ಉದ್ಯಮಕ್ಕೆ 300 ಎಕರೆ ಭೂಮಿ ಮೀಸಲು


Team Udayavani, Feb 4, 2023, 4:36 PM IST

TDY-19

ಹೊಳೆನರಸೀಪುರ: ತಾಲೂಕಿನ ಗಡಿಭಾಗ ಮತ್ತು ಅರಕಲಗೂಡು ಗಡಿ ಭಾಗದಲ್ಲಿ ಉದ್ಯಮವೊಂದನ್ನು ಆರಂಭಿಸುವ ಸಲುವಾಗಿ 300 ಎಕರೆ ಭೂಮಿಯನ್ನುಮೀಸಲಾಗಿಡಲಾಗಿದ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್‌.ಡಿ.ರೇವಣ್ಣ ನುಡಿದರು.

ತಾಲೂಕಿನ ಗಂಗೂ ರು ಗ್ರಾಮದಲ್ಲಿ ನೂತನವಾಗಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ 66/11 ಕೆವಿ ವಿದ್ಯುತ್‌ ಉಪ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಹುದಿನಗಳಿಂದ ಈ ಭಾಗದಲ್ಲಿ ಉದ್ಯಮವೊಂದನ್ನು ಸ್ಥಾಪಿಸಬೇಕೆಂಬ ತಮ್ಮ ಹಂಬಲಕ್ಕೆ ಇದೀಗ ಕಾಲಕೂಡಿ ಬಂದಿದೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಲಭಿಸಲಿದೆ ಎಂದರು.

2007ರ ಕಾಮಗಾರಿ: ಪ್ರಸ್ತುತ ಈ ವಿದ್ಯುತ್‌ ಪ್ರಸರಣ ಕಾಮಗಾರಿಗೆ ಕಳೆದ 2007ರಲ್ಲಿ ಅಂದು ತಾವು ಸಚಿವರಾಗಿದ್ದ ಅವಧಿಯಲ್ಲಿ ಕ್ರಿಯಾಯೋಜನೆತಯಾರಿಸಿ ಸುಮಾರು 3.86 ಕೋಟಿಯಲ್ಲಿ ಯೋಜನೆ ತಯಾರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು.ಕಾರಣಾಂತರಗಳಿಂದ ಕಾಮ ಗಾರಿ ನಿಧಾನಗತಿಯಲ್ಲಿ ಸಾಗಿ ಇದೀಗ ಪೂರ್ಣಗೊಂಡಿದ್ದು ಶುಕ್ರವಾರ ಚಾಲನೆ ನೀಡಲಾಗುತ್ತಿದೆ ಎಂದರು.

ಉತ್ತಮ ಗುಣಮಟ್ಟದ ವಿದ್ಯುತ್‌ ಪ್ರಸರಣ: ಈ ವಿದ್ಯುತ್‌ ಕೇಂದ್ರ ಆರಂಭದಿಂದ ಗಂಗೂರುಸುತ್ತಮುತ್ತಲ ಗ್ರಾಮಗಳಾದ ಕಳ್ಳಿಕೊಪ್ಪಲು, ದೊಡ್ಡಬ್ಯಾಗತವಳ್ಳಿ ಗಳಿಗೆ ಗುಣಮಟ್ಟದ ವಿದ್ಯುತ್‌ ಸರಬರಾಜು ಮಾಡಲು ಸಹಕಾರಿ ಆಗಲಿದೆ. ಭವಿಷ್ಯದ ಹೊರೆಯನ್ನು ನಿಭಾಯಿಸಲು ಸಹಕಾರಿ ಆಗಲಿದೆ. ವೋಲ್ಟೇಜ್‌ನಲ್ಲಿ ಆಗುವ ಏರುಪೇರನ್ನು ಸರಿಪಡಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.

ನಾಲ್ಕು ಉಪಕೇಂದ್ರಗಳು ಪ್ರಗತಿಯಲ್ಲಿ: ಇದೇ ರೀತಿ ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಇನ್ನೂ ನಾಲ್ಕು ಕಡೆ ಹೆರಗು 9.75 ಕೋಟಿ, ಸೋಮನಹಳ್ಳಿ 6.06 ಕೋಟಿರೂ.ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿದೆ. ಉಳಿದಂತೆ ತಾಲೂಕಿನ ತಟ್ಟೇಕೆರೆ 7.06 ಕೋಟಿವೆಚ್ಚದಲ್ಲಿ ವಿದ್ಯುತ್‌ ಮಾರ್ಗದ ಕಾಮಗಾರಿಗೆ ಟೆಂಡರ್‌ಕರೆಯಲಾಗುತ್ತಿದೆ. ಹಾಗೂ ಪಡುವಲಹಿಪ್ಪೆ ವಿದ್ಯುತ್‌ ಉಪಕೇಂದ್ರ ನಿರ್ಮಿ ಸಲು ಸರ್ಕಾರಿ ಜಾಗ ಗುರುತಿಸುವ ಕೆಲಸ ನಡೆಯುತ್ತಿದೆ ಎಂದರು.

