ಇಂದು ರಾಷ್ಟ್ರೀಯ ಮತದಾರರ ದಿನ: ಯುವ ಮತದಾರರೇ ನಿರ್ಣಾಯಕ?


Team Udayavani, Jan 25, 2023, 7:45 AM IST

ಇಂದು ರಾಷ್ಟ್ರೀಯ ಮತದಾರರ ದಿನ: ಯುವ ಮತದಾರರೇ ನಿರ್ಣಾಯಕ?

ಬೆಂಗಳೂರು: ಚುನಾವಣೆಯಲ್ಲಿ ಯುವ ಮತದಾರರನ್ನು ಗಮನದಲ್ಲಿಟ್ಟುಕೊಂಡು ಭಾರತದ ಚುನಾವಣ ಆಯೋಗ ಈ ವರ್ಷದ ರಾಷ್ಟ್ರೀಯ ಮತದಾರರ ದಿನಾಚರಣೆಗೆ “ಮತದಾನಕ್ಕಿಂತ ಇನ್ನೊಂದಿಲ್ಲ; ನಾನು ಖಚಿತವಾಗಿ ಮತದಾನ ಮಾಡುವೆ’ ಎಂದು ಘೋಷಣೆ ನೀಡಿದೆ.

ರಾಜ್ಯದಲ್ಲಿ ಯುವ ಮತದಾರರ ಸಂಖ್ಯೆ 7.07 ಲಕ್ಷ ಇದ್ದು, ಆ ಪ್ರಕಾರ ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯುವ ಮತದಾರರು ನಿರ್ಣಾಯಕ ಪಾತ್ರ ವಹಿಸಿಲಿದ್ದಾರೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮಾಹಿತಿಯಂತೆ 2023ರ ಮತದಾರರ ಅಂತಿಮ ಪಟ್ಟಿಯಲ್ಲಿ ಯುವ ಮತದಾರರ (18-19 ವರ್ಷ) ಸಂಖ್ಯೆ 7,07,488 ಇದೆ. ಕೊಡಗು, ಚಾಮರಾಜನಗರ ಜಿಲ್ಲೆಗಳು ಹೊರತಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಯುವ ಮತದಾರರ ಸಂಖ್ಯೆ ಸರಾಸರಿ 14ರಿಂದ 15 ಸಾವಿರ ಇದೆ. ಬೆಳಗಾವಿ, ಬೆಂಗಳೂರು ನಗರ ಜಿಲ್ಲೆ (ಬಿಬಿಎಂಪಿ ಸೇರಿ), ತುಮಕೂರು, ಚಿತ್ರದುರ್ಗ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಯುವ ಮತದಾರರ ಸಂಖ್ಯೆ ಹೆಚ್ಚಿದೆ. ಒಟ್ಟು ಯುವ ಮತದಾರರ ಪೈಕಿ 3.91 ಲಕ್ಷ ಯುಕರು ಮತ್ತು 3.15 ಯುವತಿಯರು ಇದ್ದಾರೆ.

ಬೆಳಗಾವಿಯಲ್ಲಿ ಅತಿ ಹೆಚ್ಚು 54,820, ಬೆಂಗಳೂರು ನಗರ ಜಿಲ್ಲೆ (ಬಿಬಿಎಂಪಿ ಸೇರಿ) 54,787, ತುಮಕೂರು 34,628, ಚಿತ್ರದುರ್ಗ 31,050 ಹಾಗೂ ಮೈಸೂರು ಜಿಲ್ಲೆ 30,650 ಮತದಾರರು ಇದ್ದಾರೆ. ಕೊಡಗು ಜಿಲ್ಲೆಯಲ್ಲಿ 5,806 ಹಾಗೂ ಚಾಮರಾಜನಗರ 9,244 ಅತಿ ಕಡಿಮೆ ಯುವ ಮತದಾರರು ಇದ್ದಾರೆ.

