ಅಂತಾರಾಷ್ಟ್ರೀಯ ಗಾಳಿಪಟ-ಸಾಂಸ್ಕೃತಿಕ ಉತ್ಸವಕ್ಕೆ ತೆರೆ; ಮೆರಗು ತಂದ ಜನಸಾಗರ

ಯುವಪಡೆ ಗಾಯಕರೊಂದಿಗೆ ದನಿಗೂಡಿಸಿದ್ದಲ್ಲದೆ ಕುಣಿದು ಕುಪ್ಪಳಿಸಿತು.

Team Udayavani, Jan 23, 2023, 4:01 PM IST

ಅಂತಾರಾಷ್ಟ್ರೀಯ ಗಾಳಿಪಟ-ಸಾಂಸ್ಕೃತಿಕ ಉತ್ಸವಕ್ಕೆ ತೆರೆ; ಮೆರಗು ತಂದ ಜನಸಾಗರ

ಹುಬ್ಬಳ್ಳಿ: ಎರಡು ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಹಾಗೂ ಸಾಂಸ್ಕೃತಿಕ ಉತ್ಸವಕ್ಕೆ ರವಿವಾರ ಅದ್ಧೂರಿ ತೆರೆ ಬಿದ್ದಿತು. ರಜಾದಿನವಾಗಿದ್ದರಿಂದ ಮಕ್ಕಳೊಂದಿಗೆ ಪೋಷಕರು ಇಡೀ ದಿನವನ್ನು ಅಲ್ಲಿಯೇ ಕಳೆದರು. ದಿನಪೂರ್ತಿ ದೇಸಿಯ ಆಟಗಳೇ ಪಾರಮ್ಯ ಮೆರೆದವು.

ಸಾರ್ವಜನಿಕರಿಗಾಗಿ ಗ್ರಾಮೀಣ ಸೊಗಡು ನೆನಪಿಸುವಂತಹ ಲಗೋರಿ, ಚಿನ್ನಿದಾಂಡು, ಗೋಣಿ ಚೀಲ ಓಟ, ಚೆಸ್‌, ಹಗ್ಗ ಜಗ್ಗಾಟ, ಮ್ಯೂಸಿಕಲ್‌ ಚೇರ್‌ನಂತಹ ಹಲವು ಸ್ಪರ್ಧೆ ಆಯೋಜಿಸಲಾಗಿತ್ತು. ಮಕ್ಕಳು, ಮಹಿಳೆಯರೆನ್ನದೆ ಸಂತಸದ ಆಟದಲ್ಲಿ ತೊಡಗಿದ್ದರು. ಬೆಳಗ್ಗೆ ಫಿಷ್‌, ಡ್ರ್ಯಾಗನ್‌, ಡೆಲ್ಟಾ, ಇನ್‌ಪ್ಲಾಟೇಬಲ್‌, ಆಕ್ಟೋಪಸ್‌, ಲಿಫ್ಟರ್ಸ್‌, ಮಾರಿಯೋ ಸೇರಿದಂತೆ ಹಲವು ಗಾಳಿ ಪಟಗಳು ಹಾರಾಟ ಮಾಡಿದವು. ವಿದೇಶ ಹಾಗೂ ಭಾರತದ ವಿವಿಧ ಭಾಗದಿಂದ ಬಂದಿದ್ದ ಗಾಳಿಪಟ ಹಾರಿಸುವ ಪಟುಗಳನ್ನು ಕ್ಷಮತಾ ಸೇವಾ ಸಂಸ್ಥೆಯ ಮುಖ್ಯಸ್ಥ ಗೋವಿಂದ ಜೋಶಿ ಅವರು ಉಡುಗೊರೆ ನೀಡಿ ಬೀಳ್ಕೊಟ್ಟರು. ಬಳಿಕ ಪೋಷಕರು ಮಕ್ಕಳೊಂದಿಗೆ ಗಾಳಿಪಟ ಹಾರಿಸಿದರು.

