ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಪೋಕ್ಸೋ ಪ್ರಕರಣದ ಆರೋಪಿ ದೋಷಮುಕ್ತ
Team Udayavani, Jan 20, 2023, 5:30 AM IST
ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಗರ್ಭಿಣಿಯಾಗಿಸಿದ ಆರೋಪದಡಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ್ ಅಂಚನ್ನನ್ನು ಎರಡನೇ ಜಿಲ್ಲಾ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ ನಿರಪರಾಧಿಯೆಂದು ತೀರ್ಮಾನಿಸಿ ದೋಷಮುಕ್ತಗೊಳಿಸಿದೆ.
ಸತೀಶ್ ಅಂಚನ್ ಆಟೋ ಚಾಲಕನಾಗಿದ್ದು, ಬಾಲಕಿಯನ್ನು ಐದು ವರ್ಷಗಳ ಹಿಂದೆ ಪರಿಚಯ ಮಾಡಿಕೊಂಡು ಶಾಲೆಗೆ ಹೋಗುವಾಗ ತನ್ನ ಆಟೋದಲ್ಲಿ ಕರೆದುಕೊಂಡು ಹೋಗುತ್ತಿದ್ದ. 2020ರ ಜುಲೈನಲ್ಲಿ ಒಂದು ದಿನ ಸಂಜೆ ಆಕೆ ಪೇಟೆಯಿಂದ ಬಟ್ಟೆ ತೆಗೆದುಕೊಂಡು ಮನೆಗೆ ಹಿಂದಿರುಗುತ್ತಿದ್ದ ಸಂದರ್ಭ ಆರೋಪಿ, ಆಕೆಯನ್ನು ಆಟೋದಲ್ಲಿ ಬರುವಂತೆ ಕರೆದಿದ್ದಾನೆ. ಆಕೆ ನಿರಾಕರಿಸಿದ್ದು, ಅದಕ್ಕೆ ನಿನ್ನ ಫೋಟೋ ನನ್ನ ಬಳಿ ಇದ್ದು, ನನ್ನ ಜತೆ ಬಂದು ದೈಹಿಕ ಸಂಪರ್ಕ ನಡೆಸು, ಇಲ್ಲದಿದ್ದರೆ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿದ್ದ. ಇದರಿಂದ ಹೆದರಿದ ಬಾಲಕಿ ಆಟೋದಲ್ಲಿ ಕುಳಿತಿದ್ದು, ಕಲ್ಲಮುಂಡ್ಕೂರು ಬಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಬಲಾತ್ಕಾರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಆಕೆಯನ್ನು ಮತ್ತು ಮನೆಯವರನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದ ಎಂದು ಆರೋಪಿಸಲಾಗಿತ್ತು.
ಬಾಲಕಿ ಗರ್ಭಿಣಿಯಾಗಿದ್ದು, ಮಂಗಳೂರಿನ ಮಹಿಳಾ ಠಾಣೆಯಲ್ಲಿ ಸತೀಶ್ ವಿರುದ್ಧ ಪೋಕೊÕ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ಅನಂತರ ಆಕೆಯ ಗರ್ಭಪಾತ ಮಾಡಿಸಿದ್ದು, ಭ್ರೂಣವನ್ನು ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿದಾಗ, ಭ್ರೂಣದ ಜೈವಿಕ ವರ್ಗೀಕರಣದ ಪ್ರಕಾರ ಆರೋಪಿಯೇ ಜೈವಿಕ ತಂದೆ ಎಂದು ವರದಿ ಬಂದಿತ್ತು.
ವಿಚಾರಣೆ ನಡೆಸಿದ 2ನೇ ಎಫ್ಟಿಎಸ್ಸಿ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು, ವಾದ-ಪ್ರತಿವಾದ ಆಲಿಸಿ, ನೊಂದ ಬಾಲಕಿಯ ವಯಸ್ಸು 16 ವರ್ಷಕ್ಕಿಂತ ಕಡಿಮೆ ಇದೆ ಎಂದು ಸಾಬೀತುಪಡಿಸಲು ಪ್ರಾಸಿಕ್ಯೂಶನ್ ವಿಫಲವಾಗಿದ್ದು, ಪ್ರಕರಣವು “ಒಪ್ಪಿಗೆಯ ಲೈಂಗಿಕ ಸಂಪರ್ಕ’ ಎಂದು ಪರಿಗಣಿಸಿ ಸತೀಶ್ ಅಂಚನ್ನನ್ನು ನಿರಪರಾಧಿ ಎಂದು ತೀರ್ಪು ನೀಡಿದ್ದಾರೆ.
ಆರೋಪಿ ಪರ ಎಸ್.ಪಿ. ಚಂಗಪ್ಪ, ರಹಿಯಾನಾ, ಭವ್ಯಾ, ವಿನುತಾ ಕುಟಿನ್ಹೋ, ಸೋನಲ್ ಮಂಡನ್ ಮತ್ತು ಶ್ವೇತಾ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್