ನಡೆದಿದ್ದು ದೇಶಕ್ಕಾಗಿ…ಭಾರತ್‌ ಜೋಡೋ ಯಾತ್ರೆ ಸಮಾರೋಪದಲ್ಲಿ ರಾಹುಲ್‌ ಗಾಂಧಿ

ಭಾರೀ ಹಿಮ ಮಳೆಯ ನಡುವೆಯೇ ಜೋಡೋ ಯಾತ್ರೆಗೆ ತೆರೆ

Team Udayavani, Jan 31, 2023, 7:00 AM IST

ನಡೆದಿದ್ದು ದೇಶಕ್ಕಾಗಿ…ಭಾರತ್‌ ಜೋಡೋ ಯಾತ್ರೆ ಸಮಾರೋಪದಲ್ಲಿ ರಾಹುಲ್‌ ಗಾಂಧಿ

ನವದೆಹಲಿ: ನಿರಂತರವಾಗಿ ಸುರಿಯುತ್ತಿದ್ದ ಹಿಮ ಮಳೆ, ನಡುಗಿಸುವ ಚಳಿಯನ್ನೂ ಲೆಕ್ಕಿಸದೇ ಹಲವು ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳ ನಾಯಕರು ಸೋಮವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ತಲುಪಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡರು. ಈ ಮೂಲಕ ಕಣಿವೆಯಲ್ಲಿ ಸೋಮವಾರ ಪ್ರತಿಪಕ್ಷಗಳ ಶಕ್ತಿ ಪ್ರದರ್ಶನದೊಂದಿಗೆ ರಾಹುಲ್‌ ನೇತೃತ್ವದ ಭಾರತ್‌ ಜೋಡೋ ಯಾತ್ರೆ ತೆರೆ ಕಂಡಿತು.

ಶೇರ್‌-ಎ-ಕಾಶ್ಮೀರ್‌ ಸ್ಟೇಡಿಯಂನಲ್ಲಿ ನಡೆದ ಮೆಗಾ ರ‍್ಯಾಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ, ಡಿಎಂಕೆ, ಜೆಎಂಎಂ, ಬಿಎಸ್‌ಪಿ, ಎನ್‌ಸಿ, ಪಿಡಿಪಿ, ಸಿಪಿಐ, ಆರ್‌ಎಸ್‌ಪಿ, ವಿಸಿಕೆ ಮತ್ತು ಐಯುಎಂಎಲ್‌ ನಾಯಕರು ಭಾಗಿಯಾಗಿದ್ದರು.

ಇದಕ್ಕೂ ಮುನ್ನ, ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೋ ಯಾತ್ರೆಯ ಕ್ಯಾಂಪ್‌ ಬಳಿ ಮತ್ತು ಖರ್ಗೆ ಅವರು ಶ್ರೀನಗರದಲ್ಲಿನ ಪಕ್ಷದ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಗ್ರೆನೇಡ್‌ ಬದಲು ಪ್ರೀತಿ ಕೊಟ್ಟರು:
ಬಳಿಕ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದ ಯಾತ್ರೆಯ ಸಮಾರೋಪದಲ್ಲಿ ಭಾವನಾತ್ಮಕ ಭಾಷಣ ಮಾಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, “ನಾನು ಯಾತ್ರೆ ನಡೆಸುವಾಗ, “ನೀವು ದೇಶದ ಎಲ್ಲಾದರೂ ಪಾದಯಾತ್ರೆ ಮಾಡಿ, ಆದರೆ, ಕಾಶ್ಮೀರದಲ್ಲಿ ಮಾತ್ರ ಮಾಡಬೇಡಿ. ಅಲ್ಲಿ ನಿಮ್ಮ ಮೇಲೆ ಗ್ರೆನೇಡ್‌ ದಾಳಿಯಾಗುವ ಸಾಧ್ಯತೆಯಿದೆ’ ಎಂದು ಭದ್ರತಾ ಸಿಬ್ಬಂದಿ ಹೇಳಿದ್ದರು. ಆದರೆ, ನಾನು ಅಂದೇ ಕಾಶ್ಮೀರದಲ್ಲಿ ನಡೆದೇ ತೀರುವುದಾಗಿ ನಿರ್ಧರಿಸಿದೆ. ಜತೆಗೆ, ನನ್ನನ್ನು ಯಾರು ದ್ವೇಷಿಸುತ್ತಾರೋ ಅವರಿಗೆ ನನ್ನ ಬಿಳಿ ಟಿಶರ್ಟ್‌ನ ಬಣ್ಣವನ್ನು ಕೆಂಪಗಾಗಿಸುವ ಅವಕಾಶವೊಂದನ್ನು ಕೊಟ್ಟೇ ಬಿಡೋಣ ಎಂದು ಯೋಚಿಸಿದೆ. ಆದರೆ, ನನಗೆ ಕಾಶ್ಮೀರದ ಜನ ಗ್ರೆನೇಡನ್ನು ನೀಡಲಿಲ್ಲ, ಬದಲಿಗೆ ಪ್ರೀತಿ ಕೊಟ್ಟರು’ ಎಂದು ಹೇಳಿದರು.

