ 5 ಸಾವಿರ ರೂ. ಪಾವತಿಸುವಂತೆ ಸೂಚನೆ ನೀಡಲಾಗಿದೆ. ಮೃತ ಶಂಕರ ನಾರಾಯಣ್‌ ಅವರ ಪತ್ನಿ ಮತ್ತು ಪುತ್ರಿ ಪರವಾಗಿ ವಕೀಲ ಕೆ.ಈಶ್ವರ ಭಟ್‌ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.