ಬಿಜೆಪಿ ಕಾರ್ಯಕ್ರಮದಿಂದ ಕಾಂಗ್ರೆಸ್‌ಗೆ ಹತಾಶೆ: ಅಶೋಕ್‌


Team Udayavani, Jan 19, 2023, 12:34 AM IST

ಬಿಜೆಪಿ ಕಾರ್ಯಕ್ರಮದಿಂದ ಕಾಂಗ್ರೆಸ್‌ಗೆ ಹತಾಶೆ: ಅಶೋಕ್‌

ಕಲಬುರಗಿ: ಇಷ್ಟು ದೊಡ್ಡ ಕಾರ್ಯಕ್ರಮ ನೋಡಿ ಕಾಂಗ್ರೆಸ್‌ನವರಲ್ಲಿ ಹತಾಶೆ ಉಂಟಾಗಿ ತಳಮಳ ಶುರುವಾಗಿದೆ. ಸ್ವಾಮಿ ಅವು ಕೇವಲ ಹಕ್ಕುಪತ್ರಗಳಲ್ಲ. ಸ್ವಂತ ಮನೆ ಎನ್ನುವ ಭದ್ರತೆ ನೀಡುವಂತಹ ಪಕ್ಕಾ ದಾಖಲೆ ನೀಡಲಾಗುತ್ತಿದೆ. ನಿಮ್ಮ ಆರೋಪದಲ್ಲಿ ಹುರುಳಿಲ್ಲ ಎಂದು ಕಂದಾಯ ಸಚಿವ ಆರ್‌. ಅಶೋಕ ಸ್ಪಷ್ಟಪಡಿಸಿದರು.

ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ 75 ವರ್ಷಗಳಿಂದ ದೇಶದಲ್ಲಿ ಅಧಿಕಾರ ಮಾಡಿದ್ದರೂ ಅಲೆಮಾರಿಗಳಿಗೆ ಮತ್ತು ತಾಂಡಾ ನಿವಾಸಿಗಳಿಗೆ ಅವರದೇ ಯಜಮಾನಿಕೆ ಇರುವ ಮನೆಗಳಿಗೆ, ಊರುಗಳಿಗೆ ಹೆಸರು ಕೊಡಲಿಕ್ಕಾಗಿಲ್ಲ. ಮನೆಯ ದಾಖಲೆಗಳಿರಲಿಲ್ಲ. ಅವುಗಳನ್ನು ನಾವು ಮಾಡಿ ಅವರಿಗೆ ನೆಮ್ಮದಿ ಕೊಡುತ್ತಿದ್ದೇವೆ. ಇದಕ್ಕೆ ನಿಮ್ಮ ಅಡ್ಡಿ ಯಾಕೆ ಎಂದು ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಕ್ಕೆ ತಿರುಗೇಟು ನೀಡಿದರು.

ಅವರು ತೆರಿಗೆ ಕಟ್ಟುತ್ತಿರುವುದು ನಿಜ, ಅವು ಅವರದ್ದೇ ಮನೆಗಳೂ ನಿಜ. ಆದರೆ, ದಾಖಲೆಗಳಿದ್ದವಾ? ನಿಮ್ಮ ಕಾಲದಲ್ಲಿ ಅದನ್ನು ಮಾಡಲು ಆಗಿದೆಯಾ? ಹಾಗಿದ್ದರೆ ನಾವು ಮಾಡಲು ಹೊರಟಿರುವ ಕಾರ್ಯಕ್ಕೆ ನಿಮ್ಮದ್ಯಾಕೆ ಅಡ್ಡಿ. ಸುಖಾ ಸುಮ್ಮನೆ ಎಲ್ಲದರಲ್ಲೂ ವಿವಾದ ಉಂಟು ಮಾಡಿ ಜನರ ಮನಸ್ಸು ಒಡೆಯುವ ಕೆಲಸ ಮಾಡಬೇಡಿ. ಸ್ವಾಮಿ ನಾವು ಹಕ್ಕು ಕಸಿದುಕೊಳ್ಳುತ್ತಿಲ್ಲ. ಬದಲಾಗಿ ಹಕ್ಕುಗಳನ್ನು, ದಾಖಲೆಗಳನ್ನು ಎಲ್ಲದಕ್ಕಿಂತ ಹೆಚ್ಚಾಗಿ ಮನೆಯ ಮಾಲಿಕರಿಗೆ ನೆಮ್ಮದಿಯನ್ನು ನೀಡುತ್ತಿದ್ದೇವೆ ಎಂದರು.

