ಜಿಎಸ್ಟಿ ಪಾವತಿಗೆ ಕೊಟ್ಟ ಹಣದಲ್ಲಿ ಆಸ್ತಿ ಖರೀದಿ!
Team Udayavani, Jan 27, 2023, 10:06 AM IST
ಬೆಂಗಳೂರು: ರಾ ಜಿಎಸ್ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ 9.60 ಕೋಟಿ ರೂ. ವಂಚಿಸಿರುವ ಪ್ರಕರಣ ಸಂಬಂಧ ಸಂಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ನಿಖೀಲ್ ಮತ್ತು ವಿನಯ್ ಬಾಬುರನ್ನು ಬಂಧಿಸಲಾಗಿದೆ. ಬಿ.ಕಾಂ. ಪದವಿ ಪಡೆದುಕೊಂಡಿರುವ ಆರೋಪಿಗಳು ಆಟೋ ಮೊಬೈಲ್ ಕಂಪನಿಯಲ್ಲಿ ಸಹಾಯಕ ಚಾರ್ಟೆಡೆ ಅಕೌಂಟೆಂಟ್ ಎಂದು ಹೇಳಿಕೊಂಡು ಕೆಲಸಪಡೆದುಕೊಂಡಿದ್ದರು. ನಂತರ ಕಂಪನಿಯ ವಹಿವಾಟಿನ ಕುರಿತು ವರದಿ ಸಿದ್ಧಪಡಿಸಿದ ಆರೋಪಿಗಳು, ಕಂಪನಿಯು ಕೋಟ್ಯಂತರ ರೂ. ವಹಿವಾಟು ನಡೆಸಿದ್ದು,ಅದಕ್ಕೆ ಪ್ರತಿಯಾಗಿ 9.60 ಕೋಟಿ ರೂ. ಜಿಎಸ್ಟಿ ಪಾವತಿ ಮಾಡಬೇಕೆಂದು ಸೂಚಿಸಿದ್ದಾರೆ.
ಅದರಂತೆ ಕಂಪನಿಮಾಲೀಕರು ಜಿಎಸ್ಟಿ ಪಾವತಿಸಲು ಆರೋಪಿಗಳಿಗೆ ಹಣ ನೀಡಿದ್ದಾರೆ. ಆದರೆ, ಬಂಧಿತರು ಈ ಹಣವನ್ನು ಜಿಎಸ್ಟಿ ಪಾವತಿ ಮಾಡದೆ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಖರೀದಿಸಿದ್ದಾರೆ. ಕೆಲ ದಿನ ಬಳಿಕ ಕಂಪನಿ ಮಾಲೀಕರು ಬೇರೆಡೆ ಲೆಕ್ಕಪರಿಶೋಧಕರ ಮೂಲಕ ಪರಿಶೀಲಿಸಿದಾಗ ಆರೋಪಿಗಳು ವಂಚಿಸಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣವನ್ನುಸಂಜಯನಗರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರು ಖರೀದಿಸಿದ್ದ ಮೂರು ಕೋಟಿರೂ. ಮೌಲ್ಯದ ಆಸ್ತಿ ಹಾಗೂ ವಿನಯ್ ಬಾಬುಖರೀದಿಸಿದ್ದ ಫ್ಲ್ಯಾಟ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