ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅಭಿವೃದ್ಧಿ ಗಲಾಟೆ


Team Udayavani, Jan 23, 2023, 2:48 PM IST

tdy-16

ಬಂಗಾರಪೇಟೆ: ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್‌ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ಗ್ರಾಪಂ ಅಧ್ಯಕ್ಷೆ ಮಂಜುಳಾ ಅವರ ಪತಿ ಮಹದೇವ್‌ ನಡುವೆ ಮಾತಿನ ವಾಗ್ಧಾಳಿ ನಡೆದ ಪ್ರಸಂಗ ತಾಲೂಕಿನ ದೋಣಿಮಡಗು ಗ್ರಾಪಂನ ತನಿಮಡಗು ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯದಲ್ಲಿ ನಡೆಯಿತು.

ಗ್ರಾಮ ವಾಸ್ತವ್ಯ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಮಾತನಾಡುವ ವೇಳೆ, ಶಾಸಕನಾಗಿ ನಾನು 10 ವರ್ಷಗಳಲ್ಲಿ ದೋಣಿಮಡಗು ಗ್ರಾಪಂನ ಎಲ್ಲಾ ಹಳ್ಳಿಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಈ ಹಿಂದೆ ಶಾಸಕರು ಯಾರೂ ಏನೂ ಮಾಡಿಲ್ಲ ಎಂದು ತಮ್ಮ ಸಾಧನೆಗಳ ಪಟ್ಟಿ ವಿವರಿಸಿದಾಗ, ಗ್ರಾಪಂ ಅಧ್ಯಕ್ಷೆ ಮಂಜುಳಾ ಅವರ ಪತಿ ಮಹಾದೇವ್‌ ಮಧ್ಯೆಪ್ರದೇಶ ಮಾಡಿ, ಶಾಸಕರಾಗಿ ನೀವು ತನಿಮಡಗು ಗ್ರಾಮಕ್ಕೆ ಏನೇನು ಮಾಡಿಲ್ಲ, ಬರೀ ಸುಳ್ಳು ಭರವಸೆ ನೀಡುವಿರಿ ಅಷ್ಟೇ ಎಂದು ಏರಿದ ಧ್ವನಿಯಲ್ಲಿ ಹೇಳಿದರು.

ಅಧ್ಯಕ್ಷರಾಗಿ ಏನು ಮಾಡಿರುವೆ: ಮಹಾದೇವ್‌ ಮಾತಿನಿಂದ ಆಕ್ರೋಶಗೊಂಡ ಶಾಸಕರು, ನೀನು ಗ್ರಾಪಂ ಅಧ್ಯಕ್ಷರಾಗಿ ಏನು ಮಾಡಿರುವೆ, ಗ್ರಾಪಂನಲ್ಲಿ ಹೆಣ್ಣು ಮಗಳು ಇರುವುದರಿಂದ ನಾನು ಗ್ರಾಪಂನಲ್ಲಿ ಹಲವು ದೋಷಗಳಿದ್ದರೂ ತಲೆಹಾಕಿಲ್ಲ. ಮೊದಲು ನಿಮ್ಮ ಜವಾಬ್ದಾರಿಯನ್ನು ಅರಿತು ಮಾತನಾಡು ಎಂದಾಗ ಇಬ್ಬರ ನಡುವೆ ಮಾತಿನ ವಾಗ್ಧಾಳಿ ನಡೆಯಿತು. ರಸ್ತೆ, ಚೆಕ್‌ ಡ್ಯಾಂಗೆ ಹಣ ಎಲ್ಲಿಂದ ಬಂತು: ಮಾತೆತ್ತಿದರೆ ಚೆಕ್‌ಡ್ಯಾಂ ನಿರ್ಮಾಣ ಮಾಡಲಾಗಿದೆ, ರಸ್ತೆ ಮಾಡಲಾಗಿದೆ, ಬೇರೆಯವರ ಕೆಲಸವನ್ನು ನಾನು ಮಾಡಿರುವೆ ಎನ್ನುವಿರಿ, ಅಲ್ಲದೆ, ಬಿಜೆಪಿ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನವಿಲ್ಲ ಎನ್ನುವಿರಿ, ಆಗಿದ್ದರೆ ರಸ್ತೆ, ಚೆಕ್‌ಡ್ಯಾಂಗೆ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಶಾಸಕರಿಗೆ ಸವಾಲು: ದೋಣಿಮಡಗು ಗ್ರಾಪಂ ಸುತ್ತಮುತ್ತಲಿಂದ ಸಾವಿರಾರು ಮಂದಿ ಬೆಂಗಳೂರಿಗೆ ಹೋಗುವರು. ಅವರಿಗೆ ಅನುಕೂಲವಾಗಲಿ ಎಂದು ಜೋಲಾರ್‌ಪೇಟ್‌ ಎಕ್ಸ್‌ಪ್ರೆಸ್‌ ರೈಲನ್ನು ನಿಲುಗಡೆ ಮಾಡುವಂತೆ ಮಾಡಿದ ಮನವಿ, ಕಸದ ಬುಟ್ಟಿ ಸೇರಿದೆ. ನಿಮ್ಮವರೇ ರೈಲ್ವೆ ಮಂತ್ರಿಯಾಗಿದ್ದರೂ ಸಾಧ್ಯವಾಗಿಲ್ಲ. ಸಂಸದ ಎಸ್‌.ಮುನಿಸ್ವಾಮಿ ಗ್ರಾಮಸ್ಥರಿಗೆ ಸ್ಪಂದಿಸಿ ಮಾಡಿದ್ದಾರೆ ಎಂದು ಪ್ರಶ್ನೆಗಳ ಸುರಿಮಳೆಗೈದರು.

ನನ್ನ ಸಾಧನೆ ಬಗ್ಗೆ ಪಟ್ಟಿ ನೀಡುವೆ, ನೀನು ನಿನ್ನ ಸಾಧನೆ ಏನೆಂದು ತೋರಿಸಿ ಎಂದು ಶಾಸಕರು ಸವಾಲು ಹಾಕಿದರು.

ಸಭೆಯಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು, ಬಿಇಒ ಡಿ.ಎನ್‌.ಸುಕನ್ಯ, ಸಿಡಿಪಿಒ ಮುನಿರಾಜು, ಉಪತಹಶೀಲ್ದಾರ್‌ ಶಿವಣ್ಣ, ಆರ್‌ಐ ದಿವ್ಯಾಆರಾಧನ, ಪಿಡಿಒ ವಸಂತಕುಮಾರ್‌, ಮುಖಂಡರಾದ ಎಸ್‌.ಕೆ.ಜಯಣ್ಣ, ಲಕ್ಷ್ಮೀ ನಾರಾಯಣಪ್ರಸಾದ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.