ಹಳ್ಳ ಹಿಡಿದ ಕೃಷಿ ಯಂತ್ರಧಾರೆ ಯೋಜನೆ


Team Udayavani, Jan 24, 2023, 2:58 PM IST

ಹಳ್ಳ ಹಿಡಿದ ಕೃಷಿ ಯಂತ್ರಧಾರೆ ಯೋಜನೆ

ಆಲೂರು: ದೂಳು ತುಂಬಿಕೊಂಡು, ಗಿಡ ಗಂಟಿಗಳ ಮಧ್ಯೆ ನಿಂತಿರುವ ಟ್ರ್ಯಾಕ್ಟರ್‌, ಟಿಲ್ಲರ್‌, ಒಕ್ಕಣೆ ಯಂತ್ರ, ಎಲ್ಲೆಂದರಲ್ಲೇ ಬಿದ್ದು ತುಕ್ಕು ಹಿಡಿಯುತ್ತಿರುವ ಕಲ್ಟಿವೇಟರ್‌ಗಳು ಈ ದೃಶ್ಯ ತಾಲೂಕಿನ ಕೆ.ಹೊಸಕೋಟೆ ಹೋಬಳಿ ಕೇಂದ್ರದಲ್ಲಿನ ಕೃಷಿ ಉಪಕರಣ ಗಳ ಬಾಡಿಗೆ ಸೇವಾ ಕೇಂದ್ರದಲ್ಲಿ ಕಂಡು ಬಂದಿದೆ.

ರೈತರಿಗೆ ಉಪಯೋಗ ಆಗಬೇಕಿದ್ದ ಕೋಟ್ಯಂತರ ರೂ.ನ ಯಂತ್ರಗಳು ಈಗ ಪಾಳು ಬಿದ್ದಿವೆ. ಇದರ ನಿರ್ವಹಣೆ ಹೊಣೆ ಹೊತ್ತಿರುವ ಅಧಿಕಾರಿಗಳು, ಚಿತ್ರ ದುರ್ಗ ಜಿಲ್ಲೆ ವರ್ಷ ಅಸೋಸಿಯೇಷನ್‌ ಖಾಸಗಿ ಸಂಸ್ಥೆಯ ನಿರ್ಲಕ್ಷ್ಯದಿಂದಾಗಿ ಕೃಷಿ ಯಂತ್ರಧಾರೆ ಯೋಜನೆ ಹಳ್ಳ ಹಿಡಿದಿದೆ.

ಸಣ್ಣ ಮತ್ತು ಮಧ್ಯಮ ವರ್ಗದ ರೈತರು ಕೃಷಿ ಚಟುವಟಿಕೆಗೆ ಅತ್ಯಾಧುನಿಕ ಯಂತ್ರಗಳನ್ನು ಖರೀದಿ ಸಲು ಸಾಧ್ಯವಿಲ್ಲ. ಹೀಗಾಗಿ, ಕಡಿಮೆ ದರದಲ್ಲಿ ಯಂತ್ರೋ ಪಕರಣಗಳನ್ನು ರೈತರಿಗೆ ಬಾಡಿಗೆ ನೀಡುವ ಉದ್ದೇಶದಿಂದ ಸರ್ಕಾರ 2014ರಲ್ಲೇ ಕೃಷಿ ಯಂತ್ರ ಧಾರೆ ಎಂಬ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಿತ್ತು.

