ಅಡ್ಡೂರು ಸೇತುವೆ ತಳದಲ್ಲೇ ಮರಳುಗಾರಿಕೆ: ಸಕ್ರಮವಾಗಿದ್ದರೂ ಸೇತುವೆಗೆ ಅಪಾಯದ ಭೀತಿ


Team Udayavani, Jan 31, 2023, 6:35 AM IST

ಅಡ್ಡೂರು ಸೇತುವೆ ತಳದಲ್ಲೇ ಮರಳುಗಾರಿಕೆ: ಸಕ್ರಮವಾಗಿದ್ದರೂ ಸೇತುವೆಗೆ ಅಪಾಯದ ಭೀತಿ

ಬಂಟ್ವಾಳ: ಸೇತುವೆಗಳು ದುರ್ಬಲವಾಗಿ ಕುಸಿಯುವ ಭೀತಿಯ ಹಿನ್ನೆಲೆಯಲ್ಲಿ ಸರಕಾರವು ಸೇತುವೆಗಳ ತಳಭಾಗದಲ್ಲಿ ಮರಳುಗಾರಿಕೆಗೆ ನಿಷೇಧ ಹೇರಿದೆ.ಆದರೆ ಮಂಗಳೂರು ಹಾಗೂ ಬಂಟ್ವಾಳ ತಾಲೂಕನ್ನು ಸಂಪರ್ಕಿಸುವ ಪೊಳಲಿ ಸಮೀಪದ ಅಡ್ಡೂರು ಸೇತುವೆಯ ತಳ ಭಾಗದಲ್ಲೇ ಅವ್ಯಾಹತವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಫಲ್ಗುಣಿ ನದಿಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸೇರಿದ ಪ್ರದೇಶ ದಲ್ಲಿ ಮರಳುಗಾರಿಕೆ ನಡೆಯುತ್ತಿದ್ದು, ಇದು ಸಕ್ರಮವೇ ಆದರೂ ಸೇತುವೆಯ ತಳ ಭಾಗದ ಜತೆಗೆ ನಿರ್ದಿಷ್ಟವಾಗಿ ಅದರ ಸುತ್ತಮುತ್ತಲ ಪ್ರದೇಶದಲ್ಲಿ ಅವಕಾಶವಿಲ್ಲ ಎಂದು ಈ ಹಿಂದೆಯೇ ಸರಕಾರ ಸ್ಪಷ್ಟವಾಗಿ ಹೇಳಿತ್ತು.

ಸೇತುವೆಯ ತಳದಲ್ಲಿ ಮರಳು ಗಾರಿಕೆ ನಡೆಸಿದರೆ ಬೃಹತ್‌ ಹೊಂಡ ಗಳು ಸೃಷ್ಟಿಯಾಗಿ ಸ್ತಂಭಗಳು ದುರ್ಬಲಗೊಂಡು ಕುಸಿಯುವ ಅಥವಾ ಬಿರುಕು ಬಿಡುವ ಸಾಧ್ಯತೆ ಹೆಚ್ಚಿರುತ್ತದೆ.

ಜಿಲ್ಲಾಡಳಿತದ ಗಮನ ಅಗತ್ಯ
ಅಡ್ಡೂರು ಸೇತುವೆಯ ಪಕ್ಕದಲ್ಲಿ ಉತ್ತರ ಭಾರತ‌ದ ಕಾರ್ಮಿಕರನ್ನು ಒಳಗೊಂಡ ತಂಡಗಳು ಮರಳುಗಾರಿಕೆ ನಿರತವಾಗಿದ್ದು, ಕಾರ್ಮಿಕರು ನದಿಯ ಮಧ್ಯಕ್ಕೆ ತೆರಳಿ ಸಾಂಪ್ರದಾಯಿಕ ಶೈಲಿಯಲ್ಲಿ ಮುಳುಗಿ ಮರಳನ್ನು ದೋಣಿಯಲ್ಲಿ ತುಂಬಿಕೊಂಡು ಬರುತ್ತಿದ್ದಾರೆ. ಒಂದಷ್ಟು ದೋಣಿಗಳು ಸೇತುವೆಯಿಂದ ಕೊಂಚ ದೂರದಲ್ಲಿ ಮರಳುಗಾರಿಕೆ ನಡೆಸಿದರೆ ಕೆಲವು ಸೇತುವೆಯ ತಳಭಾಗದಲ್ಲೇ ನಿಂತಿರುತ್ತವೆ. ಇದು ಸಕ್ರಮ ಮರಳುಗಾರಿಕೆಯೇ ಆಗಿದ್ದರೂ ಸೇತುವೆಯ ತಳಭಾಗ ಹಾಗೂ ಒಂದಷ್ಟು ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕಿದೆ.

ಅಕ್ರಮ ಆರೋಪ
ಈ ಹಿಂದೆ ದ.ಕ.ದಲ್ಲಿ 2 ಸೇತುವೆಗಳು ಅಪಾಯಕ್ಕೆ ಸಿಲುಕಿದ ಸಂದರ್ಭದಲ್ಲೂ ಅಕ್ರಮ ಮರಳುಗಾರಿಕೆಯ ಆರೋಪ ಕೇಳಿಬಂದಿತ್ತು. 2018ರ ಜೂನ್‌ನಲ್ಲಿ ಮೂಲರಪಟ್ಣ ಸೇತುವೆ ಕುಸಿದಾಗ ಮರುಗಾರಿಕೆಯೇ ಕಾರಣ ಎಂದು ಕೆಲವರು ಆರೋಪಿಸಿದ್ದರು. 2021ರ ಜೂನ್‌ನಲ್ಲಿ ಮರವೂರು ಸೇತುವೆ ಬಿರುಕು ಬಿಟ್ಟಾಗಲೂ ಮರಳು ಗಾರಿಕೆಯ ಆರೋಪ ಕೇಳಿಬಂದಿತ್ತು.
ಆದರೆ ಈ ಎರಡು ಸೇತುವೆಗಳು ಅದೇ ಕಾರಣಕ್ಕೆ ಅಪಾಯಕ್ಕೆ ಸಿಲುಕಿವೆ ಎಂದು ಸ್ಪಷ್ಟವಾಗಿ ಹೇಳುವುದು ಅಸಾಧ್ಯವಾದರೂ ಆ ಕಾರಣವನ್ನೂ ಅಳಗಳೆಯುವಂತಿಲ್ಲ ಎನ್ನಲಾಗುತ್ತಿದೆ.

ಅಡ್ಡೂರು ಸೇತುವೆಯ ತಳಭಾಗದಲ್ಲೇ ಮರಳು ಗಾರಿಕೆ ನಡೆಯುತ್ತಿದೆಯೇ ಎಂಬ ಕುರಿತು ಪರಿಶೀಲಿೆಸಿ ಕ್ರಮ ಕೈಗೊಳ್ಳಲಾಗುವುದು.
– ರವಿಕುಮಾರ್‌ ಎಂ.ಆರ್‌. ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.