ಶತಕ ಬಾರಿಸಿದರೂ ತಂದೆಗೆ ಖುಷಿ ಆಗಿರಲಿಕ್ಕಿಲ್ಲ: ಶುಭಮನ್ ಗಿಲ್


Team Udayavani, Jan 25, 2023, 5:48 PM IST

ಶತಕ ಬಾರಿಸಿದರೂ ತಂದೆಗೆ ಖುಷಿ ಆಗಿರಲಿಕ್ಕಿಲ್ಲ: ಶುಭಮನ್ ಗಿಲ್

ಇಂದೋರ್‌: ಭಾರತದ ಓಪನಿಂಗ್‌ ಕೊರತೆಯನ್ನು ಬಹುಪಾಲು ನಿವಾರಿಸಿದ ಹೆಗ್ಗಳಿಕೆ ಶುಭಮನ್‌ ಗಿಲ್‌ ಅವರದು. ಏಕದಿನ ವಿಶ್ವಕಪ್‌ ವರ್ಷದಲ್ಲಿ ಅವರು ಪ್ರದರ್ಶಿಸುತ್ತಿರುವ ಫಾರ್ಮ್ ಗೆ ಎಲ್ಲ ದಿಕ್ಕಿನಿಂದಲೂ ಪ್ರಶಂಸೆ ವ್ಯಕ್ತವಾಗುತ್ತಿದೆ. ಅದರಲ್ಲೂ ನ್ಯೂಜಿಲ್ಯಾಂಡ್‌ ಎದುರಿನ ಅವರ ದ್ವಿಶತಕ, ಶತಕ ಸಾಧನೆಯಂತೂ ಮೇರು ಮಟ್ಟದ್ದು. 3 ಪಂದ್ಯಗಳ ಸರಣಿಯಲ್ಲಿ ಸರ್ವಾಧಿಕ 360 ರನ್‌ ಪೇರಿಸಿದ ಹೆಗ್ಗಳಿಕೆಯೂ ಗಿಲ್‌ ಅವರದಾಗಿದೆ.

ಸಹಜವಾಗಿಯೇ ಇದು ಟೀಮ್‌ ಇಂಡಿಯಾ ಅಭಿಮಾನಿಗಳೆಲ್ಲ ಖುಷಿಪಡುವ ವಿಚಾರ.ಆದರೆ ಶುಭಮನ್‌ ಗಿಲ್‌ ಅವರ ತಂದೆಗೆ ಈ ಸಾಧನೆ ಅಷ್ಟೊಂದು ಖುಷಿ ಕೊಟ್ಟಿಲ್ಲವೇ? ಇದೆಂಥ ಪ್ರಶ್ನೆ ಎನ್ನುತ್ತೀರಾ? ಸ್ವತಃ ಶುಭಮನ್‌ ಗಿಲ್‌ ಅವರೇ ಇಂಥದೊಂದು ಕುತೂಹಲದ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ.

ಇಂದೋರ್‌ ಪಂದ್ಯ ಮುಗಿದ ಬಳಿಕ ಕೋಚ್‌ ರಾಹುಲ್‌ ದ್ರಾವಿಡ್‌ ಅವರು ಶುಭಮನ್‌ ಗಿಲ್‌ ಸಂದರ್ಶನ ನಡೆಸುತ್ತಿದ್ದಾಗ ಇಂಥದೊಂದು ಕೌತುಕದ ಸಂಗತಿ ತಿಳಿದು ಬಂತು.

“ಕಳೆದ ಕೆಲವು ತಿಂಗಳಿಂದ ನೀವು ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತ ಬಂದಿರುವಿರಿ. ಸಹಜವಾಗಿಯೇ ನಿಮ್ಮ ತಂದೆಗೆ ಬಹಳ ಖುಷಿ ಆಗಿರಬೇಕಲ್ಲವೇ?’ ಎಂದು ಪ್ರಶ್ನಿಸುತ್ತಾರೆ ರಾಹುಲ್‌ ದ್ರಾವಿಡ್‌.


ಇದಕ್ಕೆ ಗಿಲ್‌ ಕೊಟ್ಟ ಉತ್ತರ ಅಚ್ಚರಿ ಹುಟ್ಟಿಸುತ್ತದೆ. “ಇಲ್ಲ, ಪೂರ್ತಿ ಸಂತೋಷ ಆಗಿರಲಿಕ್ಕಿಲ್ಲ. ಪ್ರತೀ ಸಲವೂ ನಾನು ಉತ್ತಮ ಫಾರ್ಮ್ ಪ್ರದರ್ಶಿಸಿ ದೊಡ್ಡ ಮೊತ್ತ ಗಳಿಸಬೇಕೆಂದು ಅವರು ಬಯಸುತ್ತಾರೆ. ಇಂದು ಶತಕ ಗಳಿಸಿದೊಡನೆಯೇ ಔಟಾದುದರಿಂದ ತಂದೆ ಖುಷಿಪಡುವುದು ಅನುಮಾನ’ ಎಂಬುದಾಗಿ ಶುಭಮನ್‌ ಗಿಲ್‌ ಹೇಳಿದರು.

“ಹಾಗಾದರೆ ಜಾಸ್ತಿ ರನ್‌ ಗಳಿಸದೇ ಇದ್ದಾಗ ನಾವು ನಿಮ್ಮನ್ನು ಬಿಟ್ಟರೂ ತಂದೆ ನಿಮ್ಮನ್ನು ಬಿಡುವುದಿಲ್ಲ ಎಂದಾಯಿತು…’ ಎಂದು ರಾಹುಲ್‌ ದ್ರಾವಿಡ್‌ ಚಟಾಕಿ ಹಾರಿಸಿದರು!

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.