ಸಿದ್ದುಗೆ ಕೋಲಾರಕ್ಕಿಂತ ವರುಣಾ ಕ್ಷೇತ್ರವೇ ಸೇಫ್: ಕೆ.ಎನ್.ರಾಜಣ್ಣ
Team Udayavani, Jan 31, 2023, 9:21 PM IST
ತುಮಕೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡುವುದಕ್ಕಿಂತ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವೇ ಸೇಫೆಸ್ಟ್ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿ, ಹಾಲಿ ಶಾಸಕ ಯತೀಂದ್ರ ಅವರಿಗೆ ಬೇರೆ ಅವಕಾಶ ಕಲ್ಪಿಸಬಹುದು. ವರುಣಾನೇ ಎಲ್ಲದಕ್ಕಿಂತ ಸುರಕ್ಷಿತ ಕ್ಷೇತ್ರ ಅನ್ನೋದು ನನ್ನ ಭಾವನೆ. ಸುರಕ್ಷಿತ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.
ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಸೋಲಿಸಿದ್ದರು ಎಂದು ಕೋಲಾರದಲ್ಲಿ ಕರಪತ್ರ ಹಂಚುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಕಾಂಗ್ರೆಸ್ನ ಯಾವ ಅಭ್ಯರ್ಥಿಗೂ ವಿರೋಧ ಮಾಡಿಲ್ಲ ಎಂದು ನುಡಿದರು.
ಸಿದ್ದರಾಮಯ್ಯ ಕೋಲಾರ ಮತ್ತು ವರುಣಾ ಎರಡೂ ಕ್ಷೇತ್ರ ಬಿಟ್ಟು ಮಧುಗಿರಿಗೆ ಬರಲಿ, ಮಧುಗಿರಿ ಜನತೆ ಅವರನ್ನು ಖಂಡಿತವಾಗಿಯೂ ಗೆಲ್ಲಿಸುತ್ತಾರೆ. ತಮ್ಮ ಸ್ವಕ್ಷೇತ್ರ ಬಿಟ್ಟು ಕೊಡಲೂ ನಾನು ಸಿದ್ಧ ಎಂದು ರಾಜಣ್ಣ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