ಡಿಕೆಶಿ, ಸಿದ್ದರಾಮಯ್ಯ ಮಕ್ಕಳು ಬಿಜೆಪಿಗೆ: ನಳಿನ್‌ ಕುಮಾರ್‌ ಕಟೀಲ್‌


Team Udayavani, Jan 30, 2023, 8:52 PM IST

ಡಿಕೆಶಿ, ಸಿದ್ದರಾಮಯ್ಯ ಮಕ್ಕಳು ಬಿಜೆಪಿಗೆ: ನಳಿನ್‌ ಕುಮಾರ್‌ ಕಟೀಲ್‌

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆದರ್ಶ ಯುವಕರನ್ನು ಸೆಳೆಯುತ್ತಿದ್ದು ಮುಂದಿನ ದಿನದಲ್ಲಿ ಸಿದ್ದರಾಮಯ್ಯ ಅವರ ಮಗ, ಡಿ.ಕೆ.ಶಿವಕುಮಾರ್‌ ಅವರ ಮಕ್ಕಳು, ಖರ್ಗೆ ಅವರ ಮಗ ಬಿಜೆಪಿಗೆ ಬರುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಸೋಮವಾರ ಪಕ್ಷದ ಕಚೇರಿಯಲ್ಲಿ ಮೈಸೂರಿನ ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ವಾಸು ಅವರ ಪುತ್ರ ಕವೀಶ್‌ ಗೌಡ ವಾಸು ಸೇರಿ ಹಳೇ ಮೈಸೂರು ಭಾಗದ ಹಲವು ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಕ್ಷ ಬದಲಾವಣೆ ಕೇವಲ ವಾಸು ಅವರ ಮನೆಯಲ್ಲಿ ಮಾತ್ರವಾಗಿಲ್ಲ. ಕಾಂಗ್ರೆಸ್‌ನ ಇನ್ನಿತರ ನಾಯಕರ ಮನೆಗಳಲ್ಲಿಯೂ ಬದಲಾವಣೆಯ ಗಾಳಿ ಬೀಸುತ್ತಿದೆ.

ಪರಿಣಾಮವಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮತ್ತೆ ಡಬಲ್‌ ಎಂಜಿನ್‌ ಸರ್ಕಾರ ರಚನೆಯಾಗಲಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಬಸ್‌ ಹೋಗುತ್ತ ಹೋಗುತ್ತ ಬ್ರೇಕ್‌ ಫೇಲ್‌ ಆಗಿದೆ. ಜೆಡಿಎಸ್‌ ಪಂಚರತ್ನ ಯಾತ್ರೆ ವಿಜಯಪುರ ತಲುಪುವ ಹೊತ್ತಿಗೆ ಹಾಸನದಲ್ಲಿ ಪಂಕ್ಚರ್‌ ಆಗಿದೆ. ಈ ಎರಡೂ ಯಾತ್ರೆಗಳು ಮುಂದಿನ ಚುನಾವಣೆವರೆಗೆ ಪೂರ್ತಿ ಆಗುವುದಿಲ್ಲ. ಆದರೆ, ಬಿಜೆಪಿ ಸಂಕಲ್ಪ ಯಾತ್ರೆ ವಿಜಯಿ ಯಾತ್ರೆಯಾಗಿ ಪರಿವರ್ತನೆ ಹೊಂದುತ್ತಿದೆ. ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲಿದ್ದೇವೆ ಎಂದು ಹೇಳಿದರು.

ಸಚಿವ ಗೋಪಾಲಯ್ಯ ಮಾತನಾಡಿ, ಮೈಸೂರು, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ರಾಮನಗರ ಭಾಗದಿಂದ ಅನೇಕ ಮುಖಂಡರು ಬಿಜೆಪಿಗೆ ಸೇರಲಿದ್ದಾರೆ. ಬಿಜೆಪಿ ಸೇರಿದವರಿಗೆ ಉಜ್ವಲ ಭವಿಷ್ಯವಿದೆ. ಪಕ್ಷ ಸೇರ್ಪಡೆ ಆದವರು ತಮ್ಮ ಭಾಗದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಪಕ್ಷ ಸೇರ್ಪಡೆ ಆದವರ ಪರವಾಗಿ ಮಾತನಾಡಿದ ಕವೀಶ್‌ ಗೌಡ, ಬಿಜೆಪಿಯ ಸಿದ್ಧಾಂತ, ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿದಾಗ ನಾನು ಬಿಜೆಪಿಯಲ್ಲಿ ಇರಬೇಕಿತ್ತು ಎಂದು ಅನಿಸಿತ್ತು. ಪ್ರಧಾನ ಮಂತ್ರಿಯವರ ಅಮೃತ ಕಾಲ ಪರಿಕಲ್ಪನೆ ಅತ್ಯುತ್ತಮವಾಗಿದೆ. ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದಾಗಿ ಹೇಳಿದರು.

ಜೆಡಿಎಸ್‌ ಮುಖಂಡರಾದ ಸೋಮಶೇಖರ್‌, ಗಿರೀಶ್‌ ನಾಶಿ, ಕಾಂಗ್ರೆಸ್‌ನ ವೆಂಕಟೇಶ್‌, ದಿವಾಕರ್‌ ಗೌಡ, ಸಿ.ವಿ. ರಾಜಪ್ಪ ಹಾಗೂ ಪುಣ್ಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕಿ ಡಾ| ಪುಣ್ಯವತಿ ನಾಗರಾಜ್‌ ಅವರು ಬಿಜೆಪಿ ಸೇರಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.