ಮಧ್ಯಮ ಹಾಗೂ ಬಡ ಕುಟುಂಬದ ರೈತರಿಗೆ ಅನುಕೂಲ ಮಾಡುವ ಸಲುವಾಗಿ ತಾಲೂಕಿನ ಪ್ರತಿ ಹೋಬಳಿ ಮಟ್ಟದಲ್ಲಿ ಕೃಷಿ ಯಂತ್ರಧಾರೆ ಕೇಂದ್ರ ಆರಂಭಗೊಂಡು, ಎರಡ್ಮೂರು ವರ್ಷ ಕಳೆದರೂ, ಟೆಂಡರ್‌ ಪಡೆದ ಖಾಸಗಿ ಸಂಸ್ಥೆ ಸರಿಯಾಗಿ ನಿರ್ವಹಣೆ ಮಾಡದಿರುವುದರಿಂದ ವರ್ಷದಲ್ಲೇ ಮುಚ್ಚಿ ಹೋಗಿದೆ. ಅಲ್ಲಿರುವ ಕೃಷಿ ಉಪಕರಣಗಳು ತುಕ್ಕು ಹಿಡಿದು ಉಪಯೋಗಕ್ಕೆ ಬಾರದಂತಾಗಿವೆ. ಇದಕ್ಕೆ ಸಂಸ್ಥೆಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳುವ ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ತುಕ್ಕು ಹಿಡಿಯುತ್ತಿವೆ ಯಂತ್ರಗಳು: ಕರವೇ ಹೋಬಳಿ ಅಧ್ಯಕ್ಷ ವಿವೇಕ್‌ ವೈದ್ಯನಾಥ್‌ ಮಾತನಾಡಿ, ರೈತ ರಿಗೆ ಕೃಷಿ ಯಂತ್ರಗಳನ್ನು ಕಡಿಮೆ ದರದಲ್ಲಿ ಬಾಡಿಗೆ ನೀಡುವ ಸಲುವಾಗಿ ತಾಲೂ ಕಿನ ಕೆ.ಹೊಸಕೋಟೆ ಗ್ರಾಮದಲ್ಲಿ ಬಾಡಿಗೆ ಯಂತ್ರ ಗಳ ಕೇಂದ್ರ ತೆರೆಯ ಲಾಗಿದೆ. ಆದರೆ, ನಿರ್ವ ಹಣೆ ಹೊಣೆ ಹೊತ್ತಿರುವ ಸಂಸ್ಥೆಯವರ ನಿರ್ಲಕ್ಷ್ಯ ದಿಂದ ರೈತರಿಗೆ ಉಪಯೋಗ ಆಗಬೇಕಿದ್ದ ಯಂತ್ರ ಗಳು ಕಚೇರಿ ಮುಂಭಾಗದಲ್ಲಿ ತುಕ್ಕು ಹಿಡಿಯುತ್ತಿವೆ.ಇವರಿಗೆ ಯಾರು ಹೇಳು ವವರು, ಕೇಳುವವರು ಇಲ್ಲ ದಂತಾಗಿದೆ. ಜನರ ತೆರಿಗೆ ಹಣ ಲೂಟಿ ಮಾಡುತ್ತಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಂಸ್ಥೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

ರೈತರಿಗೆ ಕಡಿಮೆ ದರದಲ್ಲಿ ಬಾಡಿಗೆ ನೀಡುವ ಸಲುವಾಗಿ ಕೃಷಿ ಯಂತ್ರಗಳ ನಿರ್ವಹಣೆ, ಪೂರೈಕೆ ಹೊಣೆ ಚಿತ್ರದುರ್ಗ ಜಿಲ್ಲೆ ವರ್ಷ ಅಸೋಸಿಯೇಷನ್‌ ಸಂಸ್ಥೆ ವಹಿಸಿಕೊಂಡಿದೆ. ಸಂಸ್ಥೆ ಸರಿಯಾಗಿ ನಿರ್ವಹಿಸದ ಕಾರಣ, ಎರಡ್ಮೂರು ನೋಟಿಸ್‌ ನೀಡಲಾಗಿದೆ. ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಲು ಸರ್ಕಾರದ ಗಮನಕ್ಕೆ ತರಲಾಗಿದೆ. ವಾರದ ಹಿಂದೆ ನಡೆದ ಜಿಪಂ ಸಭೆಯಲ್ಲಿ ಸಿಇಒ ಕೂಡ ಸಂಸ್ಥೆಯಿಂದ ಸಮಜಾಯಿಸಿ ಕೇಳಿದ್ದಾರೆ. ಸಂಸ್ಥೆ ವಿರುದ್ಧ ಸದ್ಯದಲ್ಲಿ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. – ಮನು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ.

ರೈತರ ಅನುಕೂಲಕ್ಕಾಗಿ ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಅಸಮರ್ಥ ಅಧಿಕಾರಿ ಗಳಿಂದ ಸರ್ಕಾರದ ಯೋಜನೆ ಗಳು ಹಳ್ಳ ಹಿಡಿದಿವೆ. ಲಕ್ಷಾಂತರ ರೂ.ನ ಯಂತ್ರಗಳು ತುಕ್ಕು ಹಿಡಿಯು ತ್ತಿವೆ. ಬಾಡಿಗೆ ಪಡೆದ ಮಾಲಿಕರಿಗೂ ಸರಿಯಾಗಿ ಹಣ ನೀಡದೆ ವಂಚಿಸ ಲಾಗುತ್ತಿದೆ. ನಿರ್ವಹಣೆ ಮಾಡದ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ. ಧರ್ಮಪ್ಪ, ರೈತ, ಕಾಡ್ಲೂರು ಗ್ರಾಮ.

ಕುಮಾರಸ್ವಾಮಿ ಟಿ.ತಿಮ್ಮನಹಳ್ಳಿ

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.