ಅತ್ತೂರು ಜಾತ್ರೆಗೆ ಇಂದು ಚಾಲನೆ, ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥನೆ

ಸರ್ವಧರ್ಮಿಯರ ಅತ್ತೂರು ಜಾತ್ರೆ,ಜನಸಾಗರದ ಯಾತ್ರೆ

Team Udayavani, Jan 22, 2023, 7:00 AM IST

ಅತ್ತೂರು ಜಾತ್ರೆಗೆ ಇಂದು ಚಾಲನೆ, ಇಷ್ಟಾರ್ಥ ಸಿದ್ದಿಗಾಗಿ ಪ್ರಾರ್ಥನೆ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾ ಚರ್ಚ್‌ ಜಾತ್ರೆ ವಿಶ್ವವಿಖ್ಯಾತಿ. ಎಲ್ಲೆಡೆಯಿಂದ ಸರ್ವಧರ್ಮಿಯರು ಇಲ್ಲಿಗೆ ಆಗಮಿಸುತ್ತಾರೆ. ಜಾತ್ರೆ ನಡೆಯುವ ಅಷ್ಟೂ ದಿನವೂ ಸಂಭ್ರಮವೋ ಸಂಭ್ರಮ. ವಾರ್ಷಿಕೋತ್ಸವ ದಿನಗಳಲ್ಲಿ ಹಗಲು ರಾತ್ರಿ ಎನ್ನದೆ ಜನಸಾಗರವೇ ಇಲ್ಲಿಗೆ ಹರಿದು ಬರುತ್ತದೆ.

ಇಂದಿನಿಂದ (ಜ.22) ಮುಂದಿನ 5 ದಿನಗಳ ಕಾಲ ಅತ್ತೂರು ವಿಜೃಂಭಣೆಗೆ ತೆರೆದುಕೊಳ್ಳುತ್ತಿದೆ. ಭಕ್ತರ ಆಗಮನ ಜತೆಗೆ ಸಂತೆ ವ್ಯಾಪಾರವೂ ಇಲ್ಲಿ ಜೋರಾಗಿಯೇ ನಡೆಯುತ್ತದೆ. ವ್ಯಾಪಾರ ಮಳಿಗೆಗಳು ತೆರೆದುಕೊಂಡು ವ್ಯಾಪಾರ ವಹಿವಾಟು ಆರಂಬಿಸಿದೆ.

ಕಾರ್ಕಳದ ಸಂತ ಮಾರಿ ಎಂದೆ ಪ್ರಸಿದ್ಧಿ ಹೊಂದಿರುವ ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾದ ಜಾತ್ರೆ ಆರಂಭದ ಹಿಂದಿನ ದಿನವೇ ವಿಜೃಂಭಣೆಯಿಂದಲೆ ಪ್ರಾರಂಭಗೊಂಡಿದೆ. ಅತ್ತೂರು ಜಾತ್ರೆ ಎಂದ ಕೂಡಲೆ ಎಲ್ಲರ ಮನಸ್ಸಿನಲ್ಲಿ ಮೂಡುವ ಯೋಚನೆ ಈ ವರ್ಷ ಎಷ್ಟು ಸಂತೆ ಬಂದಿರಬಹುದು ಎಂಬುದಾಗಿದ್ದು, ತೊಟ್ಟಿಲಿನಿಂದ ಹಿಡಿದು ಆಟದ ಜೋಕಾಲಿ, ಮನೋರಂಜನೆಗಳು. ಜಾಯಿಂಟ್‌ವಿಲ್‌, ಮಕ್ಕಳು ಕುಳಿತು ತಿರುಗುವ ವಿವಿಧ ಆಟಿಕೆಗಳು, ಡ್ರೆಸ್‌ ಮೆಟಿರಿಯಲ್‌, ಮಣಿಸರಕಿನ ಸ್ಟಾಲ್‌ಗ‌ಳು, ಐಸ್‌ಕ್ರಿಂ, ಪಾನಿಪುರಿ, ಗೋಬಿ ಮಂಚೂರಿ ಅತ್ತೂರಿನ ಜಾತ್ರೆಯ ವಿಶೇಷ ಕಲ್ಲಂಗಡಿ ಸಹಿತ ವಿವಿಧ ತಿನಿಸುಗಳ ಸ್ಟಾಲ್‌ಗ‌ಳು ಈ ಬಾರಿ ಸಾಕಷ್ಟು ಇವೆ.

ವ್ಯಾಪಾರ ಮಾಡುವುದಕ್ಕೆ ಸಂತೆ ಮಾರುಕಟ್ಟೆಯಲ್ಲಿ 480 ಮಳಿಗೆಗಳು ಸೇರಿ ಸಣ್ಣ ಪುಟ್ಟ ಮಾರಾಟ ಸೇರಿ 500ಕ್ಕೂ ಅಧಿಕ ಅಂಗಡಿಗಳು ತೆರೆದುಕೊಂಡಿವೆ. ಚರ್ಚ್‌ ಮುಂಭಾಗದ ರಸ್ತೆ ಬದಿ, ಎಡಬದಿಗೆ, ವಿಶಾಲವಾದ ಸಂತೆ ಮಾರುಕಟ್ಟೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆರಂಭದ ದಿನದಿಂದಲೆ ಜನರು ಚರ್ಚ್‌ ಕಡೆ ಆಗಮಿಸುತಿದ್ದು, ಮಳೆಗೆಗಳ ಮುಂದೆಲ್ಲ ಜನ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿದ್ದಾರೆ.

ಮುಂದಿನ ನಾಲ್ಕೈದು ದಿನಗಳಲ್ಲಿ ಇನ್ನು ಹೆಚ್ಚುವ ಸಾಧ್ಯತೆಗಳಿವೆ. 2 ವರ್ಷಗಳ ಹಿಂದೆ ಕೊರೊನಾದ ಕಾರಣಕ್ಕೆ ಜಾತ್ರೆ ನಡೆದಿರಲಿಲ್ಲ. ಕಳೆದ ವರ್ಷಗಳಿಂದ ಮರಳಿ ಹಿಂದಿನ ಸ್ಥಿತಿಗೆ ಅತ್ತೂರು ಜಾತ್ರೆ ಮರಳಿದೆ.

ದಕ್ಷಿಣ ಭಾರತದಲ್ಲೆ ಭಾವೈಕ್ಯದ ಅಗ್ರ ಧಾರ್ಮಿಕ ಕ್ಷೇತ್ರವಾದ ಸಂತ ಲಾರೆನ್ಸ್‌ ಚರ್ಚ್‌ ಝಗಮಗಿಸುವ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿದೆ. ಉತ್ಸವದಲ್ಲಿ ಸಹಸ್ರಾರು ಮಂದಿ ಭಕ್ತರು ಸಂತ ಲಾರೆನ್ಸ್‌ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಇಷ್ಟಾರ್ಥ ಸಿದ್ಧಿಗಾಗಿ ಇಲ್ಲಿಗೆ ಆಗಮಿಸಿ ಪ್ರಾರ್ಥಿಸುತ್ತಿದ್ದಾರೆ.

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.