ಜೋಡೋ ಯಾತ್ರೆಯಲ್ಲಿ ಭದ್ರತಾ ಲೋಪ ಆರೋಪ
ಕಣಿವೆಯಲ್ಲಿ ದಿನದ ಮಟ್ಟಿಗೆ ಯಾತ್ರೆ ಸ್ಥಗಿತ
Team Udayavani, Jan 28, 2023, 6:45 AM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ಹೈಡ್ರಾಮಾ ನಡೆದಿದ್ದು, ಭದ್ರತಾ ಲೋಪ ಉಂಟಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಯಲ್ಲಿ ಶುಕ್ರವಾರ ಒಂದು ದಿನದ ಮಟ್ಟಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಯಾತ್ರೆ ಸ್ಥಗಿತಗೊಳಿ ಸಲಾಗಿದೆ.
ಈ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ಹಾಗೂ ಪೊಲೀಸರು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನೂ ಮಾಡಿದ್ದಾರೆ.
ಬೆಳಗ್ಗೆ 9 ಗಂಟೆಗೆ ಖಾಜಿಗುಂಡ್ನ ಹಳೆಯ ಹೆದ್ದಾರಿಯಲ್ಲಿ ಯಾತ್ರೆ ಆರಂಭಗೊಂಡಿತ್ತು. ಬನಿ ಹಾಲ್ನಿಂದ ಇನ್ನೇನು ಯಾತ್ರೆ ಕಾಶ್ಮೀರ ಕಣಿವೆ ಪ್ರವೇಶಿಸಬೇಕು ಎನ್ನುವಷ್ಟರಲ್ಲಿ, ಯಾತ್ರೆಗೆ ಒದಗಿಸ ಲಾಗಿದ್ದ ಭದ್ರತೆಯಲ್ಲಿ ಲೋಪ ಕಂಡುಬಂದ ಕಾರಣ ರಾಹುಲ್ ಗಾಂಧಿ ಅವರು ಮುಂದುವರಿ ಯದಂತೆ ಆಯೋಜಕರು ತಡೆದರು.
“ಪೊಲೀಸರು ಜನದಟ್ಟಣೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲ ರಾಗಿದ್ದಾರೆ. ಪೊಲೀಸ್ ವ್ಯವಸ್ಥೆಯೇ ಕುಸಿದು ಹೋಗಿದೆ’ ಎಂದು ಆರೋಪಿಸಿದ ರಾಹುಲ್, ದಿನದ ಮಟ್ಟಿಗೆ ಯಾತ್ರೆ ಸ್ಥಗಿತಗೊಳಿಸಿದರು. ಸೂಕ್ತ ಬಂದೋಬಸ್ತ್ ಕಲ್ಪಿಸಿದ ಬಳಿಕವೇ ಯಾತ್ರೆ ಮುಂದುವರಿಸುವುದಾಗಿ ತಿಳಿಸಿದರು.
ಇದೇ ವೇಳೆ, “ಖಾಜಿಗುಂಡ್ನಲ್ಲಿ ರಾಹುಲ್ ಗಾಂಧಿಯವರ ಭದ್ರತಾ ಸಿಬಂದಿಯನ್ನು ಏಕಾಏಕಿ ವಾಪಸ್ ಪಡೆದಿದ್ದೇಕೆ? ಇದು ಭಾರತ್ ಜೋಡೋ ಯಾತ್ರೆಯಲ್ಲಿ ಗಂಭೀರ ಭದ್ರತಾ ಲೋಪ ಎಸಗಿದಂತಲ್ಲವೇ? ಇದಕ್ಕೆ ಆದೇಶ ಕೊಟ್ಟವರು ಯಾರು?’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಪ್ರಶ್ನಿಸಿದ್ದಾರೆ. ಆದರೆ ಕಾಂಗ್ರೆಸ್ನ ಆರೋಪಕ್ಕೆ ಪ್ರತಿಕ್ರಿಯಿಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು, “ಬನಿಹಾಲ್ನಲ್ಲಿ ಯಾತ್ರೆಗೆ ದೊಡ್ಡಮಟ್ಟದಲ್ಲಿ ಜನಸಂದಣಿ ಸೇರುತ್ತದೆ ಎಂಬ ಮಾಹಿತಿಯನ್ನೇ ನಮಗೆ ಕೊಟ್ಟಿರಲಿಲ್ಲ. ಭದ್ರತಾ ಲೋಪ ಆಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಒಮರ್ ಅಬ್ದುಲ್ಲಾ ಭಾಗಿ: ಶುಕ್ರವಾರ ಬನಿಹಾಲ್ನಲ್ಲಿ ಜೋಡೋ ಯಾತ್ರೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಅವರೂ ಭಾಗಿಯಾದರು. ಭದ್ರತಾ ಲೋಪದ ಕುರಿತು ಅಬ್ದುಲ್ಲಾ ಅವರೂ ಪ್ರತಿಕ್ರಿಯಿಸಿ, “ಯಾತ್ರೆಯು ಕಾಶ್ಮೀರವನ್ನು ಪ್ರವೇಶಿಸುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಒಂದು ಸುತ್ತು ಭದ್ರತಾ ಪಡೆಯೇ ಕಣ್ಮರೆಯಾಯಿತು. ನಾನಿದನ್ನು ಕಣ್ಣಾರೆ ನೋಡಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?