ನಿಯಮ ಉಲ್ಲಂಘಿಸಿ ಪದವಿ ಪ್ರಾಧ್ಯಾಪಕರ ಆಯ್ಕೆ ಪಟ್ಟಿ ಪ್ರಕಟ ಖಂಡನೀಯ


Team Udayavani, Feb 2, 2023, 6:50 PM IST

ನಿಯಮ ಉಲ್ಲಂಘಿಸಿ ಪದವಿ ಪ್ರಾಧ್ಯಾಪಕರ ಆಯ್ಕೆ ಪಟ್ಟಿ ಪ್ರಕಟ ಖಂಡನೀಯ

ಗಂಗಾವತಿ: ರಾಜ್ಯದ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಮುಗಿದು ಆಯ್ಕೆ ಪಟ್ಟಿ ಪ್ರಕಟವಾಗಿದ್ದು ಅಸಂವಿಧಾನವಾಗಿದೆ. ಕಲಂ 371(ಜೆ) ಸಚಿವ ಸಂಪುಟದ ಉಪಸಮಿತಿಯ ಶಿಫಾರಸ್ಸುಗಳನ್ನು ಗಾಳಿ ತೂರಿ ಆಯ್ಕೆ ಪಟ್ಟಿ ಪ್ರಕಟಿಸಿರುವುದು ಖಂಡನೀಯವಾಗಿದೆ. ಆಯ್ಕೆ ಪಟ್ಟಿಯನ್ನು ಕೂಡಲೇ ರದ್ದು ಮಾಡಿ ಉಪಸಮಿತಿ ನಿಯಮಗಳಂತೆ ಆಯ್ಕೆ ಪಟ್ಟಿ ಪ್ರಕಟಿಸುವಂತೆ ಕಲಂ 371(ಜೆ) ಹೋರಾಟ ಸಮಿತಿಯ ಸಂಚಾಲಕರಾದ ಧನರಾಜ ಈ. ರವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳು ಮೆರಿಟ್ ಹೊಂದಿದ್ದರೆ, ಆತನನ್ನು ಸಾಮಾನ್ಯ ಅಭ್ಯರ್ಥಿಯ ಕೋಟಾದಡಿ ಆಯ್ಕೆ ಮಾಡಬೇಕೆನ್ನುವುದು ಸಂವಿಧಾನಾತ್ಮಕ ನಿಯಮವಾಗಿದ್ದರೂ ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದಂತೆ ಕಳೆದೊಂದು ದಶಕದಿಂದ ಈ ನಿಯಮಕ್ಕೆ ವಿರುದ್ಧವಾಗಿ ಸ್ಥಳೀಯ ವೃಂದವನ್ನು ಮಾತ್ರ ಪರಿಗಣಿಸುವ ಮೂಲಕ ಸಾಕಷ್ಟು ಅನ್ಯಾಯ ಮಾಡಲಾಗಿತ್ತು. ಈ ಗೊಂದಲದ ವಿರುದ್ಧ ನಮ್ಮ ಕಾನೂನಾತ್ಮಕ ಹೋರಾಟಗಳು ಹಾಗೂ ನ್ಯಾಯಾಂಗದ ಆದೇಶಗಳ ಪ್ರತಿಫಲವೆಂಬಂತೆ ಸಚಿವ ಬಿ.ಶ್ರೀರಾಮುಲುರವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿಯು ಬೆಳಗಾವಿಯಲ್ಲಿ “ಹುದ್ದೆಗಳ ಆಯ್ಕೆಗೆ ಸಂಬAಧಿಸಿದಂತೆ ಮೊದಲಿಗೆ ಮಿಕ್ಕುಳಿದ ವೃಂದ ಅಥವಾ ನಾನ್ ಕಲ್ಯಾಣ ಕರ್ನಾಟಕ ಆಯ್ಕೆ ಪಟ್ಟಿಯಲ್ಲಿ ಪರಿಗಣಿಸಿ ನಂತರ ಇನ್ನುಳಿದ ಅಥವಾ ಸ್ಥಳೀಯ ವೃಂದದ ಹುದ್ದೆಗಳಿಗೆ ಪರಿಗಣಿಸುವ” ನಿರ್ಣಯವನ್ನು ಕೈಗೊಂಡಿದೆ. 