ಫೆ.3ರಿಂದ 2ನೇ ಹಂತದ ಪ್ರಜಾಧ್ವನಿ ಯಾತ್ರೆ: ಸಿದ್ದರಾಮಯ್ಯ

ಕಲ್ಯಾಣ, ಕಿತ್ತೂರು ಕರ್ನಾಟಕಕ್ಕೆ ಸಿದ್ದು, ಹಳೆ ಮೈಸೂರಿಗೆ ಡಿಕೆಶಿ ಸಾರಥ್ಯ

Team Udayavani, Jan 29, 2023, 6:25 AM IST

ಫೆ.3ರಿಂದ 2ನೇ ಹಂತದ ಪ್ರಜಾಧ್ವನಿ ಯಾತ್ರೆ: ಸಿದ್ದರಾಮಯ್ಯ

ಯಾದಗಿರಿ: ಬಿಜೆಪಿ ಸರಕಾಕರ್ಮಕಾಂಡ ಹಾಗೂ ಪಾಪದ ಪುರಾಣವನ್ನು ಜನರಿಗೆ ತಿಳಿಸಲು ಫೆ.3ರಿಂದ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆಯನ್ನು ಬಸವ ಕಲ್ಯಾಣದಿಂದ ಆರಂಭಿಸಲಾಗು ವುದು. ನಾನು ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದಲ್ಲಿ ಹಾಗೂ ಡಿ.ಕೆ.ಶಿವಕುಮಾರ ಹಳೆ ಮೈಸೂರು ಭಾಗದಲ್ಲಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ವನಕೇರಿ ಲೇಔಟ್‌ನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರು ಬಿಜೆಪಿ ಸರಕಾರವನ್ನು ಕಿತ್ತೆಸೆದು ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರಲು ನಿರ್ಧರಿಸಿದ್ದಾರೆ. ಪ್ರಜಾಧ್ವನಿಯಲ್ಲಿ ಜನರು ನಿರೀಕ್ಷೆಗೂ ಮೀರಿ ಸ್ಪಂದನೆ ನೀಡಿದ್ದಾರೆ. ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ.

ನಾನು ಸಿಎಂ ಆಗಿದ್ದಾಗ ಪ್ರತಿ ಗ್ರಾಪಂಗೆ 200ರಿಂದ 300ರಂತೆ ಪ್ರತಿವರ್ಷ 3 ಲಕ್ಷ ಮನೆಗಳಂತೆ 15 ಲಕ್ಷ ಮನೆ ನೀಡಿದ್ದೇವೆ. ಬಿಜೆಪಿ ಯವರು ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಮನೆ ಕೊಟ್ಟಿಲ್ಲ. ಇವರ ಮನೆ ಹಾಳಾಗಲಿ ಎಂದು ಶಪಿಸಿದರು.

ಕಲ್ಯಾಣ ಕರ್ನಾಟಕ ಭಾಗ ಜಗತ್ತಿನ ಅತಿದೊಡ್ಡ ತೊಗರಿ ಕಣಜ. ಇಲ್ಲಿ ಒಂದು ಲಕ್ಷ ಹೆಕ್ಟೇರ್‌ ತೊಗರಿ ಹಾಳಾಗಿದೆ. ಈಗ ಕೇವಲ ಎರಡು ಹೆಕ್ಟೇರ್‌ಗೆ ಹತ್ತು ಸಾವಿರ ಪರಿಹಾರ ನೀಡಿದ್ದಾರೆ.

