ಕನಸು ನನಸಾಗಿರುವ ಶಕ್ತಿ ನವಭಾರತಕ್ಕಿದೆ : ಮೋದಿ


Team Udayavani, Jan 20, 2023, 6:50 AM IST

tdy-17

ಮುಂಬೈ: “ಸ್ವಾತಂತ್ರ್ಯಾನಂತರದ ಇದೇ ಮೊದಲ ಬಾರಿಗೆ “ನವಭಾರತ’ಕ್ಕೆ ದೊಡ್ಡ ದೊಡ್ಡ ಕನಸುಗಳನ್ನು ಕಾಣುವ ಮತ್ತು ಅದನ್ನು ಸಾಕಾರಗೊಳಿಸುವ ಧೈರ್ಯ ಬಂದಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಹಾರಾಷ್ಟ್ರದಲ್ಲಿ ಗುರುವಾರ 38 ಸಾವಿರ ಕೋಟಿ ರೂ. ಮೌಲ್ಯದ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಶತಮಾನದ ದೀರ್ಘಾವಧಿಯು ಕೇವಲ ಬಡತನದ ಬಗ್ಗೆ ಮಾತನಾಡುತ್ತಾ, ವಿದೇಶಿಯರಿಂದ ಸಾಲ ಪಡೆಯುತ್ತಾ ಕಳೆದುಹೋಯಿತು. ಆದರೆ, ಈಗ ದೇಶದ ಹಲವು ನಗರಗಳು ಪ್ರಗತಿಯ ಪಥದತ್ತ ಸಾಗುತ್ತಿವೆ. ಅದರಂತೆಯೇ, ಮುಂಬೈಯನ್ನು ಭವಿಷ್ಯಕ್ಕೆ ಸನ್ನದ್ಧಗೊಳಿಸುವ ಸಂಕಲ್ಪವನ್ನು ನಮ್ಮ ಡಬಲ್‌ ಎಂಜಿನ್‌ ಸರ್ಕಾರ ಹೊಂದಿದೆ ಎಂದೂ ಮೋದಿ ಹೇಳಿದರು.

ಇನ್ನು ಕೆಲವೇ ವರ್ಷಗಳಲ್ಲಿ ಮುಂಬೈ ಸಂಪೂರ್ಣವಾಗಿ ಬದಲಾಗಲಿದೆ. ಜಗತ್ತಿನ ಅತಿದೊಡ್ಡ ಆರ್ಥಿಕತೆಗಳೆಲ್ಲ ಬಿಕ್ಕಟ್ಟಿನಲ್ಲಿ ನಲುಗಿಹೋಗಿದ್ದರೆ, ಭಾರತ ಮಾತ್ರ 80 ಕೋಟಿ ಮಂದಿಗೆ ಉಚಿತ ಪಡಿತರ ಒದಗಿಸುತ್ತಿದೆ. ಜಾಗತಿಕ ಹಿಂಜರಿತದ ನಡುವೆಯೂ ಮೂಲಸೌಕರ್ಯದ ಮೇಲೆ ಬಂಡವಾಳ ಹೂಡಿಕೆ ಮಾಡುತ್ತಿದೆ. ಇದು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸುವತ್ತ ನಮ್ಮ ಬದ್ಧತೆಯನ್ನು ತೋರಿಸಿದೆ ಎಂದೂ ಪ್ರಧಾನಿ ನುಡಿದರು.

ಶಿಂಧೆ-ಫ‌ಡ್ನಿವೀಸ್‌ ಜೋಡಿ ಬಗ್ಗೆ ಪ್ರಸ್ತಾಪ:

ಮುಂಬೈನಲ್ಲಿ ಆಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಶ್ಲಾ ಸಿದ ಪ್ರಧಾನಿ ಮೋದಿ, “ಸಿಎಂ ಏಕನಾಥ ಶಿಂಧೆ ಮತ್ತು ಡಿಸಿಎಂ ದೇವೇಂದ್ರ ಫ‌ಡ್ನವೀಸ್‌ ಜೋಡಿಯು ಮಹಾರಾಷ್ಟ್ರದ ಜನರ ಕನಸನ್ನು ನನಸು ಮಾಡುತ್ತಿದೆ. ಅವರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿಗೆ ವೇಗ ಸಿಕ್ಕಿದೆ. ಎನ್‌ಡಿಎ ಅಥವಾ ಬಿಜೆಪಿ ಸರ್ಕಾರ ಯಾವತ್ತೂ ಅಭಿವೃದ್ಧಿಯ ನಡುವೆ ರಾಜಕೀಯ ತೂರದಂತೆ ನೋಡಿಕೊಳ್ಳುತ್ತದೆ’ ಎಂದೂ ಹೇಳಿದರು.

