ಸಿಐಡಿ ತನಿಖಾಧಿಕಾರಿಗೆ 76 ಲಕ್ಷ ರೂ. ಲಂಚ: ಕಿಂಗ್‌ಪಿನ್‌ ಹೊಸ ಬಾಂಬ್‌

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ

Team Udayavani, Jan 25, 2023, 7:05 AM IST

psiಸಿಐಡಿ ತನಿಖಾಧಿಕಾರಿಗೆ 76 ಲಕ್ಷ ರೂ. ಲಂಚ: ಕಿಂಗ್‌ಪಿನ್‌ ಹೊಸ ಬಾಂಬ್‌

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಿಂದ ಪಾರು ಮಾಡಲು ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ 76 ಲಕ್ಷ ರೂ. ನೀಡಿರುವುದಾಗಿ ಪ್ರಮುಖ ಆರೋಪಿ ಆರ್‌.ಡಿ. ಪಾಟೀಲ ಲೋಕಾಯುಕ್ತರಿಗೆ ದೂರು ನೀಡಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ.

ಈ ದೂರಿನೊಂದಿಗೆ 8.4 ನಿಮಿಷ ಅವಧಿಯ ಆಡಿಯೋದ ಪೆನ್‌ಡ್ರೈವ್‌ ದಾಖಲೆಯಾಗಿ ನೀಡಿದ್ದಾನೆ. ಜತೆಗೆ ಈ ಆಡಿಯೋವನ್ನು “ಆರ್‌.ಡಿ. ಪಾಟೀಲ ಯುವ ಬ್ರಿಗೇಡ್‌’ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲೂ ಅಪ್‌ಲೋಡ್‌ ಮಾಡಿದ್ದಾನೆ.

ಶಂಕರಗೌಡ ಪಾಟೀಲ ಅವರು ಪ್ರಕರಣ ಮುಂದುವರಿಸದಿರಲು, ಅದರಿಂದ ಪಾರು ಮಾಡಲು ಮೂರು ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಆದರೆ ನನ್ನಿಂದ ಅಷ್ಟು ಹಣ ಹೊಂದಿಸಲು ಸಾಧ್ಯವಾಗುವುದಿಲ್ಲ. ಬೇಕಿದ್ದರೆ 76 ಲಕ್ಷ ರೂ. ಕೊಡುತ್ತೇನೆ’ ಎಂದು ಹೇಳಿ ಬ್ಯಾಂಕ್‌ ಆಫ್‌ ಬರೋಡ ಶಾಖೆಯಿಂದ ಹಣ ಡ್ರಾ ಮಾಡಿಸಿಕೊಂಡು ನನ್ನ ಅಳಿಯ ಶ್ರೀಕಾಂತ ಮೂಲಕ ಅವರಿಗೆ ತಲುಪಿಸಿದ್ದೇನೆ. ಜಾಮೀನು ಪಡೆದು ಹೊರಬಂದ ಬಳಿಕವೂ ಶಂಕರಗೌಡ ಹಾಗೂ ಅವರ ಅ ಧೀನ ಸಿಬ್ಬಂದಿ ಮನೆಗೆ ಬಂದು ಉಳಿದ ಹಣ ನೀಡುವಂತೆ ಕಿರುಕುಳ ನೀಡಿದ್ದಾರೆ’ ಎಂದು ಫೇಸ್‌ಬುಕ್‌ ವಿಡಿಯೋದಲ್ಲಿ ಆರೋಪ ಮಾಡಿರುವುದು ಈಗ ದೊಡ್ಡ ಸದ್ದು ಮಾಡುತ್ತಿದೆ.

ಆಡಿಯೋದಲ್ಲಿ ಏನಿದೆ?: ಎಂಟು ನಿಮಿಷ ನಾಲ್ಕು ಸೆಕೆಂಡ್‌ ಅವ ಧಿಯ ವಿಡಿಯೋದಲ್ಲಿ ಆರ್‌.ಡಿ. ಪಾಟೀಲ ಮಾತು ಮಾತ್ರ ಸ್ಪಷ್ಟವಾಗಿ ಕೇಳಿಸುತ್ತದೆ. ಎದುರಿಗೆ ಮಾತನಾಡಿರುವ ವ್ಯಕ್ತಿಯ ಧ್ವನಿ ಅಸ್ಪಷ್ಟವಾಗಿದೆ. ಏನಾದರೂ ಮಾಡಿ, ನನಗೆ ಹೊರಗೆ ಹೋಗುವಂತೆ ಮಾಡಿ. ನನಗೆ ಪ್ರತಿದಿನವೂ ಮಹತ್ವದ ದಿನವಾಗಿದೆ. ನನಗೆ ಲಂಡನ್‌ನಲ್ಲಿ ಭಕ್ತರೊಬ್ಬರು ಇದ್ದಾರೆ. ಅವರಿಂದ ಹಣದ ವ್ಯವಸ್ಥೆ ಮಾಡುತ್ತೇನೆ ಎಂದಿದ್ದಾನೆ.