ಹಗ್ಗಜಗ್ಗಾಟದಲ್ಲಿ ಬಾಲಕ-ಬಾಲಕಿಯರ ತಲಾ ಎರಡು ತಂಡಗಳು ಸೆಣಸಾಟ ನಡೆಸಿದವು. ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮಧ್ಯಾಹ್ನ ಜಂಗಿಕ ಕಾಟಾ ನಿಕಾಲಿ ಕುಸ್ತಿ ವಿಶೇಷವಾಗಿತ್ತು. ಸ್ಥಳೀಯ ಪೈಲ್ವಾನರು ಮಾತ್ರ ಪಾಲ್ಗೊಳ್ಳಲಿದ್ದರು. ಆದರೆ ಕೊನೆಯ ಕ್ಷಣದಲ್ಲಿ ದಾವಣಗೆರೆ, ಬೆಳಗಾವಿ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪೈಲ್ವಾನರು ಆಗಮಿಸಿದರು. ಎಂಟು ಜನ ಮಹಿಳಾ ಪೈಲ್ವಾನರು ಆಗಮಿಸಿದ್ದು ಗಮನ ಸೆಳೆಯಿತು. ಕುಸ್ತಿಯಲ್ಲಿ ವಿಜೇತ ಪೈಲ್ವಾನರಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಕುಣಿದು ಕುಪ್ಪಳಿಸಿದ ಯುವಪಡೆ 
ರವಿವಾರ ಸಂಜೆ ನಡೆದ ಸಾಂಸ್ಕೃತಿಕ ಉತ್ಸವದಲ್ಲಿ ಖ್ಯಾತ ಗಾಯಕರು ಸಂಗೀತ ರಸದೌತಣ ಉಣಬಡಿಸಿದರು. ಗಾಯಕರಾದ ವಾಸುಕಿ ವೈಭವ, ಅನುರಾಧಾ ಭಟ್‌, ಸಂಗೀತಾ ರವೀಂದ್ರನಾಥ್‌, ಚೇತನ್‌ ನಾಯ್ಕ, ಅಶ್ವಿ‌ನ್‌ ಶರ್ಮಾ, ಮಹನ್ಯಾ ಪಾಟೀಲ ಮೊದಲಾದವರು ಜನರನ್ನು ಸಂಗೀತ ಸುಧೆಯಲ್ಲಿ ತೇಲಿಸಿದರು. ಯುವಪಡೆ ಗಾಯಕರೊಂದಿಗೆ ದನಿಗೂಡಿಸಿದ್ದಲ್ಲದೆ ಕುಣಿದು ಕುಪ್ಪಳಿಸಿತು.

ಮೋದಿ ಆಲೋಚನೆ ಕೂಸು
ದೇಸಿ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಆಲೋಚನೆ ನೀಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರು. ಅವರ ಇಚ್ಛೆಯಂತೆ ಅಂತಾರಾಷ್ಟ್ರೀಯ ಉತ್ಸವದ ಮೂಲಕ ದೇಸಿ ಕ್ರೀಡೆಗಳನ್ನು ಆಯೋಜಿಸಲಾಗಿದೆ ಎಂದು ಕೇಂದ್ರ ಸಚಿವ ಹಾಗೂ ಕ್ಷಮತಾ ಸಂಸ್ಥೆಯ ಅಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದರು. ಸಂಸದ ಸಾಂಸ್ಕೃತಿಕ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಎರಡು ದಿನದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಹಾಗೂ ಸಾಂಸ್ಕೃತಿಕ ಉತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿ, ನೂರಾರು ಯುವಕರ ಪರಿಶ್ರಮದ ಫಲವಾಗಿ ಇಷ್ಟೊಂದು ಅಚ್ಚುಕಟ್ಟಾಗಿ ಉತ್ಸವ ಮೂಡಿಬಂದಿದೆ. ಮುಂದಿನ ವರ್ಷದಿಂದ ಎರಡು ದಿನಗಳ ಬದಲಾಗಿ ಮೂರು ದಿನಗಳಿಗೆ ಹೆಚ್ಚಿಸಲಾಗುವುದು ಎಂದರು.

ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಗ್ರಾಮೀಣ ಸೊಗಡಿನ ದೇಸಿ ಕ್ರೀಡೆಗಳನ್ನು ನೆನಪಿಸುವ ಕೆಲಸ ಆಗಿದೆ. ಪ್ರತಿಯೊಂದರಲ್ಲೂ ಭಾರತೀಯತೆ ಮರುಕಳಿಸಬೇಕು ಎನ್ನುವ ಕಾರಣಕ್ಕೆ ದೇಸಿ ಆಟಗಳನ್ನು ಆಯೋಜಿಸಲಾಗಿತ್ತು. ಸ್ಟಾಲ್‌ಗ‌ಳ ಬಾಡಿಗೆ ಅರ್ಧದಷ್ಟು ಕಡಿಮೆ ಮಾಡಲಾಗಿದೆ ಎಂದು ಹೇಳಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಕೈಗಾರಿಕೆ, ವೈದ್ಯಕೀಯ ಕ್ಷೇತ್ರ ಅಲ್ಲದೆ ಇಲ್ಲಿನ ಮೂರುಸಾವಿರ ಮಠ ಹಾಗೂ ಸಿದ್ಧಾರೂಢಸ್ವಾಮಿ ಮಠದಿಂದಾಗಿ ನಗರ ಪ್ರಸಿದ್ಧಿ ಪಡೆದಿದೆ. ಇದೀಗ ಅಂತಾರಾಷ್ಟ್ರೀಯ ಮಟ್ಟದ ಗಾಳಿಪಟ ಉತ್ಸವದ ಮೂಲಕ ಖ್ಯಾತಿ ಮತ್ತಷ್ಟು ಹೆಚ್ಚಾಗಿದೆ. ಹತ್ತಾರು ಮೂಲಸೌಲಭ್ಯದ ಮೂಲಕ ಜನರಿಗೆ ಮನರಂಜನೆ ಇರಬೇಕು ಎನ್ನುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಆಯೋಜನೆ ಶ್ಲಾಘನೀಯ ಎಂದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.