38,000 ಕೋಟಿ ರೂ. ಯೋಜನೆಗಳ ಉಡುಗೊರೆ:

ಮುಂಬೈನಲ್ಲಿ ಮೂಲಸೌಕರ್ಯ, ನಗರ ಪ್ರಯಾಣ, ಆರೋಗ್ಯಸೇವೆ ಸೇರಿದಂತೆ ಬರೋಬ್ಬರಿ 38 ಸಾವಿರ ಕೋಟಿ ರೂ.ಗಳ ಯೋಜನೆಗಳಿಗೆ ಪ್ರಧಾನಿ ಮೋದಿ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿದರು. ಮುಂಬೈ ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಈ ಬೆಳವಣಿಗೆ ನಡೆದಿದ್ದು, ರಾಜಕೀಯ ವೈರಿಗಳ ವಿರುದ್ಧ “ಅಭಿವೃದ್ಧಿ’ ಅಸ್ತ್ರ ಪ್ರಯೋಗಿಸಲು ಶಿಂಧೆ ಸರ್ಕಾರಕ್ಕೆ ಇದು ನೆರವಾಗಲಿದೆ. 12,600 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮುಂಬೈ ಮೆಟ್ರೋದ 2ಎ ಮತ್ತು 7 ಲೈನ್‌ಗಳನ್ನು ಮೋದಿ ಉದ್ಘಾಟಿಸಿದರು. 7 ತ್ಯಾಜ್ಯ ಸಂಸ್ಕರಣೆ ಸ್ಥಾವರಗಳು, ಒಂದು ರಸ್ತೆ ಕಾಂಕ್ರೀಟ್‌ ಯೋಜನೆ, ಛತ್ರಪತಿ ಶಿವಾಜಿ ಮಹರಾಜ್‌ ಟರ್ಮಿನಸ್‌ ನವೀಕರಣ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. 20 ಆರೋಗ್ಯ ಕ್ಲಿನಿಕ್‌ಗಳಿಗೂ ಚಾಲನೆ ನೀಡಿದರು. ನಂತರ ಮೆಟ್ರೋದಲ್ಲಿ ಪ್ರಯಾಣಿಸಿದ ಮೋದಿ, ಒಳಗಿದ್ದ ಯುವಜನರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ್ದೂ ಕಂಡುಬಂತು.

ಟಾಪ್ ನ್ಯೂಸ್

rahul-gandhi-(2)

BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸುತ್ತಾರೆ: ರಾಹುಲ್

1-wwqewqe

Kejriwal ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಸ್ವಾತಿ ಮಲಿವಾಲ್ ಮಾಜಿ ಪತಿ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul-gandhi-(2)

BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸುತ್ತಾರೆ: ರಾಹುಲ್

1-wwqewqe

Kejriwal ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಸ್ವಾತಿ ಮಲಿವಾಲ್ ಮಾಜಿ ಪತಿ

1-a-l-1

Art of Living ಗ್ಲೋಬಲ್ ಹ್ಯಾಪಿನೆಸ್ ಕಾರ್ಯಕ್ರಮದಲ್ಲಿ 87 ದೇಶಗಳು ಭಾಗಿ

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

NewsClick ಸಂಪಾದಕ ಪ್ರಬೀರ್‌ ಬಂಧನ ಕಾನೂನು ಬಾಹಿರ; ಬಿಡುಗಡೆಗೆ ಸುಪ್ರೀಂ ಆದೇಶ

‌IRAN ಜತೆ ಒಪ್ಪಂದ; ಅಮೆರಿಕದ ದಿಗ್ಬಂಧನದ ಎಚ್ಚರಿಕೆಗೆ ಜೈಶಂಕರ್‌ ತೀಕ್ಷ್ಣ ತಿರುಗೇಟು!

‌IRAN ಜತೆ ಒಪ್ಪಂದ; ಅಮೆರಿಕದ ದಿಗ್ಬಂಧನದ ಎಚ್ಚರಿಕೆಗೆ ಜೈಶಂಕರ್‌ ತೀಕ್ಷ್ಣ ತಿರುಗೇಟು!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

rahul-gandhi-(2)

BJP ಮತ್ತೆ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸುತ್ತಾರೆ: ರಾಹುಲ್

ಸುರತ್ಕಲ್‌: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

ಸುರತ್ಕಲ್‌: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

ಕಿನ್ನಿಗೋಳಿ ಪಟ್ಟಣ ಪಂ. ವ್ಯಾಪ್ತಿ: ಒಳಚರಂಡಿ ತ್ಯಾಜ್ಯ ಹರಿದು ಬಾವಿ ನೀರು ಕುಲುಷಿತ

ಕಿನ್ನಿಗೋಳಿ ಪಟ್ಟಣ ಪಂ. ವ್ಯಾಪ್ತಿ: ಒಳಚರಂಡಿ ತ್ಯಾಜ್ಯ ಹರಿದು ಬಾವಿ ನೀರು ಕುಲುಷಿತ

1-wwqewqe

Kejriwal ವಿರುದ್ಧ ಎಫ್ ಐಆರ್ ದಾಖಲಿಸಬೇಕು: ಸ್ವಾತಿ ಮಲಿವಾಲ್ ಮಾಜಿ ಪತಿ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.