ಬಿಜೆಪಿ ಜೊತೆಗೆ ಮೈತ್ರಿಗಿಂತ ಸಾಯುವುದು ಲೇಸು: ನಿತೀಶ್ ಕುಮಾರ್
Team Udayavani, Jan 30, 2023, 9:55 PM IST
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದಿದ್ದ ಬಿಜೆಪಿಗೆ, ಸಿಎಂ ನಿತೀಶ್ ಕುಮಾರ್ ಸೋಮವಾರ ತಿರುಗೇಟು ನೀಡಿದ್ದಾರೆ.
ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕಿಂತ ಸಾಯುವುದೇ ಉತ್ತಮವೆಂದು ಹೇಳಿದ್ದಾರೆ. ಕಳೆದ ಬಾರಿ ಬಿಜೆಪಿ ಜತೆಗಿನ ಮೈತ್ರಿ ತೊರೆದು, ಆರ್ಜೆಡಿ ಹಾಗೂ ಕಾಂಗ್ರೆಸ್ ಜತೆಗೆ ಕೈ ಜೋಡಿಸುವ ಮೂಲಕ ನಿತೀಶ್ ಬಿಜೆಪಿಗೆ ದ್ರೋಹವೆಸಗಿದ್ದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಂಥ ಮೋಸದ ಜಾಲಕ್ಕೆ ಸಿಲುಕುವುದಿಲ್ಲ ಎಂದು ಬಿಜೆಪಿ ಘಟಕದ ಮುಖ್ಯಸ್ಥ ಸಂಜಯ್ ಜೈಸ್ವಾಲ್ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ನಿತೀಶ್, ನನ್ನ ಬೆಂಬಲಿಗರ ಮತವನ್ನು ಪಡೆಯಲು ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು ಅಷ್ಟೇ. ನಾನು ಸಾಯುತ್ತೇನೆ ಹೊರತು, ಮತ್ತೆ ಆ ಪಕ್ಷದ ಜತೆಗೆ ಕೈ ಜೋಡಿಸುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