ಮಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಚೂರಿ ಇರಿದು ಸಿಬಂದಿಯ ಬರ್ಬರ ಹತ್ಯೆ
Team Udayavani, Feb 3, 2023, 5:06 PM IST
ಮಂಗಳೂರು : ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿಯನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ರಾಘವ (50) ಅತ್ತಾವರ ನಿವಾಸಿ ಎಂದು ತಿಳಿದು ಬಂದಿದೆ.
ಸಿಸಿ ಕ್ಯಾಮೆರಾದಲ್ಲಿ ಕೃತ್ಯ ದಾಖಲಾಗಿರುವ ಸಾಧ್ಯತೆಯಿದ್ದು, ಪರಿಶೀಲನೆ ನಡೆಯುತ್ತಿದೆ. ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದೆ. ಜ್ಯುವೆಲ್ಲರಿಯಿಂದ ಓರ್ವ ಹೆಲ್ಮೆಟ್ ಮತ್ತು ಮಾಸ್ಕ್ ಧರಿಸಿದ್ದ ವ್ಯಕ್ತಿ ಹೊರಗೆ ಬರುವುದು ಕಂಡು ಬಂದಿದೆ.
ಘಟನೆ ವೇಳೆ ಅಂಗಡಿಯಲ್ಲಿ ಒಬ್ಬರೇ ಇದ್ದರೆಂದು ತಿಳಿದುಬಂದಿದೆ. ದರೋಡೆಯೆ ಬೇರೆ ಕಾರಣವೇ ತಿಳಿದು ಬಂದಿಲ್ಲ.ಅಂಗಡಿ ಮಾಲಕರು ಊಟ ಮಾಡಿ ಬಂದಾಗ ಘಟನೆ ಗಮನಕ್ಕೆ ಬಂದಿದ್ದು, ಘಟನೆ ನಡೆದ ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಜ್ಯುವೆಲ್ಲರಿ ಶಾಪ್ ಮಾಲಕ ಕೇಶವ ಆಚಾರ್ಯ ಅವರು ಪೊಲೀಸರ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದು, ಮಧ್ಯಾಹ್ನ 3.40 ರ ವೇಳೆಗೆ ನಾನು ಊಟ ಮುಗಿಸಿ ಬರುವಾಗ ನನ್ನ ಕಾರು ಇಡುವ ಜಾಗದಲ್ಲಿ ಬೈಕ್ ಒಂದು ನಿಲ್ಲಿಸಲಾಗಿತ್ತು. ಅದನ್ನು ತೇಗಿಸುವ ಸಲುವಾಗಿ ರಾಘವ ಅವರಿಗೆ ಕರೆ ಮಾಡಿದ್ದೆ. ಆಗ ಅವರು ಚೂರಿ ಹಾಕುತ್ತಿದ್ದಾರೆ.. ಎಂದು ಹೇಳಿದ್ದು , ನನ್ನ ಎದುರೇ ಆರೋಪಿ ಪರಾರಿಯಾಗಿದ್ದಾನೆ ಎಂದಿದ್ದಾರೆ.
ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ , ಡಿಸಿಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕರ್ಮಿ ಕುತ್ತಿಗೆಗೆ ಇರಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?