ನಿರ್ಮಲಾರತ್ತ ಮಧ್ಯಮ ವರ್ಗದ ನಿರೀಕ್ಷೆಯ ನೋಟ


Team Udayavani, Feb 1, 2023, 6:00 AM IST

ನಿರ್ಮಲಾರತ್ತ ಮಧ್ಯಮ ವರ್ಗದ ನಿರೀಕ್ಷೆಯ ನೋಟ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2023-24ನೇ ಸಾಲಿನ ಕೇಂದ್ರ ಮುಂಗಡಪತ್ರವನ್ನು ಇಂದು (ಬುಧವಾರ) ಮಂಡಿಸಲಿದ್ದಾರೆ. ಈ ಬಜೆಟ್‌ನ ಬಗೆಗೆ ದೇಶದ ಜನತೆ ಅದರಲ್ಲೂ ಮಧ್ಯಮ ವರ್ಗದ ಜನರು ಭಾರೀ ನಿರೀಕ್ಷೆಯನ್ನಿರಿಸಿಕೊಂಡಿದ್ದಾರೆ. ಈ ಬಾರಿಯ ಆಯವ್ಯಯ ಸಚಿವರ ಪಾಲಿಗೆ ಒಂದರ್ಥದಲ್ಲಿ ಹಗ್ಗದ ಮೇಲಣ ನಡಿಗೆಯೇ ಸರಿ. ಜಾಗತಿಕ ಆರ್ಥಿಕ ಪರಿಸ್ಥಿತಿ ಯನ್ನು ಅವಲೋಕಿಸಿದಾಗ ದೇಶದ ಆರ್ಥಿಕತೆ ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ ಯಷ್ಟೇ ಅಲ್ಲದೆ ಮುಂಚೂಣಿಯಲ್ಲಿದೆ. ಆದರೆ ಜಾಗತಿಕ ಮಟ್ಟದಲ್ಲಿ ನಡೆಯುತ್ತಿ ರುವ ಕ್ಷಿಪ್ರ ಬೆಳವಣಿಗೆಗಳ ಪರೋಕ್ಷ ಪರಿಣಾಮ ಭಾರತದ ಮೇಲೆ ಬೀಳುತ್ತಿರುವು ದರಿಂದಾಗಿ ಎಚ್ಚರಿಕೆಯ ಹೆಜ್ಜೆಯನ್ನಿಡುವುದು ಅನಿವಾರ್ಯವಾಗಿದೆ. ಈ ನಡುವೆ ಪ್ರಸಕ್ತ ವರ್ಷ ದೇಶದ 9 ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದ್ದರೆ ಮುಂದಿನ ವರ್ಷ ಲೋಕಸಭೆ ಚುನಾವಣೆಯೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜನಪ್ರಿಯತೆಯಿಂದ ದೂರಸರಿಯದೆ ಸಮತೋಲನದ ಬಜೆಟ್‌ ಮಂಡನೆಯ ಗುರುತರ ಸವಾಲು ಸಚಿವೆ ನಿರ್ಮಲಾರ ಹೆಗಲ ಮೇಲೇರಿದೆ.

ಕೊರೊನಾ ಬಳಿಕ ದೇಶದ ಮಧ್ಯಮ ವರ್ಗದ ಜನರ ಮೇಲೆ ಭಾರೀ ಹೊರೆ ಬಿದ್ದಿದೆ. ಆರೋಗ್ಯ ಸಮಸ್ಯೆ, ಆದಾಯ ಕೊರತೆ, ಉದ್ಯೋಗ ನಷ್ಟ, ಬೆಲೆ ಏರಿಕೆ ಇವೆಲ್ಲದರ ನೇರ ಪರಿಣಾಮ ಮಧ್ಯಮ ವರ್ಗದವರ ಮೇಲೆ ಬಿದ್ದಿದೆ. ಇನ್ನು ಭಾರ ತೀಯ ರಿಸರ್ವ್‌ ಬ್ಯಾಂಕ್‌ ಆರ್ಥಿಕ ಸಂಕಷ್ಟದಿಂದ ಪಾರಾಗಲು ಅನುಸರಿಸಿದ ಕಟ್ಟುನಿಟ್ಟಿನ ಕ್ರಮಗಳ ಪರೋಕ್ಷ ಪರಿಣಾಮವನ್ನೂ ಮಧ್ಯಮ ವರ್ಗದ ಜನರು ಎದುರಿಸುವಂತಾಗಿದೆ. ಜಾಗತಿಕ ಮಟ್ಟದಲ್ಲಿನ ಆರ್ಥಿಕ ಸ್ಥಿತಿಗತಿಗೆ ಹೋಲಿಸಿದರೆ ದೇಶದ ಆರ್ಥಿಕ ಬೆಳವಣಿಗೆ ಸಕಾರಾತ್ಮಕವಾಗಿರುವುದು, ದೇಶ ಪ್ರತಿಯೊಂದೂ ಕ್ಷೇತ್ರದಲ್ಲಿಯೂ ಸ್ವಾವಲಂಬನೆಯ ಹಾದಿ ಹಿಡಿದಿರುವುದು, ಮೂಲ ಸೌಕರ್ಯ ಗಳ ಅಭಿವೃದ್ಧಿ, ತೆರಿಗೆ ಸಂಗ್ರಹ… ಹೀಗೆ ಪ್ರತೀಯೊಂದರಲ್ಲೂ ಆಶಾದಾಯಕ ಬೆಳ ವಣಿಗೆಯನ್ನು ಕಂಡಿರುವ ಹೊರತಾಗಿಯೂ ಬಡ-ಮಧ್ಯಮ ವರ್ಗದ ಜನತೆಯ ಪರಿಸ್ಥಿತಿ ಮಾತ್ರ ನಾಲಗೆಯ ಮೇಲಿನ ಬಿಸಿತುಪ್ಪದಂತಾಗಿರುವುದು ಸುಳ್ಳಲ್ಲ.

