ಬ್ಯಾಂಕ್‌ ವಿಧಿಸುವ ಎಸ್‌ಎಂಎಸ್‌ ಸೇವಾ ಶುಲ್ಕ ಸೇವಾ ನ್ಯೂನತೆಯಡಿ ಬಾರದು

ಉಡುಪಿ ಗ್ರಾಹಕರ ಪರಿಹಾರ ಆಯೋಗದ ಮಹತ್ತರ ತೀರ್ಪು

Team Udayavani, Feb 5, 2023, 6:05 AM IST

ಬ್ಯಾಂಕ್‌ ವಿಧಿಸುವ ಎಸ್‌ಎಂಎಸ್‌ ಸೇವಾ ಶುಲ್ಕ ಸೇವಾ ನ್ಯೂನತೆಯಡಿ ಬಾರದು

ಉಡುಪಿ: ರಾಷ್ಟ್ರೀಕೃತ ಬ್ಯಾಂಕ್‌ಗಳು ತನ್ನ ಗ್ರಾಹಕರಿಗೆ ಎಸ್‌.ಎಂ.ಎಸ್‌. ಎಚ್ಚರಿಕೆ ಸಂದೇಶಗಳನ್ನು ಅವರ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಕಳುಹಿಸಿ, ಗ್ರಾಹಕರಿಂದ ಆ ಬಗ್ಗೆ ಅವರ ಖಾತೆಯಿಂದ ಶುಲ್ಕವನ್ನು ಕಡಿತಗೊಳಿಸಿದರೆ ಅದು ಸೇವಾ ನ್ಯೂನತೆಯ ಅಡಿಯಲ್ಲಿ ಬರುವುದಿಲ್ಲವೆಂದು ಉಡುಪಿ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗ ಪ್ರಕರಣವೊಂದರಲ್ಲಿ ಮಹತ್ತರ ತೀರ್ಪು ನೀಡಿದೆ.

ಉಡುಪಿ ಕುಂಜಿಬೆಟ್ಟುವಿನ ಮಧುಸೂದನ ಪ್ರಭು ಅವರು ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ಕೆನರಾ ಬ್ಯಾಂಕ್‌ ಕುಂಜಿಬೆಟ್ಟು ಶಾಖೆಯ ವಿರುದ್ಧ ದೂರು ದಾಖಲಿಸಿ, ತಮಗೆ ಬ್ಯಾಂಕಿನಿಂದ ಪ್ರತೀ 3 ತಿಂಗಳಿಗೊಮ್ಮೆ ಎಸ್‌.ಎಂ.ಎಸ್‌. ಕಳುಹಿಸಿದ ಬಗ್ಗೆ ಶುಲ್ಕವನ್ನು ತಮ್ಮ ಎಸ್‌.ಬಿ. ಖಾತೆಯಿಂದ ಕಡಿತಗೊಳಿಸುತ್ತಿದ್ದಾರೆ ಎಂದು ದೂರು ದಾಖಲಿಸಿ ಪರಿಹಾರ ಕೇಳಿದ್ದರು.

ಈ ಬಗ್ಗೆ ಬ್ಯಾಂಕ್‌ ಪರ ವಕೀಲರು ತಮ್ಮ ವಾದದಲ್ಲಿ ಗ್ರಾಹಕರಿಂದ ಪಡೆಯಲಾಗುವ ಸೇವಾ ಶುಲ್ಕಗಳು ಭಾರತೀಯ ರಿಸರ್ವ್‌ ಬ್ಯಾಂಕಿನ ಮಾರ್ಗಸೂಚಿ ಮತ್ತು ನಿಯಮಗಳ ಪ್ರಕಾರ ಗ್ರಾಹಕರ ಸುರಕ್ಷತೆಗಾಗಿ ಗ್ರಾಹಕರಿಗೆ ಯಾವುದೇ ಅನಾನುಕೂಲವಾಗದೆ ಇರಲೆಂದು ಎಸ್‌.ಎಂ.ಎಸ್‌. ಎಚ್ಚರಿಕೆಯ ಸಂದೇಶಗಳನ್ನು ಕಳುಹಿಸುತ್ತಿದ್ದು, ಆ ಬಗ್ಗೆ ಸಂಬಂಧಪಟ್ಟ ಗ್ರಾಹಕರಿಂದ ಶುಲ್ಕವನ್ನು ಕಡಿತಗೊಳಿಸುತ್ತಾರೆ. ಎಸ್‌.ಎಂ.ಎಸ್‌. ಸಂದೇಶಗಳು ಸೈಬರ್‌ ಕ್ರೈಂ ಅನಂತರ ಮೋಸದ ಜಾಲಗಳನ್ನು ತಡೆಯುವುದರಲ್ಲಿಯೂ ಸಹ ಸಹಕಾರಿಯಾಗುತ್ತದೆ. ಅಲ್ಲದೆ ಗ್ರಾಹಕರು ತಮ್ಮ ಖಾತೆಗಳನ್ನು ಬ್ಯಾಂಕ್‌ನಲ್ಲಿ ತೆರೆಯುವಾಗ ಮೊಬೈಲ್‌ ಸಂಖ್ಯೆಯನ್ನು ಅರ್ಜಿಯಲ್ಲಿ ನಮೂದಿಸಿದಾಗ, ಗ್ರಾಹಕರ ವ್ಯವಹಾರಕ್ಕೆ ಸಂಬಂಧಪಟ್ಟ ಎಲ್ಲ ವಿವರಗಳು ನಿರ್ದಿಷ್ಟ ಸಮಯದೊಳಗೆ ಗ್ರಾಹಕರಿಗೆ ತಲುಪುತ್ತದೆ. ಇದರಿಂದ ಗ್ರಾಹಕರಿಗೆ ಅನುಕೂಲವೇ ವಿನಾ ಅನಾನುಕೂಲವಿರುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಮತ್ತು ರಾಷ್ಟ್ರೀಯ ಗ್ರಾಹಕರ ಆಯೋಗದಲ್ಲಿ ಇತ್ತೀಚಿಗೆ ತೀರ್ಪುಗೊಂಡ ಪ್ರಕರಣಗಳನ್ನು ಆಧರಿಸಿ ವಾದ ಮಂಡಿಸಿದರು. ಬ್ಯಾಂಕಿನ ಪರ ವಾದವನ್ನು ಎತ್ತಿ ಹಿಡಿದ ಆಯೋಗ ಪಿರ್ಯಾದಿದಾರರ ಅರ್ಜಿಯನ್ನು ವಜಾಗೊಳಿಸಿ, ದೂರುದಾರರಿಗೆ ಯಾವುದೇ ಪರಿಹಾರ ಮೊತ್ತವನ್ನು ನೀಡಲು ಬ್ಯಾಂಕ್‌ ಬಾಧ್ಯಸ್ಥವಲ್ಲವೆಂದು ತೀರ್ಪು ನೀಡಿದೆ. ಕೆನರಾ ಬ್ಯಾಂಕಿನ ಪರ ನ್ಯಾಯವಾದಿ ಎಚ್‌. ಆನಂದ ಮಡಿವಾಳ ವಾದಿಸಿದ್ದರು.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.