ಕನಿಷ್ಠ ರನ್‌ ಗಳಿಸಿದ್ದ ಕಿವೀಸ್‌: ಭಾರತಕ್ಕೆ ರೋಚಕ ಜಯ


Team Udayavani, Jan 29, 2023, 10:53 PM IST

ಕನಿಷ್ಠ ರನ್‌ ಗಳಿಸಿದ್ದ ಕಿವೀಸ್‌: ಭಾರತಕ್ಕೆ ರೋಚಕ ಜಯ

ಲಕ್ನೋ: ಅತ್ಯಂತ ರೋಚಕವಾಗಿದ್ದ ಪಂದ್ಯದಲ್ಲಿ ಭಾರತ, ಕಿವೀಸ್‌ ವಿರುದ್ಧ ಭರ್ಜರಿಯಾಗಿ 6 ವಿಕೆಟ್‌ಗಳ ಗೆಲುವು ಸಾಧಿಸಿದೆ.

ಅತ್ಯಂತ ಕನಿಷ್ಠ ಮೊತ್ತದ ಪಂದ್ಯವಾಗಿದ್ದರೂ, ಭಾರತ ಗೆಲ್ಲಲು ತಿಣುಕಾಡಿತು ಎಂಬುದು ವಿಚಿತ್ರ. ಈ ಗೆಲುವಿನ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.

ಮೊದಲು ಬ್ಯಾಟ್‌ ಮಾಡಿದ್ದ ನ್ಯೂಜಿಲೆಂಡ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಕೇವಲ 99 ರನ್‌ ಗಳಿಸಿತ್ತು. ಇದನ್ನು ಬೆನ್ನತ್ತಿದ ಭಾರತವೂ 19.5 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 101 ರನ್‌ ಗಳಿಸಿತು. ಸ್ಫೋಟಕ ಆಟಗಾರ ಸೂರ್ಯಕುಮಾರ್‌ ಯಾದವ್‌ ನಿಧಾನಗತಿಯ ಬ್ಯಾಟಿಂಗ್‌ ಪ್ರದರ್ಶಿಸಿ 26 ರನ್‌ ಗಳಿಸಿ ಗೆಲುವಿಗೆ ನೆರವಾದರು.

ಈ ಪಿಚ್‌ ಸ್ಪಿನ್‌ಗೆ ನೆರವಾಗಿದ್ದರಿಂದಲೇ ಉಭಯ ತಂಡಗಳ ಆಟಗಾರರೂ ಬ್ಯಾಟಿಂಗ್‌ ನಡೆಸಲು ಪರದಾಡಿದರು. ಸೂರ್ಯಕುಮಾರ್‌ ಯಾದವ್‌ ಬಿಟ್ಟರೆ ಭಾರತದ ಶುಭ್‌ಮನ್‌ ಗಿಲ್‌ 11, ಕಿಶನ್‌ 19, ರಾಹುಲ್‌ ತ್ರಿಪಾಠಿ 13, ವಾಷಿಂಗ್ಟನ್‌ ಸುಂದರ್‌ 10, ಹಾರ್ದಿಕ್‌ ಪಾಂಡ್ಯ 15 ರನ್‌ ಗಳಿಸಿದರು. ಭಾರತದ ಇಬ್ಬರು ರನ್‌ಔಟ್‌ ಆಗಿದ್ದು ವಿಶೇಷ.

ನ್ಯೂಜಿಲೆಂಡ್‌ 99 ರನ್‌
ಇದಕ್ಕೂ ಮುನ್ನ ಬ್ಯಾಟಿಂಗ್‌ ನಡೆಸಿದ್ದ ನ್ಯೂಜಿಲೆಂಡ್‌ ಇಲ್ಲಿ ಭಾರತದ ಸ್ಪಿನ್‌ ದಾಳಿಗೆ ಸಿಲುಕಿ ಥಂಡಾ ಹೊಡೆಯಿತು. ನೂರರ ಗಡಿ ಕೂಡ ಮರೀಚಿಕೆಯಾಯಿತು.

