ಹುಮನಾಬಾದ್: ಕಸಾಯಿ ಖಾನೆಗೆ ದಾಳಿ; 16 ಜಾನುವಾರುಗಳ ರಕ್ಷಣೆ
Team Udayavani, Feb 5, 2023, 10:53 AM IST
ಹುಮನಾಬಾದ: ಸರ್ಕಾರ ಗೋ ರಕ್ಷಣೆ ಕಾಯ್ದೆ ಜಾರಿಗೆ ತಂದರು ಕೂಡ ಪಟ್ಟಣದ ಶಿವಪುರ ಬಡಾವಣೆಯ ಕಸಾಯಿ ಖಾನೆಯಲ್ಲಿ ದನಗಳ ಕತ್ತರಿಸುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸರು ಭಾನುವಾರ ಬೆಳಗಿನ ಜಾವ ದಾಳಿ ನಡೆಸಿದ್ದಾರೆ.
ಪೋಲಿಸ್ ದಾಳಿ ಸಂದರ್ಭದಲ್ಲಿ ಕಸಾಯಿ ಖಾನೆಯಲ್ಲಿ ಹತ್ತಾರು ಜನರು ದನಗಳ ಕತ್ತರಿಸುವ ಕೆಲಸ ನಡೆಸಿದ್ದರು ಎನ್ನಲಾಗಿದೆ. ದಾಳಿ ನಡೆಯುತ್ತಿದ್ದಂತೆಯೇ ಸ್ಥಳದಲ್ಲಿದ್ದ ಜನರು ಪರಾರಿಯಾಗಿದ್ದಾರೆ. ಮೊದಲಿಗೆ 112 ಸಹಾಯವಾಣಿಗೆ ಕರೆ ಮಾಡಿ ಜನರು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ನಂತರ ಪಿಎಸ್ಐ ಮಂಜನಗೌಡ ಪಾಟೀಲ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಲ್ಲದೆ ಸ್ಥಳಕ್ಕೆ ಪಶು ವೈದ್ಯಧಿಕಾರಿ ಡಾ| ಗೋವಿಂದ್, ಡಾ| ಶಾಂತಕುಮಾರ ಸಿದ್ದೇಶ್ವರ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ವಿವಿಧ ಕಾನೂನು ಪ್ರಕ್ರಿಯೆಗಳು ಪೂರ್ಣಗೊಳಿಸಿದರು.
ಈ ಸಂದರ್ಭದಲ್ಲಿ ಆಕಳು, ಎತ್ತು, ಎಮ್ಮೆ ಸೇರಿದಂತೆ ಒಟ್ಟಾರೆ 16 ಜಾನುವಾರುಗಳ ರಕ್ಷಣೆ ಮಾಡಲಾಗಿದ್ದು, ಜಾನುವಾರಗಳನ್ನು ಭಾಲ್ಕಿ ತಾಲೂಕಿನ ಮೈಲಾರ ಗೋ ಶಾಲೆಗೆ ಕಳುಹಿಸಲಾಗುತ್ತದೆ.
ಸ್ಥಳದಲ್ಲಿ ಆರು ಜಾನುವಾರುಗಳು ಕತ್ತರಿಸಿದ ಮಾಂಸ ಚರ್ಮ ಕೊಂಬು ಲಭ್ಯವಾಗಿದೆ ಎಂದು ಡಾ| ಗೋವಿಂದ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!