ಮೂಲಸೌಕರ್ಯಗಳ ವೃದ್ಧಿಯಲ್ಲಿ ನಿರಂತರತೆ ಕಾಯ್ದುಕೊಳ್ಳುವ ಜತೆಯಲ್ಲಿ ಉದ್ಯೋಗಾವಕಾಶಗಳ ಸೃಷ್ಟಿ, ಆಹಾರ ಕ್ಷೇತ್ರದಲ್ಲಿ ಸ್ವಾವಲಂಬನೆ, ಸಮಾಜದ ಪ್ರತೀಯೊಂದೂ ವರ್ಗದ ಆದಾಯ ಹೆಚ್ಚಳ, ಹಣದುಬ್ಬರ ನಿಯಂತ್ರಣ, ವಿತ್ತೀಯ ಕೊರತೆಯ ನಿಯಂತ್ರಣ, ನರೇಗಾದ ಕಾರ್ಯವ್ಯಾಪ್ತಿ ಹೆಚ್ಚಳ, ಕೈಗಾರಿಕೆಗಳು ಮತ್ತು ಕೃಷಿ ರಂಗಕ್ಕೆ ಮತ್ತಷ್ಟು ಉತ್ತೇಜನ ಇವೇ ಮೊದಲಾದ ಪ್ರೋತ್ಸಾಹಕ ಕ್ರಮಗಳು ಬಜೆಟ್‌ನಲ್ಲಿ ಘೋಷಣೆಯಾಗಲಿವೆ ಎಂಬ ವಿಶ್ವಾಸ ಈ ಕ್ಷೇತ್ರಗಳದ್ದಾಗಿದೆ.

ಇನ್ನು ಮಧ್ಯಮ ವರ್ಗದ ಜನರು ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ, ವಿವಿಧ ಖರ್ಚು ಮತ್ತು ಹೂಡಿಕೆಗಳ ಮೇಲೆ ಆದಾಯ ತೆರಿಗೆಯ 80 ಸಿ ಅಡಿಯಲ್ಲಿರುವ ವಿನಾಯಿತಿ ಮೊತ್ತದ ಏರಿಕೆ, 80 ಡಿಡಿ ಸೆಕ್ಷನ್‌ನಡಿಯಲ್ಲಿ ನೀಡಲಾಗುವ ವಿನಾಯಿತಿಗೆ ವೈದ್ಯರ ಭೇಟಿ ಮತ್ತು ಪ್ರಯೋಗ ಪರೀಕ್ಷೆ ಶುಲ್ಕಗಳ ಸೇರ್ಪಡೆ, ಗೃಹ ಸಾಲದ ಬಡ್ಡಿ ವಿನಾಯಿತಿ ಮೊತ್ತದಲ್ಲಿ ಏರಿಕೆ ಮತ್ತು ಸ್ಟಾಂಡರ್ಡ್‌ ಡಿಡಕ್ಷನ್‌ ಮಿತಿಯಲ್ಲಿ ಹೆಚ್ಚಳವಾದೀತು ಎಂಬ ನಿರೀಕ್ಷೆಯಲ್ಲಿದ್ದಾರೆ.

ಆಂತರಿಕ ಮತ್ತು ಜಾಗತಿಕ ಸವಾಲುಗಳ ನಡುವೆ ಜನಪ್ರಿಯತೆಗೂ ಮಣೆ ಹಾಕುವುದರ ಜತೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಮಧ್ಯಮ ವರ್ಗದ ರಕ್ಷಣೆಗೆ ಸರಕಾರ ಮುಂದಾಗಲೇಬೇಕು. ಈ ಅಗ್ನಿ ಪರೀಕ್ಷೆಯನ್ನು ಕೇಂದ್ರ ಸರಕಾರ ಎಷ್ಟು ಸಮರ್ಥವಾಗಿ ಎದುರಿಸಲಿದೆ ಎಂಬುದೇ ಸದ್ಯದ ಕುತೂಹಲ.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.