ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು
Team Udayavani, Jan 30, 2023, 10:40 AM IST
ಬೆಂಗಳೂರು: ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ.
ಬೆಳಗ್ಗೆ 09.15ರ ವಿಮಾನದಲ್ಲಿ ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಇದಕ್ಕಾಗಿ ಅವರು ನಿನ್ನೆ ರಾತ್ರಿ ದೆಹಲಿಗೆ ಆಗಮಿಸಿದ್ದರು.
ಇದನ್ನೂ ಓದಿ: ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಜೆ ಸಿದ್ದರಾಮಯ್ಯ ಅವರು ಆಗಮಿಸಿದ್ದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಶಾಸಕರಾದ ನಾಗೇಂದ್ರ, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ ಜೊತೆಗಿದ್ದರು.
ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು.
ಶ್ರೀನಗರದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ದೆಹಲಿ, ಶ್ರೀನಗರ ನಡುವಣ ಎಲ್ಲ ವಿಮಾನಗಳ ಹಾರಾಟ ರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