ಗುಮ್ಮಟನಗರಿಯಲ್ಲಿ ಕಸ ನಿರ್ವಹಣೆ ಲೋಪ: ಲೋಕಾಯುಕ್ತರ ಅಸಮಾಧಾನ


Team Udayavani, Jan 27, 2023, 12:55 PM IST

ಗುಮ್ಮಟನಗರಿಯಲ್ಲಿ ಕಸ ನಿರ್ವಹಣೆ ಲೋಪ: ಲೋಕಾಯುಕ್ತರ ಅಸಮಾಧಾನ

ವಿಜಯಪುರ: ಪ್ರವಾಸಿಗರ ಸ್ವರ್ಗ ಎನಿಸಿರುವ ವಿಜಯಪುರ ಮಹಾನಗರದಲ್ಲಿ ಕಸ ವಿಲೇವಾರಿ ಮಾಡುವಲ್ಲಿನ ನಿರ್ಲಕ್ಷ್ಯದ ಬಗ್ಗೆ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಸಮಾಧಾನ ಹೊರಹಾಕಿದ್ದಾರೆ.

ಶುಕ್ರವಾರ ಬೆಳಿಗ್ಗೆ ವಿಜಯಪುರ ಮಹಾನಗರ ಪ್ರದಕ್ಷಿಣೆ ಹಾಕಿದ ಲೋಕಾಯುಕ್ತ ನ್ಯಾಯಮೂರ್ತಿ ಪಾಟೀಲ ಅವರು, ನಗರದಲ್ಲಿ ಕಸ ವಿಲೇವಾರಿ ಸ್ಥಿತಿಗತಿ ಪರಿಶೀಲನೆ ಮಾಡಿದ್ದಾರೆ.

ನಗರ ಪ್ರದಕ್ಷಿಣೆ ಬಳಿಕ ನಗರದ ಹೊರ ಭಾಗದಲ್ಲಿರುವ ಕಸ ವಿಲೇವಾರಿ ಮತ್ತು  ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ‌ಭೇಟಿ ವೀಕ್ಷಿಸಿದ ಲೋಕಾಯುಕ್ತರು,  ನಗರದ ತ್ಯಾಜ್ಯ ನಿರ್ವಹಣೆ ಹಾಗೂ ಸಂಸ್ಕರಣೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಕಸ ವಿಲೇವಾರಿ ತ್ಯಾಜ್ಯ ‌ನಿರ್ವಹಣೆ ಕುರಿತು ನಗರದ ಪ್ರದಕ್ಷಿಣೆ ಹಾಕಿದ್ದೇನೆ. ಜಿಲ್ಲಾ ಕೇಂದ್ರವೂ ಆಗಿರುವ ವಿಜಯಪುರ ಪ್ರವಾಸಿಗರು ಹೆಚ್ಚಿನ‌ ಸಂಖ್ಯೆಯಲ್ಲಿ ಭೇಟಿ ನೀಡುವ ಐತಿಹಾಸಿಕ ಸ್ಮಾರಕಗಳ ನಗರವೂ ಹೌದು. ಆದರೆ ಇಂಥ ನಗರದಲ್ಲಿ ಕಸ ವಿಲೇವಾರಿ ವಿಷಯದಲ್ಲಿ ನಿರ್ಲಕ್ಷ್ಯ ಹಾಗೂ ಸಮಸ್ಯೆ ಕಂಡು ಬಂದಿದೆ ಎಂದು ಅಸಮಾಧಾನ ಹೊರಹಾಕಿದರು.

ಪುರಾತತ್ವ ಇಲಾಖೆ ವ್ಯಾಪ್ತಿಯ ಸ್ಥಳಗಳಲ್ಲೂ ಕಸ ಹಾಕಿರುವುದು ಕಂಡು‌ ಬಂದಿದೆ. ಪಾಲಿಕೆ ಸಿಬ್ಬಂದಿ ಅಲ್ಲಿಯ ಕಸ ತೆಗೆಯಲು ಪುರಾತತ್ವ ಇಲಾಖೆ ಅವಕಾಶ ನೀಡಿಲ್ಲ ಎಂಬ ವಿಷಯ ನಮ್ಮ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಪುರಾತತ್ವ ಇಲಾಖೆ, ಜಿಲ್ಲಾಡಳಿತ, ಪಾಲಿಕೆ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇತರೆ ಅಧಿಕಾರಿಗಳ ಸಭೆ ನಡೆಸುವುದಾಗಿ ಹೇಳಿದರು.

ಕಸ ನಿರ್ವಹಣೆ ಹಾಗೂ ಸಂಸ್ಕರಣೆ ವಿಷಯದ ಯಾವುದೇ ಇಲಾಖೆಯ ಅಧಿಕಾರಿಗಳು ತಪ್ಪು ಮಾಡಿದರೂ ಕ್ರಮ‌ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ನಗರ‌ ಹಾಗೂ ಜಿಲ್ಲೆಯಲ್ಲಿನ ಸ್ವಚ್ಛತೆಗೆ ಆದ್ಯತೆ ನೀಡಲು ಕ್ರಮ‌ ತೆಗೆದು ಕೊಳ್ಳಲಾಗುತ್ತದೆ. ಐತಿಹಾಸಿಕ ನಗರವಾದ ವಿಜಯಪುರ ಜಿಲ್ಲೆಗೆ ಪ್ರವಾಸಿಗರು ಭೇಟಿ ನೀಡುವ ಕಾರಣ ನಗರವನ್ನು ಸುಂದರವಾಗಿ ಇಡುವಲ್ಲಿ ಮಹಾನಗರ ಹಾಗೂ ಜಿಲ್ಲೆಯ ಜನತೆ ಜವಾಬ್ದಾರಿ ನಿಭಾಯಿಸಬೇಕು. ಕಸ‌‌ ನಿರ್ವಹಣೆ ಕುರಿತು ಜನರ ಸಹಭಾಗಿತ್ವ, ಸಹಕಾರ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತರಾಬೇಕು. ಸ್ಮಾರಕಗಳು, ರಸ್ತೆ, ಚರಂಡಿ ಅಂತೆಲ್ಲ ನೋಡದೇ ಎಲ್ಲೆಂದರಲ್ಲಿ ಕಸ ಸುರಿಯುವುದನ್ನು ಜನರೂ ಬಿಡಬೇಕು ಎಂದು ಸೂಚಿಸಿದರು.

ವಿಜಯಪುರ ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗತ್ತಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ , ವಿಜಯಪುರ ತಹಶೀಲ್ದಾರ ಸಿದ್ದರಾಯ ಭೋಸಗಿ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.