ಈ ನಡುವೆ ಕಲಬುರಗಿ ಲೋಕಾಯುಕ್ತ ಎಸ್‌ಪಿ ಎ.ಆರ್‌. ಕರ್ನೂಲ್‌ ಅವ ರು, ಆರ್‌.ಡಿ. ಪಾಟೀಲ ದೂರನ್ನು ಲೋಕಾಯುಕ್ತರಿಗೆ ಕಳುಹಿಸಿರುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಆರೋಪ ನಿರಾಕರಣೆ
ಈ ಎಲ್ಲ ಆರೋಪಗಳನ್ನು ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅಲ್ಲಗಳೆದಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ಪಾಟೀಲನೊಂದಿಗೆ ನಾನು ಮಾತನಾಡಿರುವುದು ಎನ್ನಲಾದ ಘಟನೆ ನಡೆದಿದ್ದು ಕಳೆದ ಜುಲೈನಲ್ಲಿ. ಈ ಆರೋಪದ ಬಗ್ಗೆ ಎಸಿಬಿಯವರೂ ಈಗಾಗಲೇ ತನಿಖೆ ನಡೆಸಿ ಇದರಲ್ಲಿ ಏನೂ ಹುರುಳಿಲ್ಲ ಎಂದು ಕೈಬಿಟ್ಟಿದ್ದಾರೆ. ತನಿಖಾ ಧಿಕಾರಿಗಳ ನೈತಿಕತೆ ಕುಗ್ಗಿಸಲು ಹಾಗೂ ಜನರಲ್ಲಿ ಸುಖಾಸುಮ್ಮನೆ ತನಿಖೆ ಕುರಿತು ಅನುಮಾನ ಹುಟ್ಟಿಸಲು ಹೂಡಿರುವ ತಂತ್ರ ಇದು. ನನಗೆ ಹಲವು ಬಾರಿ ತನ್ನ ಹಿಂಬಾಲಕರನ್ನು ಛೂಬಿಟ್ಟು ಹಲ್ಲೆ ಮಾಡಲೂ ಯತ್ನಿಸಿದ್ದ. ಇದೆಲ್ಲವನ್ನೂ ಎದುರಿಸಿ ಪ್ರಕರಣವನ್ನು ಒಂದು ಹಂತಕ್ಕೆ ತಂದಿರುವ ತೃಪ್ತಿ ನಮಗಿದೆ ಎಂದಿದ್ದಾರೆ.

ತನಿಖೆ ಬಳಿಕ ಕ್ರಮ:ಸಿಎಂ
ಆರ್‌.ಡಿ.ಪಾಟೀಲ ವಿಚಾರದಲ್ಲಿ, ಆತನೇ ಬಿಡುಗಡೆ ಮಾಡಿರುವ ಹಣ ಬೇಡಿಕೆಯ ವಿಚಾರದ ವಿಡಿಯೋ ಕುರಿತು ಪೊಲೀಸ್‌ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಈ ವೇಳೆ ಅಧಿಕಾರಿಯದ್ದು ತಪ್ಪು ಎಂದು ತಿಳಿದುಬಂದರೆ ಖಂಡಿತವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಿಎಸ್‌ಐ ಹಗರಣದ ತನಿಖೆ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ನಡೆಯುತ್ತಿದೆ. ನಾವು ಏನು ಹೇಳಲಿಕ್ಕೆ ಆಗುವುದಿಲ್ಲ. ಆದರೆ, ಮೊದಲು ನಾವು ವಿಡಿಯೋ ನೋಡೋಣ., ಆಡಿಯೋ ಕೇಳ್ಳೋಣ. ಬಳಿಕ ಸತ್ಯಾಸತ್ಯತೆ ತಿಳಿದು ಕ್ರಮದ ಬಗ್ಗೆ ವಿಚಾರ ಮಾಡೋಣ ಎಂದರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.