ನಷ್ಟದ ಹಂಚಿನಲ್ಲಿ ವಿದ್ಯುತ್‌ ಇಲಾಖೆ: ತಾವು ಸಚಿವ ಪದವಿಯಿಂದ ಹೊರ ಬಂದ ವೇಳೆ ಬೆಂಗಳೂರು ಬೆಸ್ಕಂನಲ್ಲಿ ಐದು ನೂರು ಕೋಟಿ ರೂ. ಹಣವನ್ನುಠೇವಣಿ ಇರಿಸಿ ಹೊರಬಂದೆ, ಆದರೆ ಅದರ ನಂತರಬಂದ ಸರ್ಕಾರದ ಸಚಿವರುಗಳ ಕಾರ್ಯವೈಖರಿಯಿಂದ ಇಂದು ರಾಜ್ಯದ ವಿದ್ಯುತ್‌ ಪ್ರಸರಣ ನಿಗಮ48 ಸಾವಿರ ಕೋಟಿ ರೂ.ನಷ್ಟದಲ್ಲಿದೆ ಎಂಬ ಮಾಹಿತಿ ಸರ್ಕಾರವೇ ನೀಡಿದೆ. ತಾವು ಸಚಿವರಾಗಿದ್ದ ಅವಧಿಯಲ್ಲಿದ್ದ ಅಧಿಕಾರಿಗಳೇ ಇಂದು ಕರ್ತವ್ಯನಿರ್ವಹಿಸುತ್ತಿದ್ದಾರೆ. ಆದರೆ, ನಷ್ಟ ಮಾತ್ರ ತಗ್ಗಿಸಲು ಆಗಿಲ್ಲ ಎಂದು ರಾಜ್ಯ ಸರ್ಕಾರದ ಸಚಿವರ ಕಾರ್ಯವೈಖರಿಯನ್ನು ಟೀಕಿಸಿದರು.

ನಷ್ಟ ಎಲ್ಲಿಂದ ಭರಿಸುತ್ತೆ ?: ಪ್ರಸ್ತುತ ಬರಲಿರುವ ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಅನ್ನು ಉಚಿತ ವಾಗಿ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ. ಇದರಿಂದ ವರ್ಷಕ್ಕೆ 9 ಸಾವಿರ ಕೋಟಿ ಹೊರೆ ಬೀಳಲಿದೆ. ಈಗಾಗಲೇ 48 ಸಾವಿರಕೋಟಿ ನಷ್ಟದಲ್ಲಿರುವ ನಿಗಮ ಈ 9 ಸಾವಿರ ಕೋಟಿ ಸೇರಿದರೆ ಒಟ್ಟು 57 ಸಾವಿರ ಕೋಟಿ ಅಂದಾಜು ನಷ್ಟ ವಾಗುತ್ತದೆ. ಈ ನಷ್ಟ ಭರಿಸಲು ಇರುವ ಆದಾಯದ ಮೂಲಗಳನ್ನು ಆ ಪಕ್ಷ ಬಹಿರಂಗಪಡಿಸದೇ ಬರೀ ಹುಸಿ ಭರವಸೆ ನೀಡಿದೆಎಂದು ಪರೋಕ್ಷವಾಗಿ ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದರು.

ಕಾರ್ಯಕ್ರಮದಲ್ಲಿ ಅಕ್ಷಕ ಅಭಿಯಂತರ ಮಹೇಶ್‌, ಕೆ.ಗೋಕುಲ್‌, ಸಿದ್ದೇಶ್‌, ಸವಿತಾ, ಅನಿತಾ, ದೊಡ್ಡಬ್ಯಾಗತವಳ್ಳಿ ಗ್ರಾಪಂ ಅಧ್ಯಕ್ಷ ಕಿರಣ್‌ಕುಮಾರ್‌ , ಪಡುವಲಹಿಪ್ಪೆ ಗ್ರಾಪಂ ಅಧ್ಯಕ್ಷ ರಾಧ ಸಂಕನಹಳ್ಳಿ ಅಧ್ಯಕ್ಷೆ ಮಣಿ, ಲೋಕೊಪಯೋಗಿ ಇಲಾಖೆಯ ಹೇಮಂತ್‌,ಗುತ್ತಿಗೆದಾರ ಹರೀಶ್‌ ಇದ್ದರು. ಇದೇ ವೇಳೆಕೆಪಿಟಿಸಿಎಲ್‌ ಅಧಿಕಾರಿಗಳನ್ನು ಮಾಜಿ ಸಚಿವ ರೇವಣ್ಣ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.