ಯಾತ್ರೆಯ ಸಮಾರೋಪದಲ್ಲೂ ರಾಹುಲ್‌ ತಮ್ಮ ಟ್ರೇಡ್‌ಮಾರ್ಕ್‌ ಆಗಿರುವ ಬಿಳಿ ಟಿ-ಶರ್ಟ್‌ ಧರಿಸಿದ್ದರು. ಜತೆಗೆ, ಹಿಮಮಳೆಯ ಹಿನ್ನೆಲೆಯಲ್ಲಿ ತಲೆಗೊಂದು ಕ್ಯಾಪ್‌ ಧರಿಸಿದ್ದರು. “ಇಲ್ಲಿಗೆ ಬರುವಾಗ ನನಗೆ ಮನೆಗೆ ಬಂದಂಥ ಅನುಭವವಾಯಿತು. ನನ್ನ ಪ್ರಕಾರ, ಮನೆಯೆಂದರೆ ಕಟ್ಟಡವಲ್ಲ. ಮನೆಯೆಂದರೆ ಬದುಕಿನ ಮಾರ್ಗ. ನೀವು ಹೇಳುವ ಕಾಶ್ಮೀರಿಯತ್‌ ನನ್ನ ಮನೆ’ ಎಂದು ರಾಹುಲ್‌ ಹೇಳಿದರು. ತಮ್ಮ ತಂದೆ, ಅಜ್ಜಿಯ ಸಾವಿನ ಸುದ್ದಿ ಬಂದಾಗ ಆದ ನೋವನ್ನು ಹೇಳಿಕೊಂಡ ಅವರು, “ಮೋದಿಜೀ, ಅಮಿತ್‌ ಶಾ, ಬಿಜೆಪಿ, ಆರೆಸ್ಸೆಸ್‌ ಹೀಗೆ ಹಿಂಸೆಯನ್ನು ಪ್ರಚೋದಿಸುವವರಿಗೆ ಆ ನೋವು ಅರ್ಥವಾಗುವುದಿಲ್ಲ. ತಮ್ಮವರನ್ನು ಕಳೆದುಕೊಂಡ ನೋವು ಅರ್ಥವಾಗುವುದು ಒಬ್ಬ ಯೋಧನ ಕುಟುಂಬಕ್ಕೆ, ಪುಲ್ವಾಮಾದಲ್ಲಿ ಜೀವ ಕಳೆದುಕೊಂಡ ಸಿಆರ್‌ಪಿಎಫ್ ವೀರರ ಕುಟುಂಬಕ್ಕೆ. ಸಾವಿನ ಸುದ್ದಿಯನ್ನು ಹೊತ್ತು ತರುವ ಫೋನ್‌ ಕರೆಗಳು ಇನ್ನಾದರೂ ಕೊನೆಯಾಗಲಿ’ ಎಂದು ರಾಹುಲ್‌ ಹೇಳಿದರು.

ನನಗಾಗಿಯಲ್ಲ:
ನಾನು ಈ ಯಾತ್ರೆಯನ್ನು ನನಗಾಗಿಯಾಗಲೀ, ಕಾಂಗ್ರೆಸ್‌ಗಾಗಿಯಾಗಲೀ ಮಾಡಿದ್ದಲ್ಲ. ದೇಶದ ಜನರಿಗಾಗಿ ಮಾಡಿದ್ದು. ಈ ದೇಶದ ಅಡಿಪಾಯವನ್ನು ನಾಶ ಮಾಡಲು ಹೊರಟಿರುವ ಸಿದ್ಧಾಂತದ ವಿರುದ್ಧ ನಿಲ್ಲುವುದು, ಉದಾರವಾದ, ಜಾತ್ಯತೀತ ಮೌಲ್ಯಗಳನ್ನು ರಕ್ಷಿಸುವುದೇ ನಮ್ಮ ಉದ್ದೇಶ. ಜಮ್ಮು ಮತ್ತು ಕಾಶ್ಮೀರದಲ್ಲಿ ಈ ರೀತಿ ಯಾವೊಬ್ಬ ಬಿಜೆಪಿ ನಾಯಕನೂ ಪಾದಯಾತ್ರೆ ನಡೆಸಲಾರ. ಏಕೆಂದರೆ, ಇಲ್ಲಿ ನಡೆಯಲು ಅವರು ಹೆದರುತ್ತಾರೆ ಎಂದೂ ರಾಹುಲ್‌ ಹೇಳಿದರು.