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಅತಿ ಹೆಚ್ಚು ಮೆರಿಟ್ ಹೊಂದಿದ ಅಭ್ಯರ್ಥಿಗಳನ್ನು ಮಿಕ್ಕುಳಿದ ವೃಂದಕ್ಕೆ ಪರಿಗಣಿಸದೇ ಕೇವಲ ಸ್ಥಳೀಯ ವೃಂದದಲ್ಲಿ ಆಯ್ಕೆ ಮಾಡಿದ್ದು, ಕಲಂ 371(ಜೆ) ನಿಯಮಗಳಿಗೆ ವಿರುದ್ಧವಾಗಿದೆ. ಸಚಿವ ಸಂಪುಟದ ಉಪಸಮಿತಿ ನಿರ್ಣಯದ ಸುತ್ತೋಲೆ ಅಥವಾ ಆದೇಶ ಹೊರಡಿಸದೇ ಇರುವುದು ಇದಕ್ಕೆ ಕಾರಣ ಎಂದು ಸಂಬಂಧಪಟ್ಟ ಅಧಿಕಾರಿಗಳಿಂದ ಉತ್ತರ ದೊರೆತಿದ್ದು, ಈ ಬೇಜವಾಬ್ದಾರಿತನದ ಹೊಣೆಯನ್ನು ಸಂಪುಟ ಉಪಸಮಿತಿ ಮತ್ತು ಅಧ್ಯಕ್ಷರು ವಹಿಸಬೇಕಿದ್ದು, ಕೂಡಲೇ ಮಧ್ಯಸ್ಥಿಕೆವಹಿಸಿ ಸರಿಪಡಿಸಲೇಬೇಕು. ಇಲ್ಲದಿದ್ದ ಪಕ್ಷದಲ್ಲಿ ತಾವು ಕಾನೂನಾತ್ಮಕ ಹೋರಾಟ ನಡೆಸಲಾಗುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 371 (ಜೆ) ಕುರಿತ ಬದ್ಧತೆ ಹೊಂದಿದವರನ್ನು ಆಯ್ಕೆ ಮಾಡುವತ್ತ ಗಮನ ಹರಿಸಲೇಬೇಕಾದ ಸಮಯ ಬಂದಿದೆ. ತಪ್ಪಿದ್ದಲ್ಲಿ ಈ ರೀತಿಯ ಅನ್ಯಾಯಗಳು ಮುಂದುವರಿಯುತ್ತಲೇ ಇರುತ್ತವೆ. ಕಲ್ಯಾಣ ಕರ್ನಾಟಕ ಭಾಗದ ಯುವಕರು ಸರಕಾರಿ ಹುದ್ದೆಗಳಿಂದ ವಂಚಿತಿದ್ದು ಸರಕಾರ ಕೂಡಲೇ ಸುತ್ತೋಲೆ ಹೊರಡಿಸಿ ಅನ್ಯಾಯ ಸರಿಪಡಿಸಿ ಪ್ರಾಧ್ಯಾಪಕರ ನೇಮಕಾತಿ ಪಟ್ಟಿ ಪ್ರಕಟಿಸುವಂತೆ ಧನ ರಾಜ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಯಶಸ್ವಿನಿ ಯೋಜನೆಯಡಿ ಜನವರಿ ಒಂದೇ ತಿಂಗಳಲ್ಲೇ 1 ಸಾವಿರಕ್ಕೂ ಅಧಿಕ ಸದಸ್ಯರಿಗೆ ಚಿಕಿತ್ಸೆ

ಟಾಪ್ ನ್ಯೂಸ್

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.