ಅಭಿವೃದ್ಧಿಗೆ ಡಿಜಿಟಲ್ ಸ್ಪರ್ಶ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 3ಎಐ ಕೇಂದ್ರ ಸ್ಥಾಪನೆ
ವಿವಿಧ ಕ್ಷೇತ್ರಗಳ ಸಮಸ್ಯೆ ಪರಿಹಾರಕ್ಕೆ ಪೂರಕ; ಬೆಳೆ ಅಂದಾಜು ಪ್ರಕ್ರಿಯೆಗೆ ಕೃತಕ ಬುದ್ಧಿಮತ್ತೆ
Team Udayavani, Feb 2, 2023, 6:30 AM IST
ಕೃತಕ ಬುದ್ಧಿಮತ್ತೆ (ಎಐ)ಯಿಂದ ಹಿಡಿದು, ರಾಷ್ಟ್ರೀಯ ದತ್ತಾಂಶ ನೀತಿ ಆಡಳಿತದವರೆಗೆ ವಿವಿಧ ಪ್ರಸ್ತಾವಿತ ಕ್ರಮಗಳ ಮೂಲಕ ಸರ್ಕಾರ ಡಿಜಿಟಲ್ ಇಂಡಿಯಾ ಸಾಧನೆಗೆ ಒತ್ತು ನೀಡಿದೆ.”ಕೃತಕ ಬುದ್ಧಿಮತ್ತೆ (ಎಐ)ಭಾರತದಲ್ಲೇ ಅಭಿವೃದ್ಧಿಯಾಗಲಿ, ಭಾರತಕ್ಕಾಗಿಯೇ ಕಾರ್ಯನಿರ್ವಹಿಸಲಿ’ ಎನ್ನುವ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಲ್ಲಿ 3 ಕೃತಕ ಬುದ್ಧಿಮತ್ತ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಘೋಷಿಸಲಾಗಿದೆ.
ಕೃಷಿ, ಆರೋಗ್ಯ ಕ್ಷೇತ್ರ ಹಾಗೂ ನಗರದ ಪ್ರದೇಶಗಳಲ್ಲಿನ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಅನ್ವೇಷಿಸಲು ಕೃತಕ ಬುದ್ಧಿಮತ್ತೆಯನ್ನು ಬಳಕೆಮಾಡಲು ಉದ್ದೇಶಿಸಲಾಗಿದೆ.ಜತೆಗೆ ಕೇಂದ್ರದ ಸ್ಥಾಪನೆಯಿಂದ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸಬಲ್ಲ ಎಐ ಅಭಿವೃದ್ಧಿಗೆ ಉತ್ತೇಜನ ನೀಡುವುದಲ್ಲದೇ, ಸಂಶೋಧನಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಉದ್ಯಮ ಸಂಸ್ಥೆಗಳು ಕೈ ಜೋಡಿಸಲಿವೆ. ಈ ಮೂಲಕ ಉದ್ಯೋಗ ಸೃಷ್ಟಿಗೂ ಈ ಕ್ರಮ ಸಹಕಾರಿಯಾಗಲಿದೆ.
ಇದಲ್ಲದೇ, ನವೋದ್ಯಮ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿನ ಸಂಶೋಧನೆಗಳನ್ನು ಸರಾಗಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ದತ್ತಾಂಶ ಆಡಳಿತ ನೀತಿಯನ್ನು ಜಾರಿಗೊಳಿಸುವುದಾಗಿ ತಿಳಿಸಲಾಗಿದೆ.
ಈ ಕ್ರಮದಿಂದ ಸಂಶೋಧನೆಗೆ ಪೂರಕವಾಗಲಿರುವ ಅನಾಮದೇಶ ದತ್ತಾಂಶಗಳು ಕೂಡ ಲಭ್ಯವಾಗಲಿವೆ. ಇದರ ಜತೆಗೆ ಕೆವೈಸಿ ಪ್ರಕ್ರಿಯೆ ಸರಳೀಕರಣವನ್ನೂ ಪ್ರಸ್ತಾಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!