ಪಿಎಸ್ಐ ಕೇಸ್: ಸಿಐಡಿ ಮತ್ತೊಂದು ಚಾರ್ಜ್ಶೀಟ್ ಸಲ್ಲಿಕೆ
Team Udayavani, Feb 3, 2023, 9:51 PM IST
ಬೆಂಗಳೂರು: ಪಿಎಸ್ಐ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದಾಖಲಾಗಿದ್ದ ಪ್ರಕರಣದಲ್ಲಿ ಸಿಐಡಿ ಪೊಲೀಸರು 8 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಪ್ರಕರಣದ ಮೊದಲ ಆರೋಪಿ ಕುಶಾಲ್ ಕುಮಾರ್, ಮಧ್ಯವರ್ತಿ ದರ್ಶನ್ ಗೌಡ, ಮೈಸೂರಿನ ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ (ಆರ್ಪಿಐ) ಮಧು, ನೇಮಕಾತಿ ವಿಭಾಗದ ಸಿಬಂದಿ ಹರ್ಷ, ಶ್ರೀಧರ್, ಶ್ರೀನಿವಾಸ್, ಡಿವೈಎಸ್ಪಿ ಶಾಂತಕುಮಾರ್ ಹಾಗೂ 8ನೇ ಆರೋಪಿಯಾಗಿ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ವಿರುದ್ಧ ಒಟ್ಟು 1,300ಕ್ಕೂ ಅಧಿಕ ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಮಾಗಡಿ ಮೂಲದ ಆರೋಪಿ ಕುಶಾಲ್ ಕುಮಾರ್ಗೆ ಮಧ್ಯವರ್ತಿ ದರ್ಶನ್ ಗೌಡ ಹಾಗೂ ಆರ್ಪಿಐ ಮಧು ಸಂಪರ್ಕಕ್ಕೆ ಸಿಕ್ಕಿ ಪಿಎಸ್ಐ ಆಗಬೇಕಾದರೆ 40 ಲಕ್ಷ ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಪರೀಕ್ಷೆ ಮುನ್ನವೇ 20 ಲಕ್ಷ ರೂ. ಅನ್ನು ಕೆಂಗೇರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಕುಶಾಲ್ ಮಧ್ಯವರ್ತಿಗಳಿಗೆ ಕೊಟ್ಟಿದ್ದ. ಬಳಿಕ ಹಲಸೂರಿನ ಸೈಂಟ್ ಜಾನ್ಸ್ ಗಲ್ಸ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದ. ಉತ್ತರಪತ್ರಿಕೆಯಲ್ಲಿ ಕೇವಲ 11 ಪ್ರಶ್ನೆಗಳಿಗೆ ಮಾತ್ರ ಕುಶಾಲ್ ಕುಮಾರ್ ಉತ್ತರ ಬರೆದಿದ್ದರೂ, 99 ಅಂಕ ಗಳಿಸಿದ್ದ. ಪರೀಕ್ಷೆಯಲ್ಲಿ ಬರೆದಿದ್ದ ಡಾಟ್ ಪೆನ್, ಒಎಂಆರ್ ಶೀಟ್ ನಕಲು ಪ್ರತಿ ಹಾಗೂ ಕಾರ್ಬನ್ ಕಾಪಿಯನ್ನು ಪೊಲೀಸ್ ನೇಮಕಾತಿ ವಿಭಾಗದ ಶ್ರೀನಿವಾಸ್ಗೆ ಕೊಟ್ಟಿದ್ದ. ಶ್ರೀಧರ್, ಶ್ರೀನಿವಾಸ್ ಉತ್ತರಪತ್ರಿಕೆ ಇಡಲಾಗಿದ್ದ ಸ್ಟ್ರಾಂಗ್ ರೂಮ್ಗೆ ಪ್ರವೇಶಿಸಿ, ಕುಶಾಲ್ ಬಳಸಿದ್ದ ಡಾಟ್ ಪೆನ್ ಹಾಗೂ ಒಎಂಆರ್ ಶೀಟ್, ಕಾರ್ಬನ್ ಮೂಲಕ ಉತ್ತರ ಬರೆದಿದ್ದರು ಎಂಬ ಅಂಶವನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