ಶಿರಹಟ್ಟಿ:ಭಕ್ತರ ಕಾಮಧೇನು ಶ್ರೀಮಂತಗಡ ಹೊಳಲಮದೇವಿ ಜಾತ್ರೋತ್ಸವ

ಮಹಿಷಾಸುರನನ್ನು ತ್ರಿಶೂಲದಿಂದ ಸಂಹಾರ ಮಾಡುತ್ತಿರುವ ಸಿಂಹವಾಹಿನಿಯಾದ ದಿವ್ಯಮೂರ್ತಿಯಿದೆ.

Team Udayavani, Feb 4, 2023, 2:31 PM IST

ಶಿರಹಟ್ಟಿ:ಭಕ್ತರ ಕಾಮಧೇನು ಶ್ರೀಮಂತಗಡ ಹೊಳಲಮದೇವಿ ಜಾತ್ರೋತ್ಸವ

ಶಿರಹಟ್ಟಿ: ತಾಲೂಕಿನ ಶ್ರೀಮಂತಗಡ ಶ್ರೀ ಹೊಳಲಮ್ಮದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.5ರ ರವಿವಾರ ಭಾರತ ಹುಣ್ಣಿವೆ ದಿನ ಮಹಾರಥೋತ್ಸವ ಮತ್ತು ಫೆ.6 ರ ಸೋಮವಾರ ಸಂಜೆ 5ಗಂಟೆಗೆ ಕಡುಬಿನ ಕಾಳಗ ಜರುಗಲಿದೆ.

ರಾಜ್ಯದ ಇತಿಹಾಸದ ಪುಟಗಳಲ್ಲಿ ಶ್ರೀಮಂತಗಡ ಶ್ರೀ ಹೊಳಲಮ್ಮದೇವಿ ವಿಜೃಂಭಿಸಿದ ಮಾಹಿತಿ ಸ್ಪಲ್ಪ ಮಟ್ಟಿಗೆ ಕಾಣಸಿಗುತ್ತಿದೆ. ತನ್ನದೇ ಆದ ಭವ್ಯ ಪರಂಪರೆ ಹೊಂದಿರುವ ನಾಡು ಶ್ರೀಮಂತಗಡ. ಅನೇಕ ಮಹತ್ವದ ಇತಿಹಾಸಗಳು ಬೆಳಕಿಗೆ ಬಾರದೇ ಕಾಲಗರ್ಭದಲ್ಲಿ ಹೂತು ಹೋಗಿವೆ. ಅದರಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳದ ಕ್ಷೇತ್ರ ಹೊಳಲಮ್ಮನ ಗುಡ್ಡವೂ ಒಂದು.

ಶಿವಾಜಿ ಮಹಾರಾಜರಿಗೆ ತನ್ನ ಸೀಮೆಯ ಗಡವೆಂದು ಪ್ರಸಿದ್ಧಿಯಾಗಿತ್ತು. ಹಿಂದೆ ಕಪಿಲ ಮಹರ್ಷಿಗಳು ತಪಗೈದ ಸ್ಥಳ. ಇಂತಹ ಮಹತ್ವದ ಇತಿಹಾಸಗಳನ್ನು ಹುಡುಕಿ ಬೆಳಕಿಗೆ ತರುವ ಪ್ರಯತ್ನವನ್ನು ಪ್ರಾಚ್ಯ ಇಲಾಖೆ ಮಾಡುತ್ತಿದೆ. ಅದರೂ ಸಾಕಷ್ಟು ಬೆಳವಣಿಗೆಯಾಗುತ್ತಿದೆ. ಸರಕಾರದ ಪ್ರತಿನಿಧಿಗಳು ಇಂತಹ ಐತಿಹಾಸಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಬೇಕಾಗಿದೆ ಎಂಬ ಮಾತುಗಳು ಜನರಿಂದ ಕೇಳಿಬರುತ್ತಿವೆ.

ಕೋಟೆ ಸ್ಥಾಪನೆ: ಶ್ರೀಮಂತಗಡದಲ್ಲಿ ಸುಮಾರು 500 ವರ್ಷಗಳ ಹಿಂದೆ 25ಎಕರೆಯಲ್ಲಿ ಕೋಟೆ ಕಟ್ಟಿರುವುದಾಗಿ ಇತಿಹಾಸದಿಂದ ತಿಳಿದುಬರುತ್ತದೆ. ಸದ್ಯ ಸಂಬಂಧಪಟ್ಟ ಇಲಾಖೆಯವರು ಕೋಟೆಯ ಬಗ್ಗೆ ಗಮನ ಹರಿಸಿ ಅಭಿವೃದ್ಧಿ ಮಾಡುತ್ತಿದ್ದಾರೆ.

ಛತ್ರಪತಿ ಶಿವಾಜಿಗೆ ಖಡ್ಗ ಧಾರಣೆ: ದೇವಿ ಛತ್ರಪತಿ ಶಿವಾಜಿ ಮಹಾರಾಜರಿಗೆ ದುಷ್ಟರ ನಿಗ್ರಹ ಮತ್ತು ಶಿಷ್ಟರ ಪರಿಪಾಲನೆಗೋಸ್ಕರ ಖಡ್ಗ ಧಾರಣೆ ಮಾಡಿರುವ ಚಿತ್ರ ದೇವಸ್ಥಾನದ ಮಹಾದ್ವಾರದಲ್ಲಿ ವಿಜೃಂಭಿಸುತ್ತದೆ.