ಪ್ರತಿಪಕ್ಷ ನಾಯಕರ ಕರೆ:
ದೇಶದ ಎಲ್ಲ ಜಾತ್ಯತೀತ ಪಕ್ಷಗಳು ಒಗ್ಗಟ್ಟಾಗಬೇಕು ಎಂದು ಸಿಪಿಐ ನಾಯಕ ಡಿ. ರಾಜಾ ಕರೆ ನೀಡಿದರೆ, ರಾಹುಲ್‌ ಅವರು ಪಶ್ಚಿಮದಿಂದ ಪೂರ್ವಕ್ಕೆ ಮತ್ತೂಂದು ಯಾತ್ರೆ ಕೈಗೊಳ್ಳಬೇಕು ಮತ್ತು ನಾನೂ ಅವರೊಂದಿಗೆ ಹೆಜ್ಜೆಹಾಕಬೇಕು ಎಂದು ಎನ್‌ಸಿ ನಾಯಕ ಫಾರೂಕ್‌ ಅಬ್ದುಲ್ಲಾ ಇಚ್ಛೆ ವ್ಯಕ್ತಪಡಿಸಿದರು. ಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ಹಿಮ ಮಳೆ ಸುರಿಯುತ್ತಿದ್ದ ಕಾರಣ ಎಲ್ಲ ಹೆದ್ದಾರಿಗಳೂ ಬಂದ್‌ ಆಗಿದ್ದವು, ವಿಮಾನಗಳ ಸಂಚಾರವೂ ಅಸ್ತವ್ಯಸ್ತವಾಗಿತ್ತು. ಹೀಗಾಗಿ, ರ‍್ಯಾಲಿ ಗೂ ಅಡ್ಡಿ ಉಂಟಾಯಿತು. ಹೀಗಿದ್ದರೂ 12ಕ್ಕೂ ಹೆಚ್ಚು ಪಕ್ಷಗಳ ನಾಯಕರು ಹರಸಾಹಸಪಟ್ಟು ರ‍್ಯಾಲಿ ಸ್ಥಳ ತಲುಪಿದರು.

ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆಯು ಚುನಾವಣೆ ಗೆಲ್ಲುವುದಕ್ಕಾಗಿ ನಡೆದಿದ್ದಲ್ಲ. ಬದಲಿಗೆ ದೇಶದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್‌ ಹಬ್ಬುತ್ತಿರುವ ದ್ವೇಷವನ್ನು ಎದುರಿಸುವುದಕ್ಕಾಗಿ ನಡೆದಿದ್ದು.
– ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

ರಾಹುಲ್‌-ಪ್ರಿಯಾಂಕಾ ವಿಡಿಯೋ ವೈರಲ್‌
ಜೋಡೋ ಯಾತ್ರೆ ಪೂರ್ಣಗೊಳಿಸಿದ ರಾಹುಲ್‌ ಗಾಂಧಿ, ಸಹೋದರಿ ಪ್ರಿಯಾಂಕಾ ವಾದ್ರಾ ಅವರ ಜತೆಗೆ ಕಾಶ್ಮೀರದಲ್ಲಿ ಮಂಜಿನ ನಡುವೆ ತುಂಟಾಟವಾಡಿರುವ ವಿಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದೆ. ಬಾಲ್ಯದಲ್ಲಿ ತಂಗಿ ಜತೆಗೆ ಆಟವಾಡುತ್ತಿದ್ದಂತೆಯೇ, ಈಗಲೂ ಒಬ್ಬರಿಗೊಬ್ಬರು ಮಂಜಿನ ಗಡ್ಡೆಗಳನ್ನು ಎಸೆಯುತ್ತಾ, ಛೇಡಿಸುತ್ತಾ, ಒಬ್ಬರನ್ನೊಬ್ಬರು ತಬ್ಬಿಕೊಂಡು ಸುಂದರವಾದ ಸಹೋದರತ್ವದ ಬಾಂಧವ್ಯವನ್ನು ಸವಿದಿದ್ದಾರೆ. ಈ ವಿಡಿಯೋವನ್ನು ರಾಹುಲ್‌ ಅಭಿಮಾನಿಗಳು ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿಡಿಯೋ ವೈರಲ್‌ ಆಗಿದೆ.

 

ಟಾಪ್ ನ್ಯೂಸ್

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.