ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್


Team Udayavani, Feb 1, 2023, 12:25 PM IST

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಧಾರವಾಡ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆ ಮಾಡುತ್ತಿದ್ದು ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟಿರುವುದು ವಿಶೇಷ.

ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳಾಮಣಿಗಳು ಅನ್ನುವುದು ಇನ್ನೂ ವಿಶೇಷ.

ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ ಪ್ರಲ್ಹಾದ ಜೋಶಿ ಅವರು ನವಲಗುಂದ ಕಸೂತಿ ಕಲೆ ಬಗ್ಗೆ, ಸಾಂಸ್ಕೃತಿಕ ಶ್ರೀಮಂತಿಕೆ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾರ್ಯಕ್ರಮ ಒಂದರಲ್ಲಿ ವಿವರಿಸಿ, ಈ ಸೀರೆಗಳನ್ನು ಜಿಲ್ಲೆಯ ಉಡುಗೊರೆಯಾಗಿ ನೀಡಿದ್ದಾರೆ.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಸೈಯದ್ ನಯೀಮ್ ಅಹ್ಮದ ಮೂಲಕ ಕಸೂತಿ ಪರಿಣಿತರನ್ನು ಗುರುತಿಸಿ, ಕಸೂತಿ ಸೀರೆ ತಯಾರಿಗೆ ಸೂಚಿಸಿದ್ದರು.

ಆರತಿ ಕ್ರಾಪ್ಟ್ಸ್:  ಆರತಿ ಕ್ರಾಪ್ಟ್ಸ್ ಮಾಲೀಕರಾದ ಆರತಿ ಹಿರೇಮಠ ಅವರು ಸಂತಸದಿಂದ ಕಸೂತಿ ಕಾರ್ಯ ಆರಂಭಿಸಿದ್ದರು. ಕಳೆದ 32 ವರ್ಷಗಳಿಂದ ಕಸೂತಿ ಕ್ಷೇತ್ರದಲ್ಲಿ ತೊಡಗಿ ಕೊಂಡಿರುವ ಆರತಿ ಅವರು, ಸುಮಾರು 210 ಮಂದಿ ಮಹಿಳೆಯರ ತಂಡ ಕಟ್ಟಿ, ಅವರಿಗೆ ಅಗತ್ಯವಿರುವ ಕಸೂತಿ ತರಬೇತಿ ನೀಡಿ, ಸ್ವಯಂ ಉದ್ಯೋಗ ನೀಡಿದ್ದಾರೆ.

ಗ್ರಾಹಕರಿಂದ ಕಸೂತಿ ಸಾರಿ, ಶಲ್ಯೆ, ಉಡುಗೆಗಳ ಬೇಡಿಕೆ ಪಡೆಯುವ ಆರತಿ ಹಿರೇಮಠ ಅವರು ಕಸೂತಿ ಮಾಡುವ ತಮ್ಮ ಮಹಿಳಾ ಸಿಬ್ಬಂದಿ ಮನೆಗೆ ತೆರಳಿ, ಪರಿಕರ ಪೂರೈಸುತ್ತಾರೆ ಮತ್ತು ಸಿದ್ದವಾದ ವಸ್ತುಗಳನ್ನು ತಾವೇ ಕಲೆಕ್ಟ್ ಮಾಡುತ್ತಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರ ಆಸಕ್ತಿಯ ಬೇಡಿಕೆಯಂತೆ ಸೀರೆಗಳನ್ನು ಕಳುಹಿಸಲಾಗಿದ್ದು, ಅದರಲ್ಲಿ ಇಂದು ಅವರು ತೊಟ್ಟಿರುವ ಕೆಂಪು (ಮರೂನ್) ಬಣ್ಣದ ಸೀರೆಯು ಸೇರಿದೆ.

ಸೀರೆ ವಿಶೇಷತೆ: ಕೈಮಗ್ಗದಲ್ಲಿ ನೇಯ್ದ ಇಳಕಲ್ಲ ರೇಷ್ಮೆ ಸೀರೆಗಳಿಗೆ ಸಾಂಪ್ರದಾಯಿಕ ಧಾರವಾಡ ಕಸೂತಿ ಹಾಕಲಾಗಿದೆ. ಐದೂವರೆ ಮೀಟರ್ ಉದ್ದದ ಇಳಕಲ್ಲ ಸೀರೆಗೆ ಚಿಕ್ಕಪರಾಸ್ ದಡಿಯಿದ್ದು, ತೇರು, ಗೋಪುರ, ನವಿಲು, ಕಮಲದ ಚಿತ್ರಗಳ ಕಸೂತಿ ಹಾಕಲಾಗಿದೆ.

ಕೈಮಗ್ಗ ಉದ್ಯಮಕ್ಕೆ ಪ್ರೋತ್ಸಾಹಿಸುವ ಮತ್ತು ಸ್ವಯಂ ಉದ್ಯೋಗನಿರತ ಮಹಿಳೆಯರನ್ನು ಬೆನ್ನು ತಟ್ಟುವ ಕೇಂದ್ರ ಸಚಿವರ ಈ ಕ್ರಮ ನಮಗೆ ಸಂತಸ ಮತ್ತು ಹೆಮ್ಮೆ ಮೂಡಿಸಿದೆ.

ಕೇಂದ್ರ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಇಡೀ ದೇಶ, ಜಗತ್ತು ಅವರತ್ತ ದೃಷ್ಟಿ ನೆಟ್ಟಿರುತ್ತದೆ, ಅವರು ನಮ್ಮೂರಿನ ಸೀರೆಯಲ್ಲಿ ಬಲಿಷ್ಠ ಭಾರತ ದೇಶದ ಬಜೆಟ್ ಮಂಡಿಸುತ್ತಿರುವುದು ನಮ್ಮ ಜಿಲ್ಲೆ, ರಾಜ್ಯಕ್ಕೆ ಹೆಮ್ಮೆ ಮೂಡಿಸಿದೆ. ಮತ್ತು ಕಸೂತಿ ಅಂತಹ ಗ್ರಾಮೀಣ ಕಲೆಗಳಿಗೆ, ಮಹಿಳೆಯರಿಗೆ ಈ ಮೂಲಕ ಬೆಂಬಲಿಸಿ, ಪ್ರೋತ್ಸಾಹ ನೀಡುತ್ತಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಸೂತಿ ಕಲೆ ತಜ್ಞೆ ಆರತಿ ಹಿರೇಮಠ ಕೃತಜ್ಞತೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.