ಜಿಲ್ಲೆ ಯುವ ಮತದಾರರು
ಬೆಂಗಳೂರು ನಗರ 54,787
(ಬಿಬಿಎಂಪಿ ಸೇರಿ)
ಬಾಗಲಕೋಟೆ 24,533
ಬೆಂಗಳೂರು ಗ್ರಾ. 15,542
ಬೆಳಗಾವಿ 54,820
ಬಳ್ಳಾರಿ 26,721
ಬೀದರ್‌ 19,358
ವಿಜಯಪುರ 27,522
ಚಾಮರಾಜನಗರ 9,244
ಚಿಕ್ಕಬಳ್ಳಾಪುರ 19,895
ಚಿಕ್ಕಮಗಳೂರು 10,268
ಚಿತ್ರದುರ್ಗ 31,050
ದಕ್ಷಿಣ ಕನ್ನಡ 25,259
ದಾವಣಗೆರೆ 23,139
ಧಾರವಾಡ 20,029
ಗದಗ 15,204
ಕಲಬುರಗಿ 25,662
ಹಾಸನ 15,232
ಹಾವೇರಿ 27,045
ಕೊಡಗು 5,806
ಕೋಲಾರ 20,487
ಕೊಪ್ಪಳ 23,002
ಮಂಡ್ಯ 19,822
ಮೈಸೂರು 30,650
ರಾಯಚೂರು 22,905
ರಾಮನಗರ 13,858
ಶಿವಮೊಗ್ಗ 22,185
ತುಮಕೂರು 34,628
ಉಡುಪಿ 13,816
ಉತ್ತರಕನ್ನಡ 20,912
ವಿಜಯನಗರ 21,280
ಯಾದಗಿರಿ 12,527

ಇನ್ನೂ ಹೆಚ್ಚಾಗಲಿದ್ದಾರೆ
ಈ ತಿಂಗಳ 5ರಂದು ಪ್ರಕಟಿಸಲಾದ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಮತ್ತು ಜ. 15ರಂದು ಪ್ರಕಟಿಸಲಾದ ಬಿಬಿಎಂಪಿ ವ್ಯಾಪ್ತಿಯ ಚಿಕ್ಕಪೇಟೆ, ಶಿವಾಜಿನಗರ ಹಾಗೂ ಮಹದೇವಪುರ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯಂತೆ ಯುವ ಮತದಾರರು 7.07 ಲಕ್ಷ ಇದ್ದಾರೆ. ಆದರೆ, 2004ರ ಜೀವಂತ ಜನನ ಪ್ರಮಾಣ 9.50 ಲಕ್ಷ ಇತ್ತು. ಅವರು ಈಗ 18 ವರ್ಷ ತಲುಪಿದ್ದಾರೆ. ಆದರೆ, ಅಂತಿಮ ಮತದಾರರ ಪಟ್ಟಿಯಲ್ಲಿ 7 ಲಕ್ಷ ಮಂದಿ ಮಾತ್ರ ಸೇರ್ಪಡೆಯಾಗಿದ್ದಾರೆ. ಉಳಿದ 2.50 ಲಕ್ಷ ಮಂದಿಯನ್ನು ಗುರುತಿಸಲು ವಿಶೇಷ ಆದ್ಯತೆ ವಹಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ
ಭಾರತದ ಚುನಾವಣ ಆಯೋಗ ಸ್ಥಾಪನೆಯಾದ ದಿನ ಅಂದರೆ 1950ರ ಜ. 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ. ಇದು 2011ರಲ್ಲಿ ಮೊದಲ ಬಾರಿಗೆ ಚಾಲ್ತಿಗೆ ಬಂತು. ಈವರೆಗೆ 12 ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗಿದ್ದು, ಈಗ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದೆ. ಈ ಬಾರಿ “ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಘೋಷಣೆಯನ್ನು ನೀಡಲಾಗಿದೆ. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಪುರಭವನದಲ್ಲಿ ಬುಧವಾರ ರಾಜ್ಯಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಟಾಪ್ ನ್ಯೂಸ್

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.