ವಿಜಯಪುರ: ಯುವತಿಯ ಅತ್ಯಾಚಾರ ಪ್ರಕರಣ… ಪೊಲೀಸರಿಂದ ಮೂವರ ಬಂಧನ
Team Udayavani, Jan 23, 2023, 7:16 PM IST
ವಿಜಯಪುರ: ನಗರದ ಸ್ಯಾಟ್ಲೈಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಅಯಾಜ ಅಹಮದ್ ಜಮಾದಾರ, ಉಮರ ಫಾರೂಕ ಹಾಗೂ ರಾಹಿಲ್ ಬಂಧಿತ ಆರೋಪಿಗಳು ಎಂದು ಎಸ್ಪಿ ಆನಂದಕುಮಾರ ತಿಳಿಸಿದ್ದಾರೆ.
ಜ.17 ರಂದು ರಾತ್ರಿ ವೇಳೆ ನಗರದ ಸ್ಯಾಟ್ಲೈಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಾನಸಿಕ ಅಸ್ವಸ್ತೆಯಿಂದ ಬಳಸುತ್ತಿದ್ದ ಯುವತಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಈ ಕುರಿತು ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು.
ಘಟನೆ ಬಳಿಕ ಯುವತಿ ಬಳಿಕೆಯಿಂದ ನಿರ್ಜನ ಪ್ರದೇಶದಲ್ಲಿ ನರಳುತ್ತಿರುವುದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಸಂತ್ರಸ್ತ ಯುವತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದರು.
ಮತ್ತೊಂದೆಡೆ ಘಟನೆಯ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದರು. ಘಟನಾ ಸ್ಥಳದಲ್ಲಿ ಕಂಡುಬಂದ ಮೊಬೈಲ್ ಸಂಪರ್ಕಗಳು, ಬಸ್ ನಿಲ್ದಾಣದಲ್ಲಿ ಯುವತಿಯನ್ನು ಪುಸಲಾಯಿಸಿ ಕೊರೆದೊಯ್ದ ಸಿಸಿ ಕೆಮೆರಾದ ತುಣುಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ನಮ್ಮ ಪೊಲೀಸರು ಯಶಸ್ವಿಯಗಿದ್ದಾರೆ ಎಂದು ಎಸ್ಪಿ ಆನಂದಕುಮಾರ ವಿವರಿಸಿದರು.
ಇದನ್ನೂ ಓದಿ: ಮಂಗಳೂರು ಕಂಬಳದಲ್ಲಿ ಮುಂದುವರಿದ ‘ನಿಶಾಂತ್ ಶೆಟ್ಟಿ’ ಪಾರುಪತ್ಯ: ಸತತ 6 ವರ್ಷವೂ ಮೆಡಲ್ ಸಾಧನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