ಶ್ರೀಮಂತಗಡ ಆಳಿದ ಅರಸರು: ಛತ್ರಪತಿ ಶಿವಾಜಿ ಮಹಾರಾಜರು, ಆನೆಗುಂದಿ ಆಳರಸರು, ವಿಜಯನಗರದ ಕೃಷ್ಣದೇವರಾಯರು, ರಣದುಲ್‌ ಖಾನ ಮುಂತಾದ ಅರಸರು ಇಲ್ಲಿ ರಾಜ್ಯಭಾರ ಮಾಡಿದ್ದು ಇತಿಹಾಸದಿಂದ ತಿಳಿದು ಬರುತ್ತದೆ.

ಗರ್ಭಗುಡಿಯಲ್ಲಿ ದೇವಿ ವೈಭವ!: ಗರ್ಭಗುಡಿಯೊಳಗೆ ಪ್ರವೇಶಿಸಿದಾಗ ಹೊಳಲಮ್ಮದೇವಿಯನ್ನು ಕಣ್ತುಂಬ ನೋಡಿದಾಗ ಕಪ್ಪು ದಿವ್ಯ ಏಕಶಿಲೆಯಲ್ಲಿ ಶೋಭಿಸುತ್ತಿರುವ ಹೊಳಲಮ್ಮನದು ಚಾಮುಂಡಿ ಅವತಾರವಾಗಿದೆ. ಅಷ್ಟ ಭುಜಗಳನ್ನು ಹೊಂದಿದ್ದು, ಶಂಖು, ಬಿಲ್ಲು, ದಿವ್ಯಾಸ್ತ್ರ, ತ್ರಿಶೂಲ, ಚಕ್ರ, ಗಧೆ, ಖಡ್ಗ, ಒಂದು ಕೈಯಲ್ಲಿ ರಾಕ್ಷಸನ ಚೆಂಡನ್ನು ಹಿಡಿದು ಮಹಿಷಾಸುರ ಮರ್ದಿನಿ ಅವತಾರದಲ್ಲಿದ್ದಾಳೆ. ಮಹಿಷಾಸುರನನ್ನು ತ್ರಿಶೂಲದಿಂದ ಸಂಹಾರ ಮಾಡುತ್ತಿರುವ ಸಿಂಹವಾಹಿನಿಯಾದ ದಿವ್ಯಮೂರ್ತಿಯಿದೆ.

ಭಕ್ತರಲ್ಲಿ ಭಕ್ತಿ ರಸವನ್ನುಂಟು ಮಾಡುತ್ತದೆ. ಹೊಳಲಮ್ಮನ ದರ್ಶನದಿಂದ ಮಾತ್ರ ಮನಃಶಾಂತಿ ನೆಲೆಸುತ್ತದೆ. ಇಂತಹ ಪವಿತ್ರ ಸ್ಥಳದಲ್ಲಿ ಹೊಳಲಮ್ಮ ದೇವಿ ನೆಲೆನಿಂತು ಭಕ್ತರ ಬಯಕೆಗಳನ್ನು ಈಡೇರಿಸುವ ಕಾಮಧೇನು ಕಲ್ಪವೃಕ್ಷವಾಗಿದ್ದಾಳೆ. ದೇವಸ್ಥಾನದ ಸುತ್ತಮುತ್ತಲೂ ಕರಡಿಗುಡ್ಡ, ಸಂತ ರಾಮದಾಸರ ಮಂದಿರ, ಬಟ್ಟಲು ಬಾವಿ, ಬನ್ನಿ ಮುಡಿಯುವ ಸ್ಥಳ, ಬರಮದೇವರು, ದ್ವಾರಬಾಗಿಲು, ಮದ್ದಿನ ಹೊಂಡ, ಮುಸುರೆ ಹೊಂಡ, ಸ್ನಾನದ ಹೊಂಡ, ಆನೆ ಹೆಜ್ಜೆ ಹೊಂಡ, ಆನೆ ಹೊಂಡ, ಈಶ್ವರ ದೇವಸ್ಥಾನ, ರೇಣುಕಾಚಾರ್ಯ ದೇವಸ್ಥಾನ, ಮಾತಂಗೆಮ್ಮನ ಗುಡಿ, ಸಿಡಿ ಆಡುವ ಕಟ್ಟಿ, ಯೋಗ ಸಿದ್ದಿ ಸ್ಥಳ ಹೀಗೆ ಹಲವಾರು ಪ್ರೇಕ್ಷಣೀಯ ಸ್ಥಳಗಳಿವೆ.

ಇಂತಹ ಇತಿಹಾಸ, ಪರಂಪರೆಯ ಜಾಗೃತ ಸ್ಥಳವಾಗಿರುವ ಶ್ರೀಮಂತಗಡದ ಆದಿಶಕ್ತಿ ಜಗನ್ಮಾತೆ ಶ್ರೀ ಹೊಳಲಮ್ಮದೇವಿ ಜಾತ್ರಾ ಮಹೋತ್ಸವ, ಮಹಾರಥೋತ್ಸವ ಫೆ.5ರಂದು ಅಪಾರ ಭಕ್ತಸಾಗರದ ಮಧ್ಯೆ ಜರುಗಲಿದೆ. ಫೆ. 6 ರಂದು ಕಡುಬಿನ ಕಾಳಗ ಬಹು ವಿಜೃಂಭಣೆಯಿಂದ ಜರುಗಲಿದೆ.

*ಪ್ರಕಾಶ ಶಿ. ಮೇಟಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.