ಪಿಚ್‌ ತಿರುವು ಪಡೆಯುತ್ತಿದ್ದುದನ್ನು ಗಮನಿಸಿದ ನಾಯಕ ಹಾರ್ದಿಕ್‌ ಪಾಂಡ್ಯ ಪವರ್‌ ಪ್ಲೇಯಲ್ಲೇ ಎರಡೂ ಕಡೆಯಿಂದ ಸ್ಪಿನ್ನರ್‌ಗಳನ್ನು ದಾಳಿಗಿಳಿಸಿದರು. ಇದು ಯಶಸ್ಸು ತಂದಿತ್ತಿತು. ಚಹಲ್‌, ವಾಷಿಂಗ್ಟನ್‌ ಸುಂದರ್‌, ಕುಲದೀಪ್‌ ಯಾದವ್‌, ದೀಪಕ್‌ ಹೂಡಾ ಅವರೆಲ್ಲ ಲಕ್ನೋ ಟ್ರ್ಯಾಕ್‌ನ ಭರಪೂರ ಲಾಭವೆತ್ತಿದರು. ಬಿಗ್‌ ಹಿಟ್ಟರ್‌ಗಳನ್ನು ಹೊಂದಿದ್ದ ನ್ಯೂಜಿಲೆಂಡ್‌ಗೆ ಮುನ್ನುಗ್ಗಿ ಬಾರಿಸಲು ಸಾಧ್ಯವಾಗಲೇ ಇಲ್ಲ.

ಸ್ಟ್ರೈಕ್‌ ಬೌಲರ್‌ಗಳಾದ ಅರ್ಷದೀಪ್‌ ಸಿಂಗ್‌ ಮತ್ತು ಶಿವಂ ಮಾವಿ ಅವರನ್ನು ಡೆತ್‌ ಓವರ್‌ಗಳಲ್ಲಷ್ಟೇ ದಾಳಿಗಿಳಿಸಿದ ಪ್ರಯೋಗವೂ ಯಶಸ್ವಿಯಾಯಿತು. ಮೊದಲ ಪಂದ್ಯದಲ್ಲಿ ಧಾರಾಳ ರನ್‌ ನೀಡಿದ್ದ ಅರ್ಷದೀಪ್‌ ಇಲ್ಲಿ 7 ರನ್ನಿಗೆ 2 ವಿಕೆಟ್‌ ಕಿತ್ತು ಭಾರತದ ಯಶಸ್ವಿ ಬೌಲರ್‌ ಎನಿಸಿದರು.

ಅಜೇಯ 19 ರನ್‌ ಮಾಡಿದ ಮಿಚೆಲ್‌ ಸ್ಯಾಂಟ್ನರ್‌ ಅವರದೇ ನ್ಯೂಜಿಲೆಂಡ್‌ ಸರದಿಯ ಅತ್ಯಧಿಕ ಗಳಿಕೆ. ಮೈಕಲ್‌ ಬ್ರೇಸ್‌ವೆಲ್‌ 14, ಆರಂಭಿಕರಾದ ಫಿನ್‌ ಅಲೆನ್‌ ಮತ್ತು ಡೇವನ್‌ ಕಾನ್ವೇ ತಲಾ 11 ರನ್‌ ಹೊಡೆದರು. ನ್ಯೂಜಿಲ್ಯಾಂಡ್‌ ಸರದಿಯಲ್ಲಿ ಸಿಡಿದದ್ದು 6 ಬೌಂಡರಿ ಮಾತ್ರ.

ಸರಣಿಯ ಆಂತಿಮ ಪಂದ್ಯ ಬುಧವಾರ ಅಹ್ಮದಾಬಾದ್‌ನಲ್ಲಿ ನಡೆಯಲಿದೆ. ಇದು ಫೈನಲ್‌ನಂತಾಗಿದೆ.

ಸಂಕ್ಷಿಪ್ತ ಸ್ಕೋರ್‌
ನ್ಯೂಜಿಲೆಂಡ್‌ – 99/8, 20 ಓವರ್‌. ಸ್ಯಾಂಟ್ನರ್‌ 19, ಚಾಂಪ್‌ಮನ್‌ 14. ಅರ್ಷದೀಪ್‌ 7/2, ಚಹಲ್‌ 4/1. ಭಾರತ – 101/4, 19.5. ಸೂರ್ಯಕುಮಾರ್‌ ಯಾದವ್‌ 26, ಇಶಾನ್‌ 19. ಬ್ರಾಸ್‌ವೆಲ್‌ 13/1, 24/1.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.