ಮಾಚನಾಳದ ಜನರಿಗೆ ಸೂರು
ಕಂದಾಯ ಸಚಿವರು ತಾವು ಗ್ರಾಮ ವಾಸ್ತವ್ಯ ಮಾಡಿರುವ ಕಲಬುರಗಿ ದಕ್ಷಿಣ ವಿಧಾನಸಭೆಯ ಮಾಚನಾಳ ತಾಂಡಾದಲ್ಲಿ ಈಗಾಗಲೇ ಮನೆಗಳಿಗಾಗಿ ಯಾರು ಅರ್ಜಿ ಸಲ್ಲಿಸಿದ್ದಾರೋ ಅವರದ್ದು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಎಲ್ಲರಿಗೂ ಮನೆ ಕಟ್ಟಿಸಿಕೊಡುವ ನಿಟ್ಟಿನಲ್ಲಿ ನಾನಾ ವಸತಿ ಯೋಜನೆಗಳಲ್ಲಿ ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅದೂ ಅಲ್ಲದೆ, ಗ್ರಾಮ ವಾಸ್ತವ್ಯದ ವೇಳೆಯಲ್ಲಿ ಘೋಷಣೆ ಮಾಡಿದ್ದ 1 ಕೋಟಿ ರೂ. ವಿಶೇಷ ಅನುದಾನವನ್ನು ಗುರುವಾರ ಬಿಡುಗಡೆಯೂ ಮಾಡಿದರು.

ಶಾಸಕ ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್‌ ರೇವೂರ್‌, ಕುಡಚಿ ಶಾಸಕ ಪಿ.ರಾಜೀವ್‌ ಸಹಿತ ಅನೇಕ ಮುಖಂಡರು ಇದ್ದರು.

ಮುಖ್ಯಗುರುಗಳಿಗೆ ಅಭಿನಂದನೆ
ಕಂದಾಯ ಸಚಿವ ಆರ್‌. ಅಶೋಕ್‌ ಅವರು ಮಾಚನಾಳ ತಾಂಡಾದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು. ಅದಕ್ಕಾಗಿ ಇಡೀ ಶಾಲೆಯನ್ನು ಸ್ವತ್ಛಗೊಳಿಸಿ, ಅತ್ಯಂತ ಉತ್ತಮವಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ವಾಸ್ತವ್ಯವನ್ನು ಮುಗಿಸಿ ಬುಧವಾರ ಹೋಗುವಾಗ ಶಾಲೆಯ ಮೂಲಭೂತ ಸೌಲಭ್ಯಗಳನ್ನು ಸಚಿವರು ವೀಕ್ಷಿಸಿದರು. ಈ ವೇಳೆಯಲ್ಲಿ ಡಿಡಿಪಿಐ ಸಕ್ರೆಪ್ಪ ಬಿರಾದಾರ್‌, ಬಿಇಒ ಶಂಕ್ರಮ್ಮ ಢವಳಗಿ, ಸಾಕ್ಷರತಾ ಇಲಾಖೆಯ ಅಧಿಕಾರಿಗಳಿಗೆ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ ಗಂಗು ಅವರಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು ಇದ್ದರು.

 

ಟಾಪ್ ನ್ಯೂಸ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

16-uv-fusion

Conductor’s Humanity: ಮಾನವೀಯತೆ ಮೆರೆದ ಬಸ್‌ ಕಂಡಕ್ಟರ್‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

15-uv-fusion

Bus Conductor: ಕಂಡಕ್ಟರ್‌ ಎಂಬ ರಿಮೋಟ್‌ ಕಂಟ್ರೋಲರ್‌

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವಿಶಿಷ್ಟ ಸ್ವಾದದೊಂದಿಗೆ ಜನರ ಮನ ಗೆದ್ದ ಮಲೆನಾಡ ತೀರ್ಥಹಳ್ಳಿ ಅಡಕೆ!

Arecanut: ವಿಶಿಷ್ಟ ಸ್ವಾದದೊಂದಿಗೆ ಜನರ ಮನ ಗೆದ್ದ ಮಲೆನಾಡ ತೀರ್ಥಹಳ್ಳಿ ಅಡಕೆ!

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

16-uv-fusion

Conductor’s Humanity: ಮಾನವೀಯತೆ ಮೆರೆದ ಬಸ್‌ ಕಂಡಕ್ಟರ್‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.