ಇವರು ಅಧಿಕಾರಕ್ಕೆ ಬಂದಾಗ ರೈತರ ಆದಾಯ ಡಬಲ್‌ ಮಾಡುವುದಾಗಿ ಹೇಳಿದ್ದರು. ರೈತರ ಬೆಳೆಗೆ ಬೆಲೆ ಡಬಲ್‌ ಆಗಲಿಲ್ಲ. ರೈತರು ಬಳಸುವ ಗೊಬ್ಬರದ ಬೆಲೆ ಡಬಲ್‌ ಆಗಿದೆ. ರೈತರ ಸಾಲ ಡಬಲ್‌ ಆಗಿದೆ. ಜನರು ದಿನಬಳಕೆಯ ವಸ್ತುಗಳ ಬೆಲೆ ಡಬಲ್‌ ಆಗಿದೆ. ಇದೇನಾ ಅಚ್ಛೇ ದಿನ್‌? ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಮೋದಿ ಹೇಳಿದ್ದರು. ಎಷ್ಟು ಜನರಿಗೆ ಉದ್ಯೋಗ ನೀಡಿದ್ದಾರೆ? ಹದಿನೈದು ಲಕ್ಷ ಕಪ್ಪು ಹಣ ನಿಮ್ಮ ಖಾತೆಗೆ ಹಾಕುವುದಾಗಿ ಹೇಳಿದ್ದರು. 15 ರೂ. ಕೂಡ ಹಾಕಲಿಲ್ಲ. ಇದು ಮೋದಿ ಹೇಳಿದ ಮಹಾ ಸುಳ್ಳು ಎಂದರು.

ಜೆಡಿಎಸ್‌ಗೆ ತತ್ವ ಸಿದ್ಧಾಂತವಿಲ್ಲ
ಜೆಡಿಎಸ್‌ ರಾಜಕೀಯ ಪಕ್ಷವೇ ಅಲ್ಲ. ಅದಕ್ಕೆ ಯಾವುದೇ ತತ್ವ ಸಿದ್ಧಾಂತವಿಲ್ಲ. ಅಧಿ ಕಾರಕ್ಕಾಗಿ ಯಾರ ಜತೆ ಬೇಕಾದರೆ ಹೋಗುತ್ತದೆ. ರಾಜ್ಯದಲ್ಲಿ ಬಿಜೆಪಿ ಬೆಳವಣಿಗೆಗೆ ಜೆಡಿಎಸ್‌ ಕಾರಣ. ಜೆಡಿಎಸ್‌ನ ಕುಮಾರಸ್ವಾಮಿ ಬಿಜೆಪಿಗೆ ಅಧಿ ಕಾರ ಬಿಟ್ಟು ಕೊಡದೆ ಇರುವುದರಿಂದ ಬಿಜೆಪಿ ಬೆಳವಣಿಗೆಗೆ ಕಾರಣರಾಗಿದ್ದಾರೆ ಎಂದರು.

ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್‌, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.

ಪಿಎಸ್‌ಐ ಅಕ್ರಮಕ್ಕೆ ಸರಕಾರದ ಬೆಂಬಲ: ಡಿಕೆಶಿ
ಕಲಬುರಗಿ: ರಾಜ್ಯದಲ್ಲಿ ಹುಯಿಲೆಬ್ಬಿಸಿರುವ ಪಿಎಸ್‌ಐ ಪರೀಕ್ಷಾ ಅಕ್ರಮಕ್ಕೆ ಸರಕಾರದ ಬೆಂಬಲವಿಲ್ಲದೆ ಆರ್‌.ಡಿ.ಪಾಟೀಲ್‌ ಅಂಥವರೆಲ್ಲ ಕಿಂಗ್‌ಪಿನ್‌ಗಳಾಗಲು ಸಾಧ್ಯವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಉನ್ನತ ಅಧಿಕಾರಿಗಳು, ಪರೀಕ್ಷೆ ನಡೆಸು ವವರಿಗೆ ಸರಕಾರ ಬೆಂಬಲ ಅಥವಾ ಆಶೀರ್ವಾದ ನೀಡದೆ ಹೋದರೆ ಒಎಂಆರ್‌ ಶೀಟ್‌ಗಳನ್ನು ತಿದ್ದುವುದು ಹೇಗೆ? ಸಂಪೂರ್ಣ ಬೆಂಬಲದಿಂದಲೇ ಇಷ್ಟು ದೊಡ್ಡ ಭ್ರಷ್ಟಾಚಾರ ನಡೆದಿದೆ. ಇದರಲ್ಲಿ ಇನ್ಯಾರ ಹೆಸರಿದೆ ಎನ್ನುವುದನ್ನು ತನಿಖೆ ಬಳಿಕ ಸರಕಾರ ಜನರ ಮುಂದಿಡಬೇಕಿದೆ. ಆದರೆ ತನಿಖೆ ದಿಕ್ಕು ನೋಡಿದರೆ ಇದಕ್ಕಿಂತ ಹೆಚ್ಚು ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದರು.

 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.